‘ಈ ರಸ್ತೆ ನಿಮ್​ ಅಪ್ಪಂದಾ?’.. ಹಾಗೆ ಕ್ಯಾಮೆರಾ ತಿರುಗಿದ್ರೆ; ಇದು ಶಿವಣ್ಣನ ಸಿನಿಮಾದ ಗೂಸ್​ಬಂಪ್ಸ್ ದೃಶ್ಯ  

ಇಂದು (ಮೇ 24) ರಾಜ್​ಕುಮಾರ್ ಜನ್ಮದಿನ. ಅವರ ಹೆಸರಿನಲ್ಲಿ ಒಳ್ಳೆಯ ಕೆಲಸಗಳು ನಡೆಯುತ್ತಿವೆ. ಬೆಳಿಗ್ಗೆ ಕುಟುಂಬದವರು ಬಂದು ರಾಜ್ಕುಮಾರ್ ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅಭಿನಯದ 'ಕಡ್ಡಿಪುಡಿ' ಚಿತ್ರದ ಒಂದು ದೃಶ್ಯ ವೈರಲ್ ಆಗಿದೆ .

‘ಈ ರಸ್ತೆ ನಿಮ್​ ಅಪ್ಪಂದಾ?’.. ಹಾಗೆ ಕ್ಯಾಮೆರಾ ತಿರುಗಿದ್ರೆ; ಇದು ಶಿವಣ್ಣನ ಸಿನಿಮಾದ ಗೂಸ್​ಬಂಪ್ಸ್ ದೃಶ್ಯ  
ರಾಜ್​​ಕುಮಾರ್

Updated on: Apr 24, 2025 | 2:06 PM

ಶಿವರಾಜ್​ಕುಮಾರ್, ಪುನೀತ್ ರಾಜ್​ಕುಮಾರ್ (Puneeth Rajkumar) ಸಿನಿಮಾಗಳಲ್ಲಿ ಅವರ ಕುಟುಂಬದ ಪರಂಪರೆ ಹೇಳುವ ಅನೇಕ ಡೈಲಾಗ್​ಗಳಿವೆ. ಈ ರೀತಿಯ ಡೈಲಾಗ್​ ಅಭಿಮಾನಿಗಳು ತುಂಬಾನೇ ಇಷ್ಟಪಡುತ್ತಾರೆ. ಈ ಕಾರಣಕ್ಕೆ ನಿರ್ದೇಶಕರು ಕೂಡ ಈ ರೀತಿಯ ಡೈಲಾಗ್​ನ ಇಡಲು ಪ್ರಯತ್ನಿಸುತ್ತಾರೆ. ಅನೇಕ ಸಿನಿಮಾಗಳಲ್ಲಿ ಈ ರೀತಿಯ ಘಟನೆಗಳು ಇವೆ. ಶಿವರಾಜ್​ಕುಮಾರ್ ನಟನೆಯ ಸಿನಿಮಾ ಒಂದರ ದೃಶ್ಯ ಈಗ ವೈರಲ್ ಆಗಿದೆ. ಇದರಲ್ಲಿ ಬರೋ ಗೂಸ್​ಬಂಪ್ಸ್ ದೃಶ್ಯ ಅನೇಕರಿಗೆ ಇಷ್ಟ. ಆ ಬಗ್ಗೆ ಇಲ್ಲಿದೆ ವಿವರ.

ಶಿವರಾಜ್​ಕುಮಾರ್ ಅವರು ‘ಕಡ್ಡಿಪುಡಿ’ ಸಿನಿಮಾದಲ್ಲಿ ನಟಿಸಿದ್ದರು. ರಾಧಿಕಾ ಪಂಡಿತ್ ಅವರು ಈ ಚಿತ್ರಕ್ಕೆ ನಾಯಕಿ. ರಂಗಾಯಣ ರಘು ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಆರಂಭದಲ್ಲಿ ರೌಡಿ ಆಗಿರೋ ಕಥಾ ನಾಯಕ ನಂತರ ಬದಲಾಗುತ್ತಾನೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ. 2013ರಲ್ಲಿ ರಿಲೀಸ್ ಆದ ಈ ಚಿತ್ರವನ್ನು ದುನಿಯಾ ಸೂರಿ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ
ಮಂತ್ರಾಲಯದ ಗರ್ಭಗುಡಿಯಲ್ಲಿ ಮಲಗಿದ್ದ ರಾಜ್​ಕುಮಾರ್; ಆ ಬಳಿಕ ನಡೆದಿದ್ದು ಏನು
ರಾಜ್​ಕುಮಾರ್ ಮೊದಲ ಆಡಿಷನ್ ಹೇಗಿತ್ತು? ವಿವರಿಸಿದ್ದ ಅಣ್ಣಾವ್ರು
ಪಹಲ್ಗಾಮ್ ದಾಳಿ ಬಗ್ಗೆ ಪಾಕ್ ನಟನ ಅಭಿಪ್ರಾಯವೇನು? ದೂಷಿಸಿದ್ದು ಯಾರನ್ನು?
ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್ ಏನು?

ರೌಡಿಸಂ ಕಥೆ ಹೇಳಲು ದುನಿಯಾ ಸೂರಿ ಎತ್ತಿದ ಕೈ. ಈ ಚಿತ್ರದಲ್ಲೂ ಅಂಥದ್ದೇ ಕಥೆ ಹೇಳಲಾಗಿತ್ತು. ಇದರಲ್ಲಿ ಬರೋ ದೃಶ್ಯ ಒಂದು ಗಮನ ಸೆಳೆದಿತ್ತು. ಕಡ್ಡಿಪುಡಿ (ಶಿವಣ್ಣ) ಹಾಗೂ ಜಿಂಕೆ (ರಂಗಾಯಣ ರಘು) ಕಾರಲ್ಲಿ ಹೋಗುತ್ತಾ ಇರುತ್ತಾರೆ. ಈ ವೇಳೆ ಕೆಲವರು ಬೈಕ್​ನಲ್ಲಿ ಅಡ್ಡ ಆಗುತ್ತಾರೆ.

‘ಗಾಡಿ ಓಡ್ಸೋಕೆ ಬರಲ್ವ’ ಎಂದು ಬೈಕ್​ನವರು ಕೇಳುತ್ತಾರೆ. ‘ನೋಡ್ಕಂಡು ಹೋಗು’ ಎಂದು ಕಡ್ಡಿಪುಡಿ ಹೇಳುತ್ತಾನೆ. ‘ನಿಮ್ ಅಪ್ಪಂದಾ ರೋಡು’ ಎಂದು ಕೇಳಿ ಹೋಗುತ್ತಾರೆ. ಈ ವೇಳೆ ಕ್ಯಾಮೆರಾ ‘ಡಾ ||ರಾಜ್​ಕುಮಾರ್ ರಸ್ತೆ’ ಎಂಬ ಕಡೆ ತಿರುಗುತ್ತದೆ. ಈ ದೃಶ್ಯಕ್ಕೆ ಭರ್ಜರಿ ಸಿಳ್ಳೆ ಬಿದ್ದಿದ್ದವು.

ಇದನ್ನೂ ಓದಿ: ‘ನನ್ನ ಸುದೀಪ್ ಮಧ್ಯೆ ಸಣ್ಣಪುಟ್ಟ ಮನಸ್ತಾಪ ಆಗಿರಬಹುದು, ಆದರೆ ವೈರತ್ವ ಬೆಳೆದಿಲ್ಲ’; ಶಿವರಾಜ್​ಕುಮಾರ್

ಇಂದು (ಏಪ್ರಿಲ್ 24) ರಾಜ್​ಕುಮಾರ್ ಜನ್ಮದಿನ. ಅವರ ಹೆಸರಿನಲ್ಲಿ ಒಳ್ಳೆಯ ಕೆಲಸಗಳು ನಡೆಯುತ್ತಿವೆ. ಬೆಳಿಗ್ಗೆ ಕುಟುಂಬದವರು ಬಂದು ರಾಜ್​ಕುಮಾರ್ ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದ್ದಾರೆ. ರಾಜ್​ಕುಮಾರ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:50 pm, Thu, 24 April 25