AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ರಸ್ತೆ ನಿಮ್​ ಅಪ್ಪಂದಾ?’.. ಹಾಗೆ ಕ್ಯಾಮೆರಾ ತಿರುಗಿದ್ರೆ; ಇದು ಶಿವಣ್ಣನ ಸಿನಿಮಾದ ಗೂಸ್​ಬಂಪ್ಸ್ ದೃಶ್ಯ  

ಇಂದು (ಮೇ 24) ರಾಜ್​ಕುಮಾರ್ ಜನ್ಮದಿನ. ಅವರ ಹೆಸರಿನಲ್ಲಿ ಒಳ್ಳೆಯ ಕೆಲಸಗಳು ನಡೆಯುತ್ತಿವೆ. ಬೆಳಿಗ್ಗೆ ಕುಟುಂಬದವರು ಬಂದು ರಾಜ್ಕುಮಾರ್ ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅಭಿನಯದ 'ಕಡ್ಡಿಪುಡಿ' ಚಿತ್ರದ ಒಂದು ದೃಶ್ಯ ವೈರಲ್ ಆಗಿದೆ .

‘ಈ ರಸ್ತೆ ನಿಮ್​ ಅಪ್ಪಂದಾ?’.. ಹಾಗೆ ಕ್ಯಾಮೆರಾ ತಿರುಗಿದ್ರೆ; ಇದು ಶಿವಣ್ಣನ ಸಿನಿಮಾದ ಗೂಸ್​ಬಂಪ್ಸ್ ದೃಶ್ಯ  
ರಾಜ್​​ಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on:Apr 24, 2025 | 2:06 PM

ಶಿವರಾಜ್​ಕುಮಾರ್, ಪುನೀತ್ ರಾಜ್​ಕುಮಾರ್ (Puneeth Rajkumar) ಸಿನಿಮಾಗಳಲ್ಲಿ ಅವರ ಕುಟುಂಬದ ಪರಂಪರೆ ಹೇಳುವ ಅನೇಕ ಡೈಲಾಗ್​ಗಳಿವೆ. ಈ ರೀತಿಯ ಡೈಲಾಗ್​ ಅಭಿಮಾನಿಗಳು ತುಂಬಾನೇ ಇಷ್ಟಪಡುತ್ತಾರೆ. ಈ ಕಾರಣಕ್ಕೆ ನಿರ್ದೇಶಕರು ಕೂಡ ಈ ರೀತಿಯ ಡೈಲಾಗ್​ನ ಇಡಲು ಪ್ರಯತ್ನಿಸುತ್ತಾರೆ. ಅನೇಕ ಸಿನಿಮಾಗಳಲ್ಲಿ ಈ ರೀತಿಯ ಘಟನೆಗಳು ಇವೆ. ಶಿವರಾಜ್​ಕುಮಾರ್ ನಟನೆಯ ಸಿನಿಮಾ ಒಂದರ ದೃಶ್ಯ ಈಗ ವೈರಲ್ ಆಗಿದೆ. ಇದರಲ್ಲಿ ಬರೋ ಗೂಸ್​ಬಂಪ್ಸ್ ದೃಶ್ಯ ಅನೇಕರಿಗೆ ಇಷ್ಟ. ಆ ಬಗ್ಗೆ ಇಲ್ಲಿದೆ ವಿವರ.

ಶಿವರಾಜ್​ಕುಮಾರ್ ಅವರು ‘ಕಡ್ಡಿಪುಡಿ’ ಸಿನಿಮಾದಲ್ಲಿ ನಟಿಸಿದ್ದರು. ರಾಧಿಕಾ ಪಂಡಿತ್ ಅವರು ಈ ಚಿತ್ರಕ್ಕೆ ನಾಯಕಿ. ರಂಗಾಯಣ ರಘು ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಆರಂಭದಲ್ಲಿ ರೌಡಿ ಆಗಿರೋ ಕಥಾ ನಾಯಕ ನಂತರ ಬದಲಾಗುತ್ತಾನೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ. 2013ರಲ್ಲಿ ರಿಲೀಸ್ ಆದ ಈ ಚಿತ್ರವನ್ನು ದುನಿಯಾ ಸೂರಿ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ
Image
ಮಂತ್ರಾಲಯದ ಗರ್ಭಗುಡಿಯಲ್ಲಿ ಮಲಗಿದ್ದ ರಾಜ್​ಕುಮಾರ್; ಆ ಬಳಿಕ ನಡೆದಿದ್ದು ಏನು
Image
ರಾಜ್​ಕುಮಾರ್ ಮೊದಲ ಆಡಿಷನ್ ಹೇಗಿತ್ತು? ವಿವರಿಸಿದ್ದ ಅಣ್ಣಾವ್ರು
Image
ಪಹಲ್ಗಾಮ್ ದಾಳಿ ಬಗ್ಗೆ ಪಾಕ್ ನಟನ ಅಭಿಪ್ರಾಯವೇನು? ದೂಷಿಸಿದ್ದು ಯಾರನ್ನು?
Image
ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್ ಏನು?

ರೌಡಿಸಂ ಕಥೆ ಹೇಳಲು ದುನಿಯಾ ಸೂರಿ ಎತ್ತಿದ ಕೈ. ಈ ಚಿತ್ರದಲ್ಲೂ ಅಂಥದ್ದೇ ಕಥೆ ಹೇಳಲಾಗಿತ್ತು. ಇದರಲ್ಲಿ ಬರೋ ದೃಶ್ಯ ಒಂದು ಗಮನ ಸೆಳೆದಿತ್ತು. ಕಡ್ಡಿಪುಡಿ (ಶಿವಣ್ಣ) ಹಾಗೂ ಜಿಂಕೆ (ರಂಗಾಯಣ ರಘು) ಕಾರಲ್ಲಿ ಹೋಗುತ್ತಾ ಇರುತ್ತಾರೆ. ಈ ವೇಳೆ ಕೆಲವರು ಬೈಕ್​ನಲ್ಲಿ ಅಡ್ಡ ಆಗುತ್ತಾರೆ.

‘ಗಾಡಿ ಓಡ್ಸೋಕೆ ಬರಲ್ವ’ ಎಂದು ಬೈಕ್​ನವರು ಕೇಳುತ್ತಾರೆ. ‘ನೋಡ್ಕಂಡು ಹೋಗು’ ಎಂದು ಕಡ್ಡಿಪುಡಿ ಹೇಳುತ್ತಾನೆ. ‘ನಿಮ್ ಅಪ್ಪಂದಾ ರೋಡು’ ಎಂದು ಕೇಳಿ ಹೋಗುತ್ತಾರೆ. ಈ ವೇಳೆ ಕ್ಯಾಮೆರಾ ‘ಡಾ ||ರಾಜ್​ಕುಮಾರ್ ರಸ್ತೆ’ ಎಂಬ ಕಡೆ ತಿರುಗುತ್ತದೆ. ಈ ದೃಶ್ಯಕ್ಕೆ ಭರ್ಜರಿ ಸಿಳ್ಳೆ ಬಿದ್ದಿದ್ದವು.

ಇದನ್ನೂ ಓದಿ: ‘ನನ್ನ ಸುದೀಪ್ ಮಧ್ಯೆ ಸಣ್ಣಪುಟ್ಟ ಮನಸ್ತಾಪ ಆಗಿರಬಹುದು, ಆದರೆ ವೈರತ್ವ ಬೆಳೆದಿಲ್ಲ’; ಶಿವರಾಜ್​ಕುಮಾರ್

ಇಂದು (ಏಪ್ರಿಲ್ 24) ರಾಜ್​ಕುಮಾರ್ ಜನ್ಮದಿನ. ಅವರ ಹೆಸರಿನಲ್ಲಿ ಒಳ್ಳೆಯ ಕೆಲಸಗಳು ನಡೆಯುತ್ತಿವೆ. ಬೆಳಿಗ್ಗೆ ಕುಟುಂಬದವರು ಬಂದು ರಾಜ್​ಕುಮಾರ್ ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದ್ದಾರೆ. ರಾಜ್​ಕುಮಾರ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:50 pm, Thu, 24 April 25

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ