AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ಗೆ ಧಮಾಕಾ; ‘ವೇದ’ ಚಿತ್ರದ ಜತೆ ಸ್ಪರ್ಧೆಗೆ ಇಳಿದ ಸಿನಿಮಾಗಳಿವು

2022 ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಹಲವು ಸಿನಿಮಾಗಳು ಗೆದ್ದು ಬೀಗಿವೆ. ಈಗ ಈ ವರ್ಷ ಕೊನೆಯಾಗುತ್ತಿದೆ. ಈ ಸಂದರ್ಭದಲ್ಲಿ ಒಂದು ಹಿಟ್ ಚಿತ್ರ ಸಿಗಲಿ ಎಂದು ಕನ್ನಡದ ಚಿತ್ರ ಪ್ರೇಮಿಗಳು ಆಶಿಸುತ್ತಿದ್ದಾರೆ.

ಕ್ರಿಸ್​ಮಸ್​ಗೆ ಧಮಾಕಾ; ‘ವೇದ’ ಚಿತ್ರದ ಜತೆ ಸ್ಪರ್ಧೆಗೆ ಇಳಿದ ಸಿನಿಮಾಗಳಿವು
‘ವೇದ’ ಚಿತ್ರದ ಜತೆ ಸ್ಪರ್ಧೆಗೆ ಇಳಿದ ಸಿನಿಮಾಗಳಿವು
TV9 Web
| Edited By: |

Updated on: Dec 22, 2022 | 12:22 PM

Share

ಕ್ರಿಸ್​ಮಸ್ ಸಂದರ್ಭ ಚಿತ್ರರಂಗದ ಪಾಲಿಗೆ ವಿಶೇಷ. ಹೊಸ ವರ್ಷವನ್ನು ಸ್ವಾಗತಿಸಲು ರೆಡಿ ಆಗುವ ಈ ಸಂದರ್ಭಕ್ಕೆ ಸರಿಯಾಗಿ ಥಿಯೇಟರ್​ನಲ್ಲಿ ದೊಡ್ಡ ಬಜೆಟ್​ನ ಹಲವು ಸಿನಿಮಾಗಳು ರಿಲೀಸ್ ಆಗುತ್ತವೆ. ಈ ಬಾರಿಯೂ ಅದು ಮುಂದುವರಿದೆ. ಶಿವರಾಜ್​ಕುಮಾರ್ (Shivarajkumar) ನಟನೆಯ ‘ವೇದ’ (Vedha Movie) ಸೇರಿ ಹಲವು ಸಿನಿಮಾಗಳು ರಿಲೀಸ್​ಗೆ ರೆಡಿ ಇವೆ. ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲೂ ಹಲವು ಚಿತ್ರಗಳು ರಿಲೀಸ್ ಆಗುತ್ತಿವೆ. ಎಲ್ಲಾ ಚಿತ್ರಗಳ ಶೈಲಿ ಬೇರೆ ಬೇರೆ ರೀತಿಯಲ್ಲಿದೆ.

‘ವೇದ’ ಚಿತ್ರ ಡಿಸೆಂಬರ್ 23ರಂದು ತೆರೆಗೆ ಬರುತ್ತಿದೆ. ಶಿವರಾಜ್​ಕುಮಾರ್ ಅವರು ಭಿನ್ನ ಗೆಟಪ್ ಮೂಲಕ ಗಮನ ಸೆಳೆದಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್ ಗಮನ ಸೆಳೆದಿದೆ. 2022 ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಹಲವು ಸಿನಿಮಾಗಳು ಗೆದ್ದು ಬೀಗಿವೆ. ಈಗ ಈ ವರ್ಷ ಕೊನೆಯಾಗುತ್ತಿದೆ. ಈ ಸಂದರ್ಭದಲ್ಲಿ ಒಂದು ಹಿಟ್ ಚಿತ್ರ ಸಿಗಲಿ ಎಂದು ಕನ್ನಡದ ಚಿತ್ರ ಪ್ರೇಮಿಗಳು ಆಶಿಸುತ್ತಿದ್ದಾರೆ. ಎ. ಹರ್ಷ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಹರ್ಷ ಹಾಗೂ ಶಿವಣ್ಣ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ 4ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಕನ್ನಡದ ‘ಹೊಸ ದಿನಚರಿ’ ಕೂಡ ಇದೇ ಸಂದರ್ಭದಲ್ಲಿ ರಿಲೀಸ್ ಆಗುತ್ತಿದೆ. ಬಾಬು ಹಿರಣ್ಣಯ್ಯ, ಅರುಣಾ ಬಾಲರಾಜ್​, ದೀಪಕ್ ಸುಬ್ರಹ್ಮಣ್ಯ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಕೀರ್ತಿ ಶೇಖರ್ ಹಾಗೂ ವಿಶಾಕ್ ಪುಷ್ಪಲತಾ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಗಂಗಾಧರ್ ಸಾಲಿಮಠ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: Shivarajkumar: ‘ವೇದ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್​

ತೆಲುಗಿನಲ್ಲಿ ‘ಧಮಾಕಾ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರಕ್ಕೆ ರವಿತೇಜಾ ಹೀರೋ. ಕನ್ನಡದ ಶ್ರೀಲೀಲಾ ಈ ಚಿತ್ರದ ನಾಯಕಿ. ರಣವೀರ್ ಸಿಂಗ್ ನಟನೆಯ ‘ಸರ್ಕಸ್’ ಸಿನಿಮಾ ಕೂಡ ಡಿಸೆಂಬರ್ 23ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಡಬಲ್ ರೋಲ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಸಾಲು ಸಾಲು ಸೋಲುಗಳಿಂದ ರಣವೀರ್ ಕಂಗೆಟ್ಟಿದ್ದಾರೆ. ವರ್ಷಾಂತ್ಯಕ್ಕೆ ಅವರು ದೊಡ್ಡ ಗೆಲುವನ್ನು ಕಾಣುವ ನಿರೀಕ್ಷೆಯಲ್ಲಿದ್ದಾರೆ. ಈ ಚಿತ್ರದ ಭವಿಷ್ಯವನ್ನು ಶುಕ್ರವಾರ ಪ್ರೇಕ್ಷಕರು ನಿರ್ಧಾರ ಮಾಡಲಿದ್ದಾರೆ. ತೆಲುಗಿನಲ್ಲಿ ‘18 ಪೇಜಸ್​’, ಮಲಯಾಳಂನಲ್ಲಿ ‘ಓ‌ ಮೇರಿ ಲೈಲಾ’, ತಮಿಳಲ್ಲಿ ‘ಎಂಜಾಯ್’  ಮೊದಲಾದ ಸಿನಿಮಾಗಳು ತೆರೆಗೆ ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!