AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ರಸ್ತೆ ನಿಮ್​ ಅಪ್ಪಂದಾ?’.. ಹಾಗೆ ಕ್ಯಾಮೆರಾ ತಿರುಗಿದ್ರೆ; ಇದು ಶಿವಣ್ಣನ ಸಿನಿಮಾದ ಗೂಸ್​ಬಂಪ್ಸ್ ದೃಶ್ಯ  

ಇಂದು (ಮೇ 24) ರಾಜ್​ಕುಮಾರ್ ಜನ್ಮದಿನ. ಅವರ ಹೆಸರಿನಲ್ಲಿ ಒಳ್ಳೆಯ ಕೆಲಸಗಳು ನಡೆಯುತ್ತಿವೆ. ಬೆಳಿಗ್ಗೆ ಕುಟುಂಬದವರು ಬಂದು ರಾಜ್ಕುಮಾರ್ ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅಭಿನಯದ 'ಕಡ್ಡಿಪುಡಿ' ಚಿತ್ರದ ಒಂದು ದೃಶ್ಯ ವೈರಲ್ ಆಗಿದೆ .

‘ಈ ರಸ್ತೆ ನಿಮ್​ ಅಪ್ಪಂದಾ?’.. ಹಾಗೆ ಕ್ಯಾಮೆರಾ ತಿರುಗಿದ್ರೆ; ಇದು ಶಿವಣ್ಣನ ಸಿನಿಮಾದ ಗೂಸ್​ಬಂಪ್ಸ್ ದೃಶ್ಯ  
ರಾಜ್​​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Apr 24, 2025 | 2:06 PM

Share

ಶಿವರಾಜ್​ಕುಮಾರ್, ಪುನೀತ್ ರಾಜ್​ಕುಮಾರ್ (Puneeth Rajkumar) ಸಿನಿಮಾಗಳಲ್ಲಿ ಅವರ ಕುಟುಂಬದ ಪರಂಪರೆ ಹೇಳುವ ಅನೇಕ ಡೈಲಾಗ್​ಗಳಿವೆ. ಈ ರೀತಿಯ ಡೈಲಾಗ್​ ಅಭಿಮಾನಿಗಳು ತುಂಬಾನೇ ಇಷ್ಟಪಡುತ್ತಾರೆ. ಈ ಕಾರಣಕ್ಕೆ ನಿರ್ದೇಶಕರು ಕೂಡ ಈ ರೀತಿಯ ಡೈಲಾಗ್​ನ ಇಡಲು ಪ್ರಯತ್ನಿಸುತ್ತಾರೆ. ಅನೇಕ ಸಿನಿಮಾಗಳಲ್ಲಿ ಈ ರೀತಿಯ ಘಟನೆಗಳು ಇವೆ. ಶಿವರಾಜ್​ಕುಮಾರ್ ನಟನೆಯ ಸಿನಿಮಾ ಒಂದರ ದೃಶ್ಯ ಈಗ ವೈರಲ್ ಆಗಿದೆ. ಇದರಲ್ಲಿ ಬರೋ ಗೂಸ್​ಬಂಪ್ಸ್ ದೃಶ್ಯ ಅನೇಕರಿಗೆ ಇಷ್ಟ. ಆ ಬಗ್ಗೆ ಇಲ್ಲಿದೆ ವಿವರ.

ಶಿವರಾಜ್​ಕುಮಾರ್ ಅವರು ‘ಕಡ್ಡಿಪುಡಿ’ ಸಿನಿಮಾದಲ್ಲಿ ನಟಿಸಿದ್ದರು. ರಾಧಿಕಾ ಪಂಡಿತ್ ಅವರು ಈ ಚಿತ್ರಕ್ಕೆ ನಾಯಕಿ. ರಂಗಾಯಣ ರಘು ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಆರಂಭದಲ್ಲಿ ರೌಡಿ ಆಗಿರೋ ಕಥಾ ನಾಯಕ ನಂತರ ಬದಲಾಗುತ್ತಾನೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ. 2013ರಲ್ಲಿ ರಿಲೀಸ್ ಆದ ಈ ಚಿತ್ರವನ್ನು ದುನಿಯಾ ಸೂರಿ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ
Image
ಮಂತ್ರಾಲಯದ ಗರ್ಭಗುಡಿಯಲ್ಲಿ ಮಲಗಿದ್ದ ರಾಜ್​ಕುಮಾರ್; ಆ ಬಳಿಕ ನಡೆದಿದ್ದು ಏನು
Image
ರಾಜ್​ಕುಮಾರ್ ಮೊದಲ ಆಡಿಷನ್ ಹೇಗಿತ್ತು? ವಿವರಿಸಿದ್ದ ಅಣ್ಣಾವ್ರು
Image
ಪಹಲ್ಗಾಮ್ ದಾಳಿ ಬಗ್ಗೆ ಪಾಕ್ ನಟನ ಅಭಿಪ್ರಾಯವೇನು? ದೂಷಿಸಿದ್ದು ಯಾರನ್ನು?
Image
ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್ ಏನು?

ರೌಡಿಸಂ ಕಥೆ ಹೇಳಲು ದುನಿಯಾ ಸೂರಿ ಎತ್ತಿದ ಕೈ. ಈ ಚಿತ್ರದಲ್ಲೂ ಅಂಥದ್ದೇ ಕಥೆ ಹೇಳಲಾಗಿತ್ತು. ಇದರಲ್ಲಿ ಬರೋ ದೃಶ್ಯ ಒಂದು ಗಮನ ಸೆಳೆದಿತ್ತು. ಕಡ್ಡಿಪುಡಿ (ಶಿವಣ್ಣ) ಹಾಗೂ ಜಿಂಕೆ (ರಂಗಾಯಣ ರಘು) ಕಾರಲ್ಲಿ ಹೋಗುತ್ತಾ ಇರುತ್ತಾರೆ. ಈ ವೇಳೆ ಕೆಲವರು ಬೈಕ್​ನಲ್ಲಿ ಅಡ್ಡ ಆಗುತ್ತಾರೆ.

‘ಗಾಡಿ ಓಡ್ಸೋಕೆ ಬರಲ್ವ’ ಎಂದು ಬೈಕ್​ನವರು ಕೇಳುತ್ತಾರೆ. ‘ನೋಡ್ಕಂಡು ಹೋಗು’ ಎಂದು ಕಡ್ಡಿಪುಡಿ ಹೇಳುತ್ತಾನೆ. ‘ನಿಮ್ ಅಪ್ಪಂದಾ ರೋಡು’ ಎಂದು ಕೇಳಿ ಹೋಗುತ್ತಾರೆ. ಈ ವೇಳೆ ಕ್ಯಾಮೆರಾ ‘ಡಾ ||ರಾಜ್​ಕುಮಾರ್ ರಸ್ತೆ’ ಎಂಬ ಕಡೆ ತಿರುಗುತ್ತದೆ. ಈ ದೃಶ್ಯಕ್ಕೆ ಭರ್ಜರಿ ಸಿಳ್ಳೆ ಬಿದ್ದಿದ್ದವು.

ಇದನ್ನೂ ಓದಿ: ‘ನನ್ನ ಸುದೀಪ್ ಮಧ್ಯೆ ಸಣ್ಣಪುಟ್ಟ ಮನಸ್ತಾಪ ಆಗಿರಬಹುದು, ಆದರೆ ವೈರತ್ವ ಬೆಳೆದಿಲ್ಲ’; ಶಿವರಾಜ್​ಕುಮಾರ್

ಇಂದು (ಏಪ್ರಿಲ್ 24) ರಾಜ್​ಕುಮಾರ್ ಜನ್ಮದಿನ. ಅವರ ಹೆಸರಿನಲ್ಲಿ ಒಳ್ಳೆಯ ಕೆಲಸಗಳು ನಡೆಯುತ್ತಿವೆ. ಬೆಳಿಗ್ಗೆ ಕುಟುಂಬದವರು ಬಂದು ರಾಜ್​ಕುಮಾರ್ ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದ್ದಾರೆ. ರಾಜ್​ಕುಮಾರ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:50 pm, Thu, 24 April 25

Follow Us
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ