AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್​ನ ಅಭಿಮಾನಿಗಳೇ ಊಹಿಸಬೇಕು

ರಾಜಕುಮಾರ್ ಅವರ ಜನ್ಮದಿನಾಚರಣೆಯಂದು ಶಿವರಾಜಕುಮಾರ್ ಅವರ ಹೊಸ ಸಿನಿಮಾ ಘೋಷಿಸಲಾಗಿದೆ. 'ಶ್ರೀತಿಕ್ ಮೋಷನ್ ಪಿಕ್ಚರ್ಸ್' ನಿರ್ಮಿಸುತ್ತಿರುವ ಈ ಚಿತ್ರವನ್ನು ಬಾಲಾಜಿ ಮಾಧವನ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಇನ್ನೂ ಅಂತಿಮ ಆಗಿಲ್ಲ. ಶೀಘ್ರದಲ್ಲೇ ಟೈಟಲ್ ಅನಾವರಣಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ. ಟೈಟಲ್​ನ ಅಭಿಮಾನಿಗಳೇ ಗೆಸ್ ಮಾಡಲಿ ಎಂದು ಶಿವಣ್ಣ ಹೇಳಿದ್ದಾರಂತೆ.

ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್​ನ ಅಭಿಮಾನಿಗಳೇ ಊಹಿಸಬೇಕು
ಶಿವರಾಜ್​ಕುಮಾರ್ ಹೊಸ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Apr 23, 2025 | 10:04 AM

Share

ಶಿವರಾಜ್​ಕುಮಾರ್ (Shivarajkumar) ಅವರು ಕ್ಯಾನ್ಸರ್​ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ನಟನೆಯಿಂದ ಬ್ರೇಕ್ ಪಡೆದಿದ್ದರು. ಕೇವಲ ಮೂರು ತಿಂಗಳ ಕಾಲ ನಟನೆಯಿಂದ ದೂರ ಉಳಿದು ಈಗ ಅವರು ಮತ್ತೆ ಟ್ರ್ಯಾಕ್​ಗೆ ಮರಳಿದ್ದಾರೆ. ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈಗ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ರಾಜ್​ಕುಮಾರ್ ಜನ್ಮದಿನಕ್ಕೂ (ಏಪ್ರಿಲ್ 24) ಒಂದು ದಿನ ಮೊದಲು ಈ ಸಿನಿಮಾ ಅನೌನ್ಸ್ ಆಗಿದೆ. ಇದು ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ.

ಏಪ್ರಿಲ್ 24 ರಾಜಕುಮಾರ್ ಅವರ ಜನ್ಮದಿನ. ಈ ಸಂದರ್ಭದಲ್ಲಿ ಅಭಿಮಾನಿಗಳು ಅನೇಕ ಸಾಮಾಜಿಕ ಕೆಲಸ ಮಾಡುತ್ತಾರೆ. ಈ ವಿಶೇಷ ದಿನದ ಸಂದರ್ಭದಲ್ಲಿ ಶಿವಣ್ಣನ ಸಿನಿಮಾ ಘೋಷಣೆ ಆಗಿರೋದು ವಿಶೇಷ. ‘ಶ್ರಿತಿಕ್ ಮೋಷನ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಸಾಗರ್, ಕೃಷ್ಣಕುಮಾರ್ ಹಾಗೂ ಸೂರಜ್ ಶರ್ಮ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಾಲಾಜಿ ಮಾಧವನ್ ನಿರ್ದೇಶನ ಮಾಡಲಿದ್ದಾರೆ.

ತಮಿಳಿನ ‘ಇದಿ ಮಿನ್ನಲ್ ಕಾದಲ್’ ಹೆಸರಿನ ಚಿತ್ರವನ್ನು ಬಾಲಾಜಿ ಮಾಧವನ್ ನಿರ್ದೇಶನ ಮಾಡಿದ್ದರು. ಈಗ ಅವರಿಗೆ ಕನ್ನಡದಲ್ಲಿ ಇದು ಮೊದಲ ಅನುಭವ. ಬಾಲಾಜಿ ಮಾಧವನ್ ಅವರು ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರಿಯ ಪುತ್ರ ಅನ್ನೋದು ವಿಶೇಷ.

ಇದನ್ನೂ ಓದಿ
Image
‘ಸೀತಾ ರಾಮ’ ಧಾರಾವಾಹಿ: ಅಶೋಕ್​ಗೆ ಗೊತ್ತಾಗಿ ಹೋಯ್ತು ಸಿಹಿಯ ಆತ್ಮದ ಕಥೆ
Image
ರೋಹಿತ್ ಶೆಟ್ಟಿ-ಶಾರುಖ್ ಮಧ್ಯೆ ಯಾವುದೂ ಸರಿ ಇಲ್ಲ? ನಿರ್ದೇಶಕನ ಸ್ಪಷ್ಟನೆ
Image
ಪಾಕ್ ಟಿಕ್​ ಟಾಕರ್ ಖಾಸಗಿ ವಿಡಿಯೋ ಲೀಕ್; ಹರಿದು ಹಂಚೋಯ್ತು 
Image
ಶಿವಮೊಗ್ಗದ ಮಂಜುನಾಥ್ ಪತ್ನಿ ಮಾತು ಕೇಳಿ ರವೀನಾ ಟಂಡನ್ ರಕ್ತ ಕೊತ ಕೊತ

ಇತ್ತೀಚೆಗೆ ನಿರ್ದೇಶಕ ಬಾಲಾಜಿ ಮಾಧವನ್ ಹಾಗೂ ನಿರ್ಮಾಪಕರಾದ ಸಾಗರ್, ಕೃಷ್ಣಕುಮಾರ್ ಮತ್ತು ಸೂರಜ್ ಶರ್ಮ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಶಿವಣ್ಣ ಅವರ ಸ್ವಗೃಹದಲ್ಲೇ ಈ ಭೇಟಿ ನಡಿದೆ. ಈ ವೇಳೆ ಚಿತ್ರದ ಕುರಿತು ಮಾತುಕತೆ ನಡೆದಿದೆ. ಸಿನಿಮಾದ ಕಥೆ ಕೇಳಿದ ಶಿವಣ್ಣ ಸಂತೋಷಗೊಂಡಿದ್ದಾರೆ.

ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಶೀಘ್ರವೇ ಇದನ್ನು ಅನಾವರಣಮಾಡುವ ಆಲೋಚನೆ ತಂಡಕ್ಕೆ ಇದೆ. ಈ ವೇಳೆ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ. ಅಣ್ಣಾವ್ರ ಬರ್ತ್​ಡೇ ಎನ್ನುವ ಕಾರಣಕ್ಕೆ ಔಪಚಾರಿಕವಾಗಿ ಸಿನಿಮಾ ಘೋಷಣೆ ಆಗಿದೆ.

ಇದನ್ನೂ ಓದಿ: ಶಿವರಾಜ್​ಕುಮಾರ್-ಗೀತಾ ಪ್ರೇಮ ನೋಡಿ ಆ ವ್ಯಕ್ತಿಗೆ ನಿಜಕ್ಕೂ ಶಾಕ್ ಆಗಿತ್ತು..

ಈ ಚಿತ್ರಕ್ಕೆ ಭಿನ್ನ ಕಥಾಹಂದರ ಇದೆ. ಹೀಗಾಗಿ, ಈ ಚಿತ್ರದ ಶೀರ್ಷಿಕೆ ಏನೆಂದು ಜನರೆ ಊಹಿಸಲಿ ಎಂದು ಶಿವರಾಜಕುಮಾರ್ ಚಿತ್ರತಂಡಕ್ಕೆ ಸಲಹೆ ನೀಡಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:01 am, Wed, 23 April 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್