AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಅಜ್ಜಿ ಮನೆಯಲ್ಲಿ ಶಿವಣ್ಣ; ಶಿರಸಿಯ ಹತ್ತಿರ ಮಳಲ್​ಗಾಂವ್​ನಲ್ಲಿ ಫ್ಯಾಮಿಲಿ ಫೋಟೋ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಳಲಗಾಂವ್​ನಲ್ಲಿ ಶಿವಣ್ಣ ಕುಟುಂಬ ತೆರಳಿತ್ತು. ಈ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪತ್ನಿಯ ಅಜ್ಜಿ ಮನೆಯಲ್ಲಿ ಶಿವಣ್ಣ; ಶಿರಸಿಯ ಹತ್ತಿರ ಮಳಲ್​ಗಾಂವ್​ನಲ್ಲಿ ಫ್ಯಾಮಿಲಿ ಫೋಟೋ
ಗೀತಾ ಫ್ಯಾಮಿಲಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 27, 2022 | 8:23 PM

ನಟ ಶಿವರಾಜ್​ಕುಮಾರ್ ಅವರ (Shivarjkumar) ಕೈಯಲ್ಲಿ ಹಲವು ಸಿನಿಮಾಗಳಿವೆ. ಹೊಸಹೊಸ ಚಿತ್ರಗಳನ್ನು ಅವರು ಒಪ್ಪಿಕೊಳ್ಳುತ್ತಲೇ ಇರುತ್ತಾರೆ. ವೇಗವಾಗಿ ಸಿನಿಮಾ ಮಾಡಿ ಮುಗಿಸುವುದರಲ್ಲಿ ಅವರು ಎತ್ತಿದ ಕೈ. ಸಿನಿಮಾ ಕೆಲಸಗಳ ಮಧ್ಯೆ ಕುಟುಂಬಕ್ಕೆ ಹೆಚ್ಚು ಒತ್ತು ನೀಡುತ್ತಾರೆ ಶಿವಣ್ಣ. ಇಂದು (ಮೇ 27) ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪ ಇರುವ ಪತ್ನಿ ಗೀತಾ ಶಿವರಾಜ್​​ಕುಮಾರ್​ (Geetha Shivarjkumar)ಕುಮಾರ್ ಅವರ ಅಜ್ಜಿ ಮನೆಗೆ ಭೇಟಿ ನೀಡಿದ್ದಾರೆ. ಈ ಫ್ಯಾಮಿಲಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದೆ.

ಶಿರಸಿಯಲ್ಲಿ ಭೀಮಣ್ಣ ಅವರಿಗೆ ಸೇರಿದ ಸುಪ್ರಿಯಾ ಇಂಟರ್​ನ್ಯಾಷನಲ್ ಹೋಟೆಲ್ ಉದ್ಘಾಟನೆ ಮೇ 26ರಂದು ನಡೆದಿದೆ. ಇದಕ್ಕಾಗಿ ಶಿವಣ್ಣ ಅವರು ಶಿರಸಿಗೆ ತೆರಳಿದ್ದಾರೆ. ಬಂಗಾರಪ್ಪ ಅವರ ಮಗಳುಗೀತಾ ಶಿವರಾಜ್​ಕುಮಾರ್.  ಬಂಗಾರಪ್ಪ ಮದುವೆ ಆಗಿದ್ದು ಭೀಮಣ್ಣ ಅವರ ಅಕ್ಕನನ್ನು. ಭೀಮಣ್ಣನ ಮನೆ ಗೀತಾ ಶಿವರಾಜ್​ಕುಮಾರ್​ಗೆ ಅಜ್ಜಿಯ ಮನೆ. ಹೀಗಾಗಿ, ಅಜ್ಜಿಮನೆಯಲ್ಲಿ ಒಂದಷ್ಟು ಸಮಯ ಕಳೆದು ಬಂದಿದ್ದಾರೆ ಗೀತಾ ಶಿವರಾಜ್​ಕುಮಾರ್.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಳಲಗಾಂವ್​ನಲ್ಲಿ ಶಿವಣ್ಣ ಕುಟುಂಬ ತೆರಳಿತ್ತು. ಭೀಮಣ್ಣ ಅವರ ಮೂಲ ಮನೆ ಇಲ್ಲಿಯೇ ಇದೆ. ಈ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫ್ಯಾಮಿಲಿ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ
Image
ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

ಇದನ್ನೂ ಓದಿ: ‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?

ಶಿವರಾಜ್​ಕುಮಾರ್ ಅವರು ಮೇ 26ರಂದು ಹೋಟೆಲ್ ಉದ್ಘಾಟನೆ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಹೋಟೆಲ್ ಉದ್ಘಾಟನೆ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ್ದ ಅವರು, ‘ಬೈರಾಗಿ’ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದರು. ‘ಬೈರಾಗಿ ಹುಲಿವೇಷದ ಕುರಿತ ಸಿನಿಮಾ. ಇದು ಪ್ಯಾನ್ ಇಂಡಿಯಾ ಚಿತ್ರವಲ್ಲ. ಕನ್ನಡದಲ್ಲಿ ಮಾತ್ರ ಮೂಡಿ ಬರುತ್ತಿದೆ’ ಎಂದು ಅವರು ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:11 pm, Fri, 27 May 22

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ