AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಮ್ಮನಾಗಿ ಎಷ್ಟೋ ಬಾರಿ ಶಕ್ತಿ ತುಂಬಿದ್ದೀಯ’; ರಾಘವೇಂದ್ರ ರಾಜ್​ಕುಮಾರ್ ಬರ್ತ್​ಡೇಗೆ ಶಿವಣ್ಣ ಭಾವುಕ ಪೋಸ್ಟ್

ಶಿವರಾಜ್​ಕುಮಾರ್ ಹಾಗೂ ರಾಘವೇಂದ್ರ ರಾಜ್​ಕುಮಾರ್ ಮಧ್ಯೆ ಸಾಕಷ್ಟು ಅನ್ಯೋನ್ಯತೆ ಇದೆ. ಪುನೀತ್ ಅವರನ್ನು ಕಳೆದುಕೊಂಡಾಗ ನೋವಿನಲ್ಲಿದ್ದರೂ ಅಣ್ಣನ ಸಮಾಧಾನ ಮಾಡುವ ಕೆಲಸವನ್ನು ರಾಘಣ್ಣ ಮಾಡಿದ್ದರು. ಈ ಕಾರಣದಿಂದಲೇ ಶಿವರಾಜ್​ಕುಮಾರ್ ಅವರು ಈ ಮಾತನ್ನು ಹೇಳಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ತಮ್ಮನಾಗಿ ಎಷ್ಟೋ ಬಾರಿ ಶಕ್ತಿ ತುಂಬಿದ್ದೀಯ’; ರಾಘವೇಂದ್ರ ರಾಜ್​ಕುಮಾರ್ ಬರ್ತ್​ಡೇಗೆ ಶಿವಣ್ಣ ಭಾವುಕ ಪೋಸ್ಟ್
ವಿಜಯ್ ರಾಘವೇಂದ್ರ-ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Aug 15, 2023 | 8:55 AM

Share

ಡಾ. ರಾಜ್​ಕುಮಾರ್ ಅವರ ಮಗ, ನಟ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರಿಗೆ ಇಂದು (ಆಗಸ್ಟ್ 15) ಜನ್ಮದಿನದ ಸಂಭ್ರಮ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಅನೇಕರು ರಾಘವೇಂದ್ರ ರಾಜ್​ಕುಮಾರ್​ಗೆ ಶುಭಾಶಯ ತಿಳಿಸುತ್ತಿದ್ದಾರೆ. ರಾಘವೇಂದ್ರ ರಾಜ್​ಕುಮಾರ್ ಅವರಿಗೆ ಶಿವಣ್ಣ (Shivarajkumar) ಕೂಡ ಬರ್ತ್​ಡೇ ವಿಶ್ ತಿಳಿಸಿದ್ದಾರೆ. ‘ತಮ್ಮನಾಗಿ ಎಷ್ಟೋ ಬಾರಿ ಶಕ್ತಿ ತುಂಬಿದ್ದೀಯ’ ಎಂದು ಅವರು ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ.

ರಾಘವೇಂದ್ರ ರಾಜ್​ಕುಮಾರ್​ಗೆ ಹುಟ್ಟುಹಬ್ಬದ ಶುಭಾಶ ತಿಳಿಸಿ ಟ್ವೀಟ್ ಮಾಡಿರುವ ಶಿವರಾಜ್​ಕುಮಾರ್ ಅವರು, ‘ತಮ್ಮನಾಗಿ ನನಗೆ ಎಷ್ಟೋ ಬಾರಿ ಶಕ್ತಿ ತುಂಬಿದ್ದೀಯ. ಕುಟುಂಬದ ಪ್ರತಿಯೊಬ್ಬರ ಜೊತೆಗೂ ಸ್ಫೂರ್ತಿಯಾಗಿ ನಿಂತಿದ್ದೀಯ. ಯಶಸ್ಸು, ಆಯಸ್ಸು, ಸುಖ, ಸಂತೋಷ, ಎಲ್ಲವೂ ನಿನ್ನ ಪಾಲಿಗಿರಲಿ. ಹುಟ್ಟು ಹಬ್ಬದ ಶುಭಾಶಯಗಳು ರಾಘು’ ಎಂದು ಬರೆದುಕೊಂಡಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ರಾಘವೇಂದ್ರ ರಾಜ್​ಕುಮಾರ್ ಮಧ್ಯೆ ಸಾಕಷ್ಟು ಅನ್ಯೋನ್ಯತೆ ಇದೆ. ಪುನೀತ್ ಅವರನ್ನು ಕಳೆದುಕೊಂಡಾಗ ನೋವಿನಲ್ಲಿದ್ದರೂ ಅಣ್ಣನ ಸಮಾಧಾನ ಮಾಡುವ ಕೆಲಸವನ್ನು ರಾಘಣ್ಣ ಮಾಡಿದ್ದರು. ಈ ಕಾರಣದಿಂದಲೇ ಶಿವರಾಜ್​ಕುಮಾರ್ ಅವರು ಈ ಮಾತನ್ನು ಹೇಳಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಶಿವಣ್ಣ ಮಾಡಿರೋ ಟ್ವೀಟ್

ಇದನ್ನೂ ಓದಿ: ಎದೆಯೊಳಗಿದ್ದ ಅಪ್ಪುವನ್ನು ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡ ರಾಘವೇಂದ್ರ ರಾಜ್​ಕುಮಾರ್ 

ರಾಘವೇಂದ್ರ ರಾಜ್​ಕುಮಾರ್ ಅವರು ರಾಜ್​ಕುಮಾರ್ ಅವರ ಮಗ. ಹೀಗಾಗಿ ಬಾಲ ಕಲಾವಿದನಾಗಿ ನಟಿಸಲು ಅವರಿಗೆ ಸುಲಭದಲ್ಲಿ ಅವಕಾಶ ದೊರೆಯಿತು. ‘ಶ್ರೀ ಶ್ರೀನಿವಾಸ ಕಲ್ಯಾಣ’ ಸೇರಿ ಎರಡು ಸಿನಿಮಾಗಳಲ್ಲಿ ಚೈಲ್ಡ್ ಆರ್ಟಿಸ್ಟ್ ಆಗಿ ನಟಿಸಿದರು. ‘ಚಿರಂಜೀವಿ ಸುಧಾಕರ್’ ಸಿನಿಮಾ ಮೂಲಕ ರಾಘವೇಂದ್ರ ರಾಜ್​ಕುಮಾರ್ ಹೀರೋ ಆದರು. ಈ ಸಿನಿಮಾ 1988ರಲ್ಲಿ ರಿಲೀಸ್ ಆಯಿತು. 1989ರಲ್ಲಿ ರಿಲೀಸ್ ಆದ ‘ನಂಜುಂಡಿ ಕಲ್ಯಾಣ’ ಸಿನಿಮಾ ಸೂಪರ್ ಹಿಟ್ ಆಯಿತು. ನಂತರ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪುನೀತ್ ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್’ ಚಿತ್ರದಲ್ಲಿ ರಾಘಣ್ಣ ಅತಿಥಿ ಪಾತ್ರ ಮಾಡಿದ್ದರು. ಸದ್ಯ ಕೆಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:54 am, Tue, 15 August 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್