AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ ಹುಟ್ಟಿದ ಬಳಿಕ ಸಂಜೆಯಿಂದ ಬೆಳಗ್ಗಿನವರೆಗೆ ಸ್ವೀಟ್ ಹಂಚಿದ್ದ ರಾಜ್​ಕುಮಾರ್

Shivarajkumr Birthday: ಶಿವರಾಜ್ ಕುಮಾರ್ ಅವರು ಇಂದು ತಮ್ಮ 63ನೇ ಜನ್ಮದಿನ ಆಚರಿಸುತ್ತಿದ್ದಾರೆ. ಕ್ಯಾನ್ಸರ್‌ನಿಂದ ಚೇತರಿಸಿಕೊಂಡ ನಂತರ ಈ ಹುಟ್ಟುಹಬ್ಬ ಅವರಿಗೆ ವಿಶೇಷವಾಗಿದೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಸ್ನೇಹಿತರು ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸುತ್ತಿದ್ದಾರೆ. ರಾಜ್ ಕುಮಾರ್ ಅವರ ಮಗನಾಗಿ ಹುಟ್ಟಿದ ಶಿವಣ್ಣ ಅವರ ಜೀವನದ ಕೆಲವು ಆಸಕ್ತಿಕರ ವಿವರಗಳು ಈ ಲೇಖನದಲ್ಲಿವೆ.

ಶಿವಣ್ಣ ಹುಟ್ಟಿದ ಬಳಿಕ ಸಂಜೆಯಿಂದ ಬೆಳಗ್ಗಿನವರೆಗೆ ಸ್ವೀಟ್ ಹಂಚಿದ್ದ ರಾಜ್​ಕುಮಾರ್
ರಾಜ್​ಕುಮಾರ್ ಕುಟುಂಬ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 12, 2025 | 7:19 AM

Share

ಶಿವರಾಜ್​ಕುಮಾರ್ ಅವರಿಗೆ ಇಂದು (ಜುಲೈ 11) ಜನ್ಮದಿನ. ಅವರಿಗೆ ಎಲ್ಲರೂ ಸೋಶಿಯಲ್ ಮೀಡಿಯಾ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಅವರಿಗೆ ಈಗ 63ನೇ ವರ್ಷ. ಶಿವಣ್ಣ ಹೆಸರಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳು ಕೂಡ ನಡೆಯುತ್ತಿವೆ. ಒಂದು ವಿಶೇಷ ಎಂದರೆ ಶಿವರಾಜ್​ಕುಮಾರ್ (Shivarajkumar) ಹುಟ್ಟಿದಾಗ ರಾಜ್​ಕುಮಾರ್ ಅವರು ಸಂಭ್ರಮಿಸಿದ್ದರು. ಏಕೆಂದರೆ ಮದುವೆ ಆಗಿ 9 ವರ್ಷಗಳ ಬಳಿಕ ಶಿವಣ್ಣ ಹುಟ್ಟಿದ್ದರು. ವೀಕೆಂಡ್ ವಿತ್ ರಮೇಶ್​ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರು ಶಿವರಾಜ್​ಕುಮಾರ್.

ರಾಜ್​ಕುಮಾರ್ ಹಾಗೂ ಪಾರ್ವತಮ್ಮ ವಿವಾಹ ಆಗಿದ್ದು 1953ರ ಜೂನ್ 25ರಂದು. ಎಷ್ಟೇ ಪ್ರಯತ್ನಿಸದರೂ ದಂಪತಿಗೆ ಮಗು ಹುಟ್ಟಿರಲೇ ಇಲ್ಲ. ಶಿವರಾಜ್​ಕುಮಾರ್ ಅವರು 1962ರ ಜುಲೈ12ರಂದು ಜನಿಸಿದರು. ಆ ವಿಚಾರ ರಾಜ್​ಕುಮಾರ್​ಗೆ ಸಾಕಷ್ಟು ಖುಷಿ ನೀಡಿತು. ಅವರ ಖುಷಿಗೆ ಅಂದು ಪಾರವೇ ಇರಲಿಲ್ಲ. ರಾಜ್​ಕುಮಾರ್ ಕುಣಿದು ಕುಪ್ಪಳಿಸಿದ್ದರು.

ಶಿವರಾಜ್​ಕುಮಾರ್ ಜನಿಸಿದ್ದು ಸಂಜೆ ವೇಳೆಗೆ. ಬೆಳಿಗ್ಗೆ 5 ಗಂಟೆವರೆಗೆ ರಾಜ್​ಕುಮಾರ್ ಸಿಹಿ ಹಂಚಿದ್ದರಂತೆ. ‘ನಾನು ಹುಟ್ಟಿದಾಗ ಅಪ್ಪಾಜಿ ತುಂಬಾನೇ ಸಂತೋಷಪಟ್ಟರಂತೆ. ಬೆಳಿಗ್ಗೆವರೆಗೆ ಅಪ್ಪಾಜಿ ಸ್ವೀಟ್ ಹಂಚಿದ್ದರಂತೆ’ ಎಂದು ಶಿವರಾಜ್​ಕುಮಾರ್ ಹೇಳಿದ್ದರು.

ಇದನ್ನೂ ಓದಿ
Image
ದಳಪತಿ ವಿಜಯ್ ಚಿತ್ರದಲ್ಲಿ ನನ್ನ ಪಾತ್ರ ವೇಸ್ಟ್ ಮಾಡಿದರು; ಸಂಜಯ್ ದತ್ ಬೇಸರ
Image
ನಟ ದರ್ಶನ್ ಬಳಿಯೂ ಇತ್ತು ಹಮ್ಮರ್; ಮಾರಿದ್ದು ಏಕೆ?
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ದೊಡ್ಡ ತಿರುವು; ಭೂಮಿಕಾಗೆ ಅವಳಿ ಮಕ್ಕಳು
Image
‘ಕೆಡಿ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಬಾಲಿವುಡ್ ಬಗ್ಗೆ ಸಂಜಯ್ ದತ್ ಬೇಸರ

‘ನಮ್ಮ ಮನೆಯಲ್ಲಿ 20-25 ಜನರು ಇರುತ್ತಿದ್ದರು. ಎಲ್ಲರೂ ಕಸಿನ್ಸ್. ಬಟ್ಟೆ ತೆಗೆದುಕೊಳ್ಳಲು ಒಟ್ಟಿಗೆ ಹೋಗುತ್ತಿದ್ದೆವು. ನಂಗೆ ಹಲವು ತಾಯಂದಿರು. ಅದರಲ್ಲಿ ನಾಗಮ್ಮ ಕೂಡ ಒಬ್ಬರು. ಅವರು ನನ್ನನ್ನು ಚಿಕ್ಕವಯಸ್ಸಲ್ಲಿ ಸಾಕಿ ಬೆಳೆಸಿದ್ದಾರೆ’ ಎಂದು ಶಿವಣ್ಣ ಹೇಳಿದ್ದರು. ನಾಗಮ್ಮ ಈಗಲೂ ಬದುಕಿದ್ದಾರೆ. ಅವರು ರಾಜ್​ಕುಮಾರ್ ಹುಟ್ಟೂರಾದ ಗಾಜನೂರಿನಲ್ಲಿ ಇರುತ್ತಾರೆ. ಪುನೀತ್ ಸತ್ತ ವಿಚಾರ ಅವರಿಗೆ ಇನ್ನೂ ತಿಳಿದಿಲ್ಲ. ಅವರಿಗೆ ಆಘಾತ ಆಗುತ್ತದೆ ಎಂಬ ಕಾರಣಕ್ಕೆ ಆ ವಿಚಾರವನ್ನು ಇನ್ನೂ ಹಾಗೆಯೇ ಮುಚ್ಚಿಡಲಾಗಿದೆ. ಅವರನ್ನು ಕಂಡರೆ ಶಿವಣ್ಣಗೆ ಸಾಕಷ್ಟು ಪ್ರೀತಿ.

ಇದನ್ನೂ ಓದಿ: 666 ಆಪರೇಷನ್ ಡ್ರೀಮ್ ಥಿಯೇಟರ್‌: ಶಿವರಾಜ್‌ಕುಮಾರ್ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಶಿವಣ್ಣಗೆ ಈಗ 63 ವರ್ಷ ವಯಸ್ಸು. ಅವರು ಕ್ಯಾನ್ಸರ್ ಗೆದ್ದು ಬಂದಿದ್ದಾರೆ. ಹೀಗಾಗಿ, ಈ ವರ್ಷದ ಬರ್ತ್​ಡೇ ಅವರಿಗೆ ವಿಶೇಷ ಎನಿಸಿಕೊಂಡಿದೆ. ಅವರ ಧೈರ್ಯವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಅವರನ್ನು ಹೊಗಳುವ ಕೆಲಸ ಆಗಿದೆ. ಇಂದು ಅಭಿಮಾನಿಗಳ ಜೊತೆ ಸೇರಿ ಅವರು ಹುಟ್ಟುಹಬ್ಬ ಆಚರಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:19 am, Sat, 12 July 25

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ