Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​

ಗುಜ್ಜಲ್ ಪುರುಶೋತ್ತಮ್ ನಿರ್ಮಾಣ ಮಾಡುತ್ತಿರುವ ಹಾಗೂ ನಂದ ಕಿಶೋರ್ ನಿರ್ದೇಶನದ ‘ರಾಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾಗೆ ಶ್ರೇಯಸ್ ನಾಯಕ.

ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​
ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 26, 2021 | 7:31 PM

ಶಿವರಾಜ್​ಕುಮಾರ್​ ಅಂದಾಕ್ಷಣ ನೆನಪಿಗೆ ಬರೋದು ಲಾಂಗ್​. ‘ಓಂ’ ಸಿನಿಮಾದಲ್ಲಿ ಲಾಂಗ್​ ಹಿಡಿದಿದ್ದರು ಶಿವರಾಜ್​ಕುಮಾರ್​. ಈ ಸಿನಿಮಾ ಸೂಪರ್ ಹಿಟ್​ ಆಗಿತ್ತು. ಇದಕ್ಕೆ ಅವರು ಲಾಂಗ್ ಹಿಡಿದಿದ್ದೇ ಕಾರಣ ಎನ್ನುತ್ತಾರೆ ಅನೇಕರು. ಅವರು ಮಚ್ಚು ಹಿಡಿದರೆ ಸಿನಿಮಾ ಹಿಟ್​ ಆಗೋದು ಪಕ್ಕಾ ಎಂಬ ನಂಬಿಕೆ ಅನೇಕ ನಿರ್ದೇಶಕರು ಹಾಗೂ ನಿರ್ಮಾಪಕರಲ್ಲಿದೆ. ಈಗ ಯುವ ನಟ ಶ್ರೇಯಸ್​ಗೆ ಲಾಂಗ್​ ಹಿಡಿಯೋದು ಹೇಗೆ ಎನ್ನುವ ಪಾಠವನ್ನು ಶಿವಣ್ಣ ಮಾಡಿದ್ದಾರೆ.

ಗುಜ್ಜಲ್ ಪುರುಶೋತ್ತಮ್ ನಿರ್ಮಾಣ ಮಾಡುತ್ತಿರುವ ಹಾಗೂ ನಂದ ಕಿಶೋರ್ ನಿರ್ದೇಶನದ ‘ರಾಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾಗೆ ಶ್ರೇಯಸ್ ನಾಯಕ. ಇತ್ತೀಚೆಗೆ ಚಿತ್ರತಂಡ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಿತ್ತು. ಲಾಂಗ್ ಹೇಗೆ ಹಿಡಿಯಬೇಕು, ಕ್ಯಾಮೆರಾ ಮುಂದೆ ಲಾಂಗ್ ಹಿಡಿದು ಹೇಗೆ ಅಭಿನಯಿಸಬೇಕು ಎನ್ನುವುದನ್ನು ಶ್ರೇಯಸ್​​ಗೆ ಶಿವರಾಜ್​ಕುಮಾರ್​ ಹೇಳಿಕೊಟ್ಟಿದ್ದು ವಿಶೇಷವಾಗಿತ್ತು.

‘ರಾಣ’ ಚಿತ್ರಕ್ಕಾಗಿ ಶ್ರೇಯಸ್​ ಇದೇ ಮೊದಲ ಬಾರಿಗೆ ಲಾಂಗ್​ ಹಿಡಿಯುತ್ತಿದ್ದಾರೆ. ಈ ಕಾರಣಕ್ಕೆ ಹಿರಿಯ ನಟ ಶಿವಣ್ಣನ ಬಳಿ ಟ್ರೇನಿಂಗ್​ ಪಡೆದರೆ ಉತ್ತಮ ಎನ್ನುವ ಆಲೋಚನೆ ಚಿತ್ರತಂಡದ್ದಾಗಿತ್ತು. ಹೀಗಾಗಿ, ನಿರ್ದೇಶಕ ನಂದ ಕಿಶೋರ್ ಹಾಗೂ ಶ್ರೇಯಸ್​ ಹ್ಯಾಟ್ರಿಕ್​ ಹೀರೋನನ್ನು ಭೇಟಿ ಆಗಿದ್ದಾರೆ.

‘ಪಾತ್ರ ಎಂದು ಬಂದಾಗ ಎಲ್ಲ ರೀತಿಯ ಕ್ಯಾರೆಕ್ಟರ್​ಗಳನ್ನೂ ಮಾಡಬೇಕು. ನನಗಿಂತ ಉತ್ತಮವಾಗಿ ಮಚ್ಚು ಹಿಡಿಯವವರು ಇದ್ದಾರೆ. ಪ್ರತಿ ಪಾತ್ರಕ್ಕೂ ಒಂದು ಆ್ಯಟಿಟ್ಯೂಡ್​ ಇರುತ್ತದೆ. ಅದು ತುಂಬಾನೇ ಮುಖ್ಯ. ನಾನು ಮಚ್ಚು ಹಿಡಿದೆ, ಅದಕ್ಕೆ ಸಿನಿಮಾ ಹಿಟ್​ ಆಯಿತು ಎಂದು ಹೇಳೋಕಾಗಲ್ಲ. ನಾನು ಸಿನಿಮಾದಲ್ಲಿ ಮಚ್ಚು ಹಿಡಿದು ನಟಿಸ್ತೀನಿ ನಿಜ. ಆದರೆ, ಅದನ್ನು ಹೇಳಿಕೊಡಿ ಎಂದರೆ ಅದು ಸ್ವಲ್ಪ ಕಷ್ಟದ ಕೆಲಸ’ ಎಂದರು ಶಿವರಾಜ್​ಕುಮಾರ್​.

ನಂತರ ಶ್ರೇಯಸ್​ಗೆ ಲಾಂಗ್​ ಹಿಡಿಯೋದು ಹೇಗೆ ಎನ್ನುವ ತರಬೇತಿ ನೀಡಿದರು. ಜತೆಗೆ ಚಿತ್ರತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು.

ಇದನ್ನೂ ಓದಿ: ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ಅಪ್ಪಟ ಕನ್ನಡ ಶೀರ್ಷಿಕೆ ‘ನೀ ಸಿಗೋವರೆಗೂ’; ಮುಹೂರ್ತಕ್ಕೆ ಕಿಚ್ಚ ಅತಿಥಿ

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು