AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರಕಾಂಡ’ ಶೂಟಿಂಗ್​ ಮುಗಿಸಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ಕುಮಾರ್​

‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಬೆಳಗಾವಿಯಲ್ಲಿ ನಡೆಯುತ್ತಿದೆ. ಶಿವರಾಜ್​ಕುಮಾರ್​ ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಶೂಟಿಂಗ್​ ಮುಗಿಸಿದ ನಂತರ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಅವರು ತೆರಳಿದ್ದಾರೆ. ದೇವರ ದರ್ಶನ ಪಡೆದು ಬಂದಿದ್ದಾರೆ.

‘ಉತ್ತರಕಾಂಡ’ ಶೂಟಿಂಗ್​ ಮುಗಿಸಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ಕುಮಾರ್​
ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: May 28, 2024 | 9:38 PM

Share

ನಟ ಶಿವರಾಜ್​ಕುಮಾರ್​ (Shivarajkumar) ಅವರು ಒಂದಷ್ಟು ದಿನಗಳ ಕಾಲ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದರು. ಪತ್ನಿ ಗೀತಾ ಶಿವರಾಜ್​ಕುಮಾರ್​ ಪರವಾಗಿ ಚುನಾವಣಾ ಪ್ರಚಾರದಲ್ಲಿ ಅವರು ಭಾಗಿ ಆಗಿದ್ದರು. ಶಿವಮೊಗ್ಗದಲ್ಲಿ ಎಲೆಕ್ಷನ್​ ಮುಗಿದ ನಂತರ ಶಿವಣ್ಣ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದರು. ಬಹುನಿರೀಕ್ಷಿತ ಉತ್ತರಕಾಂಡ’ (Uttarakaanda) ಸಿನಿಮಾದಲ್ಲಿ ಅವರೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಶೂಟಿಂಗ್​ ಮುಗಿದ ಬಳಿಕ ಶಿವರಾಜ್​ಕುಮಾರ್​ ಅವರು ಸವದತ್ತಿ ಯಲ್ಲಮ್ಮ (Savadatti Yallamma) ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋಗಳು ಲಭ್ಯವಾಗಿವೆ.

‘ಉತ್ತರಕಾಂಡ’ ಸಿನಿಮಾದಲ್ಲಿ ಉತ್ತರ ಕರ್ನಾಟಕದ ಕಹಾನಿ ಇರಲಿದೆ. ಹಾಗಾಗಿ ಈ ಸಿನಿಮಾದ ಚಿತ್ರೀಕರಣವನ್ನು ಬೆಳಗಾವಿಯಲ್ಲಿ ಮಾಡಲಾಗುತ್ತಿದೆ. ಈ ಸಿನಿಮಾದ ಶೂಟಿಂಗ್​ ಮುಗಿಸಿಕೊಂಡ ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್ ಅವರು ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿದ್ದಾರೆ. ಅವರ ಪಾಲಿಗೆ ಈ ಕ್ಷೇತ್ರ ಅದೃಷ್ಟ. ಈ ಮೊದಲು ‘ಶ್ರೀರಾಮ್’, ‘ಮೈಲಾರಿ’ ಮುಂತಾದ ಸಿನಿಮಾಗಳಿಗೂ ಸವದತ್ತಿ ಯಲ್ಲಮ್ಮ ತಾಯಿಯ ಆಶೀರ್ವಾದ ಸಿಕ್ಕಿತ್ತು.

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್​ ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ‘ಕೆ.ಆರ್.ಜಿ. ಸ್ಟುಡಿಯೋಸ್’ ಮೂಲಕ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ರೋಹಿತ್ ಪದಕಿ ಅವರ ನಿರ್ದೇಶನದಲ್ಲಿ ‘ಉತ್ತರಕಾಂಡ’ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಆ್ಯಕ್ಷನ್ ಡ್ರಾಮಾ ಇರಲಿದೆ.

ಇದನ್ನೂ ಓದಿ: ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ

ಪಾತ್ರವರ್ಗದ ಕಾರಣದಿಂದ ‘ಉತ್ತರಕಾಂಡ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಶಿವರಾಜ್​ಕುಮಾರ್, ಡಾಲಿ‌ ಧನಂಜಯ, ಐಶ್ವರ್ಯಾ ರಾಜೇಶ್, ದಿಗಂತ್ ಮಂಚಾಲೆ, ಭಾವನಾ‌ ಮೆನನ್, ರಂಗಾಯಣ ರಘು, ವಿಜಯ್ ಬಾಬು ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ವಿಶೇಷ ಏನೆಂದರೆ, ಬಾಲಿವುಡ್​ನ ಜನಪ್ರಿಯ ಗಾಯಕ ಕಮ್​ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಅವರು ಸಂಗೀತ ನೀಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಅವರು ಮುಖ್ಯ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ