AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮಸ್ಯೆ ಆಗಿದೆ, ಶಸ್ತ್ರಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗ್ತೀನಿ’; ಶಾಕಿಂಗ್ ವಿಚಾರ ತಿಳಿಸಿದ ಶಿವರಾಜ್​ಕುಮಾರ್

ಖ್ಯಾತ ನಟ ಶಿವರಾಜ್ ಕುಮಾರ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಅವರು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಉದ್ದೇಶಿಸಿದ್ದಾರೆ. ಶಿವಣ್ಣ ಅವರು ಚಿಕಿತ್ಸೆಗಾಗಿ ಒಂದು ತಿಂಗಳು ಅಮೆರಿಕಕ್ಕೆ ತೆರಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಈ ಸುದ್ದಿಯಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ.

‘ಸಮಸ್ಯೆ ಆಗಿದೆ, ಶಸ್ತ್ರಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗ್ತೀನಿ’; ಶಾಕಿಂಗ್ ವಿಚಾರ ತಿಳಿಸಿದ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on: Nov 07, 2024 | 11:35 AM

ನಟ ಶಿವರಾಜ್​ಕುಮಾರ್ ಅವರಿಗೆ 60 ವರ್ಷದ ಮೇಲಾಗಿದೆ. ಈಗಲೂ ಅವರು ಫಿಟ್ ಆಗಿದ್ದಾರೆ. ಅವರು ಆರೋಗ್ಯಕರ ಡಯಟ್ ಫಾಲೋ ಮಾಡುತ್ತಾರೆ. ನಿತ್ಯ ಶೂಟಿಂಗ್​​ನಲ್ಲಿ ಭಾಗವಹಿಸುತ್ತಾರೆ. ಸದ್ಯ ಅವರು ‘ಭೈರತಿ ರಣಗಲ್’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ. ತಮಗೆ ಅನಾರೋಗ್ಯ ಆಗಿರೋದು ಹೌದು ಎಂದಿರುವ ಅವರು, ಶಸ್ತ್ರಚಿಕಿತ್ಸೆಗಾಗಿ ಅಮೆರಿಕ ತೆರಳೋದಾಗಿ ಹೇಳಿದ್ದಾರೆ.

ಸುದ್ದಿ ಮನೆ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಶಿವಣ್ಣ ಮಾತನಾಡಿದ್ದಾರೆ. ಅಲ್ಲಿ ಅವರು ಅನಾರೋಗ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ‘ನನಗೆ ಅನಾರೋಗ್ಯ ಇದೆ. ನಾನು ಸುಳ್ಳು ಹೇಳಲ್ಲ. ನನೂ ಮನುಷ್ಯನೇ. ಟ್ರೀಟ್​ಮೆಂಟ್ ತೆಗೆದುಕೊಳ್ಳುತ್ತಿದ್ದೇನೆ’ ಎಂದಿದ್ದಾರೆ ಅವರು.

‘ಟ್ರೀಟ್​ಮೆಂಟ್​ಗೆ ನಾಲ್ಕು ಸೆಷನ್ ಇದೆ. ಈಗಾಗಲೇ ಎರಡು ಸೆಷನ್ ಆಗಿದೆ. ಇನ್ನೆರಡು ಸೆಷನ್ ಮಾಡಬೇಕಿದೆ. ಒಂದು ಸರ್ಜರಿ ನಡೆಯಬೇಕಿದೆ. ಅಮೆರಿಕದಲ್ಲಿ ಮಾಡೋದಾ ಅಥವಾ ಇಲ್ಲಿ ಮಾಡೋದಾ ಎನ್ನುವ ಬಗ್ಗೆ ಯೋಚನೆ ನಡೆಯುತ್ತಿದೆ. ಅಮೆರಿಕದಲ್ಲಿ ಮಾಡೋದು ಎಂದಾದರೆ ಒಂದು ತಿಂಗಳು ನಾನು ಅಲ್ಲಿಗೆ ಹೋಗಬೇಕಾಗುತ್ತದೆ. ಜನವರಿಯಿಂದ ನಾನು ಫುಲ್ ಫಾರ್ಮ್ ಶಿವಣ್ಣ ಬರ್ತಾರೆ’ ಎಂದಿದ್ದಾರೆ ಅವರು.

ಶಿವರಾಜ್​ಕುಮಾರ್ ಅವರು ತಮ್ಮ ನಿರ್ಮಾಪಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರಂತೆ. ಮುಂದೆ ಯಾವುದೇ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ಅವರು ಈ ರೀತಿ ಮಾಡಿದ್ದಾರೆ. ‘ಉಳಿದ ಸಮಯದಲ್ಲಿ ನಾವು ಅಭಿಮಾನಿಗಳು ಬೇಕು ಎನ್ನುತ್ತೇವೆ. ಈ ರೀತಿ ವಿಚಾರ ಬಂದಾಗ ಏಕೆ ಅವರನ್ನು ದೂರ ಇಡಬೇಕು? ಈ ಕಾರಣಕ್ಕೆ ನಾನು ಸುಳ್ಳು ಹೇಳೋದು ಬೇಡ ಎಂದು ಗೀತಾ ಅವರ ಬಳಿ ಹೇಳಿದೆ. ಅಭಿಮಾನಿಗಳು ಫೋಟೋ ತೆಗೆಸಿಕೊಳ್ಳೋಕೆ ಬಂದಾಗ ದೂರ ನಿಲ್ಲಿ ಎನ್ನುತ್ತೇನೆ. ಅವರಿಗೆ ಇನ್​ಫೆಕ್ಷನ್ ಆಗಬಾರದು ಎನ್ನುವ ಕಾರಣಕ್ಕೆ ಈ ರೀತಿ ಮಾಡಿದ್ದೇನೆ ಅಷ್ಟೇ. ಇದೆಲ್ಲ ಇನ್ನೆರಡು ತಿಂಗಳು ಅಷ್ಟೇ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ನಾನು ತಾಳ್ಮೆ ಕಳೆದುಕೊಂಡಾಗಲೆಲ್ಲ, ತುಂಬಾ ಜನ ತಲೆ ಕಳೆದುಕೊಂಡಿದ್ದಾರೆ’; ಮತ್ತೆ ಲಾಂಗ್ ಹಿಡಿದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಅವರು ಯಾವ ರೀತಿಯ ತೊಂದರೆ ಎದುರಿಸುತ್ತಿದ್ದಾರೆ ಎಂಬುದನ್ನು ರಿವೀಲ್ ಮಾಡಿಲ್ಲ. ಆದರೆ, ಯಾವುದೋ ಗಂಭೀರ ಸಮಸ್ಯೆಯನ್ನು ಅವರು ಎದುಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅವರು ಬೇಗೆ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಅವರ ನಟನೆಯ ‘ಭೈರತಿ ರಣಗಲ್’ ಚಿತ್ತ ನವೆಂಬರ್ 15ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು