AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

ಹಳೇ ಕಟ್ಟಡವೊಂದರಲ್ಲಿ ನಿಖಿಲ್ ಕುಮಾರ್​ ಅವರ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಶೂಟಿಂಗ್ ಸೆಟ್​ಗೆ ಶಿವಣ್ಣ ಭೇಟಿ ನೀಡಿದರು. ಸಿನಿಮಾ ಮಾತ್ರವಲ್ಲದೇ ಒಂದಿಷ್ಟು ವೈಯಕ್ತಿಕ ವಿಚಾರಗಳ ಬಗ್ಗೆಯೂ ಅವರಿಬ್ಬರು ಚರ್ಚೆ ಮಾಡಿದ್ದಾರೆ. ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ನಿರ್ಮಾಣ ಮಾಡುತ್ತಿರುವ ಈ ಸಿನಿಮಾ ಬಗ್ಗೆ ಶಿವಣ್ಣ ಮಾಹಿತಿ ಪಡೆದುಕೊಂಡರು.

ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​
ನಿಖಿಲ್ ಕುಮಾರ್​, ಗೀತಾ ಶಿವರಾಜ್​ಕುಮಾರ್​, ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Sep 16, 2023 | 10:05 AM

Share

ನಟ-ರಾಜಕಾರಣಿ ನಿಖಿಲ್​ ಕುಮಾರ್​ (Nikhil Kumar) ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ಸ್​ ಸಂಸ್ಥೆ ಬಂಡವಾಳ ಹೂಡುತ್ತಿದೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರಕ್ಕೆ ಶೂಟಿಂಗ್​ ಭರದಿಂದ ಸಾಗುತ್ತಿದೆ. ವಿಶೇಷ ಏನೆಂದರೆ, ಈ ಚಿತ್ರದ ಶೂಟಿಂಗ್​ ಸೆಟ್​ಗೆ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಅವರು ಭೇಟಿ ನೀಡಿದ್ದಾರೆ. ಇತ್ತೀಚೆಗೆ ಶಿವಣ್ಣ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಬರುತ್ತಿದ್ದಂತೆಯೇ ಅವರು ನಿಖಿಲ್​ ಕುಮಾರ್​ ನಟನೆಯ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ನೀಡಿದ್ದಾರೆ. ಅವರ ಜೊತೆ ಪತ್ನಿ ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಕೂಡ ಸಾಥ್​ ನೀಡಿದರು.

ಸಾಕಷ್ಟು ದಿನಗಳ ಬಳಿಕ ನಿಖಿಲ್ ಕುಮಾರ್​ ಮತ್ತು ಶಿವರಾಜ್​ಕುಮಾರ್​ ಅವರು ಪರಸ್ಪರ ಭೇಟಿ ಮಾಡಿದ್ದಾರೆ. ಇಬ್ಬರೂ ಒಂದಿಷ್ಟು ಸಮಯ ಒಟ್ಟಿಗೆ ಕಳೆಯುವ ಮೂಲಕ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಒಂದಿಷ್ಟು ವೈಯಕ್ತಿಕ ವಿಚಾರಗಳ ಬಗ್ಗೆಯೂ ಅವರಿಬ್ಬರು ಚರ್ಚೆ ಮಾಡಿದ್ದಾರೆ. ಈ ವೇಳೆ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ನಿರ್ಮಾಣ ಮಾಡುತ್ತಿರುವ ನಿಖಿಲ್​ ಅವರ ಈ ಹೊಸ ಸಿನಿಮಾ ಬಗ್ಗೆ ಶಿವರಾಜ್​ಕುಮಾರ್​ ಅವರು ಮಾಹಿತಿ ಪಡೆದುಕೊಂಡರು. ಆ ಸಂದರ್ಭದ ಫೋಟೋಗಳು ಲಭ್ಯವಾಗಿವೆ.

ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿಗಾಗಿ ಬೆಂಗಳೂರಿಗೆ ಬಂದ ಲೈಕಾ ಕುಟುಂಬ, ಅದ್ಧೂರಿ ಮುಹೂರ್ತ

ಹಳೇ ಕಟ್ಟಡವೊಂದರಲ್ಲಿ ನಿಖಿಲ್ ಕುಮಾರ್​ ಅವರ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಶೂಟಿಂಗ್ ಸೆಟ್​ಗೆ ಶಿವಣ್ಣ ಭೇಟಿ ನೀಡಿದರು. ಅಲ್ಲಿ ಲಿಫ್ಟ್​ ಇರಲಿಲ್ಲ. ಗೀತಾ ಮತ್ತು ಶಿವರಾಜ್​ಕುಮಾರ್​ ಅವರು ಮೆಟ್ಟಿಲು ಹತ್ತಿಕೊಂಡು ಬಂದು ನಿಖಿಲ್ ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ. ಚಿತ್ರತಂಡದವರನ್ನು ಮಾತನಾಡಿಸಿ ಎಲ್ಲರಿಗೂ ಶುಭ ಕೋರಿದ್ದಾರೆ. ಈ ದಂಪತಿ ಪ್ರೀತಿಯಿಂದ ಬಂದು ಶೂಟಿಂಗ್​ ಸೆಟ್​ನಲ್ಲಿ ಕಾಲ ಕಳೆದಿದ್ದು ನಿಖಿಲ್​ ಕುಮಾರ್​ ಅವರಿಗೆ ಖುಷಿ ನೀಡಿತು. ಬಳಿಕ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಇದನ್ನೂ ಓದಿ: ಹಿಂದಿ ಪ್ರೇಕ್ಷಕರ ಮನಗೆದ್ದ ನಿಖಿಲ್​ ಕುಮಾರ್​; ‘ರೈಡರ್’ ಚಿತ್ರಕ್ಕೆ 100 ಮಿಲಿಯನ್​ ವೀಕ್ಷಣೆ

ಡಾ. ರಾಜ್​ಕುಮಾರ್​ ಮತ್ತು ದೇವೇಗೌಡರ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ನಿಖಿಲ್​ ಕುಮಾರ್​ ಅವರ ಕಾಲಕ್ಕೂ ಅದು ಮುಂದುವರಿದಿದೆ. ಶಿವಣ್ಣ ಅವರು ನಿಖಿಲ್​ ನಟನೆಯ ಸಿನಿಮಾ ಸೆಟ್​ಗೆ ಭೇಟಿ ನೀಡಿದ್ದೇ ಅದಕ್ಕೆ ಸಾಕ್ಷಿ. ಪುನೀತ್​ ರಾಜ್​ಕುಮಾರ್ ಅವರು ಕೆಲಸದ ಬಗ್ಗೆ ತೋರುತ್ತಿದ್ದ ಡೆಡಿಕೇಷನ್​ ಎಂದರೆ ನಿಖಿಲ್​ಗೆ ಸ್ಫೂರ್ತಿ. ಇಷ್ಟು ದಿನಗಳ ಕಾಲ ರಾಜಕೀಯದ ಕೆಲಸಗಳ ಬ್ಯುಸಿ ನಡುವೆ ನಿಖಿಲ್​ ಅವರು ಸಿನಿಮಾ ಕೆಲಸಗಳಿಂದ ಕೊಂಚ ಅಂತರ ಕಾಯ್ದುಕೊಂಡಿದ್ದರು. ಈಗ ಮತ್ತೆ ಅವರು ನಟನೆಯಲ್ಲಿ ಸಕ್ರಿಯರಾಗಿದ್ದಾರೆ.

ಇದನ್ನೂ ಓದಿ: ‘ರಾಜಕಾರಣದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದೇನೆ ಎಂಬ ಭಾವನೆ ಯಾರಿಗೂ ಬೇಡ’: ನಿಖಿಲ್​ ಕುಮಾರ್​ ಸ್ಪಷ್ಟನೆ

ಈ ಸಿನಿಮಾಗೆ ಲಕ್ಷ್ಮಣ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಲೈಕಾ ಸಂಸ್ಥೆಯ ಮೊದಲ ಕನ್ನಡ ಸಿನಿಮಾ ಎಂಬುದು ವಿಶೇಷ. ಈ ಸಿನಿಮಾಗೆ ಮೊದಲ ಶೆಡ್ಯೂಲ್ ಚಿತ್ರೀಕರಣ ಕೆಲವೇ ದಿನಗಳ ಹಿಂದೆ ಶುರುವಾಗಿದೆ. ನಿಖಿಲ್​ಗೆ ಜೋಡಿಯಾಗಿ ಯುಕ್ತಿ ತರೇಜಾ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು