AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaram: ಶಿವರಾಂ ನೆನೆದು ಭಾವುಕರಾದ ಹಿರಿಯ ನಟಿಯರು; ಭಾರತಿ, ಜಯಮಾಲ, ಸುಮಲತಾ ಹೇಳಿದ್ದೇನು?

Shivaram Funeral: ಶಿವರಾಂ ಅವರು ಎಲ್ಲರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ವ್ಯಕ್ತಿ ಆಗಿದ್ದರು. ಚಂದನವನದಲ್ಲಿ ಹಿರಿಯಣ್ಣನಂತೆ ಬದುಕಿದ್ದ ಅವರ ವ್ಯಕ್ತಿತ್ವವನ್ನು ಎಲ್ಲರೂ ಕೊಂಡಾಡಿದ್ದಾರೆ.

Shivaram: ಶಿವರಾಂ ನೆನೆದು ಭಾವುಕರಾದ ಹಿರಿಯ ನಟಿಯರು; ಭಾರತಿ, ಜಯಮಾಲ, ಸುಮಲತಾ ಹೇಳಿದ್ದೇನು?
ಭಾರತಿ, ಶಿವರಾಂ, ಜಯಮಾಲ, ಸುಮಲತಾ
Follow us
TV9 Web
| Updated By: ಮದನ್​ ಕುಮಾರ್​

Updated on: Dec 05, 2021 | 1:06 PM

ಹಿರಿಯ ನಟ ಶಿವರಾಂ (Shivaram) ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಶಿವರಾಂ ಜತೆ ಒಡನಾಟ ಹೊಂದಿದ್ದ ಎಲ್ಲರೂ ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ಹಿರಿಯ ನಟಿಯರಾದ ಭಾರತಿ ವಿಷ್ಣುವರ್ಧನ್ (Bharathi Vishnuvardhan), ಜಯಮಾಲಾ ((Jayamala), ಸುಮಲತಾ ಅಂಬರೀಷ್ (Sumalatha Ambareesh)​,​ ತಾರಾ ಅನುರಾಧ ಮುಂತಾದವರು ಶಿವರಾಂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಚಂದನವನದಲ್ಲಿ ಹಿರಿಯಣ್ಣನಂತೆ ಬದುಕಿದ್ದ ಅವರ ವ್ಯಕ್ತಿತ್ವವನ್ನು ಎಲ್ಲರೂ ಕೊಂಡಾಡಿದ್ದಾರೆ. ಶಿವರಾಂ ಅವರು ಎಲ್ಲರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ವ್ಯಕ್ತಿ ಆಗಿದ್ದರು. ಅವರಿಂದ ಅನೇಕರಿಗೆ ಸಹಾಯ ಆಗಿದೆ. ಅಧ್ಯಾತ್ಮದ ವಿಚಾರದಲ್ಲೂ ಅವರು ಹಲವರಿಗೆ ಮಾರ್ಗದರ್ಶನ ನೀಡಿದ್ದರು. ಅವರ ಬಗ್ಗೆ ಕನ್ನಡದ ಹಿರಿಯ ನಟಿಯರು ಹಂಚಿಕೊಂಡ ಮಾತುಗಳು ಇಲ್ಲಿವೆ..

ಸುಮಲತಾ ಅಂಬರೀಷ್​​ ನುಡಿ ನಮನ ಸಲ್ಲಿಸಿದ್ದಾರೆ. ‘ಶಿವರಾಮಣ್ಣ ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಅಂಬರೀಷ್​ ಜೊತೆಗೆ ನಾಗರಹಾವು ಸಿನಿಮಾದಲ್ಲಿ ಮೊದಲ ಬಾರಿ‌ ನಟಿಸಿದ್ರು. ಇತ್ತೀಚೆಗೆ ಕರೆ ಮಾಡಿ ಮಾತನಾಡಿದ್ರು. ಕೊರೊನಾ ಬಂದು ಎಲ್ಲರೂ ದೂರ ಆಗಿದ್ದೇವೆ, ಒಟ್ಟಿಗೆ ಒಮ್ಮೆ ಸಿಗೋಣ ಅಂತ ಹೇಳಿದ್ರು. ಅದೇ ಕೊನೆ ಮಾತಾಗಿ ಹೋಗಿದೆ. ನಿಜಕ್ಕೂ ಕನ್ನಡ ಚಿತ್ರರಂಗದಲ್ಲಿ ಒಂದು ಯುಗ ಮುಗಿದುಹೋಗಿದೆ. ಅವರ ಆತ್ಮಕ್ಕೆ ಶಾಂತಿ‌ ಸಿಗಲಿ’ ಎಂದು ಸುಮಲತಾ ಅಂಬರೀಷ್​ ಹೇಳಿದ್ದಾರೆ.

‘ಯಾವುದೇ ಸಭೆ, ಸಮಾರಂಭಗಳಲ್ಲಿ ಶಿವರಾಂ ಇರುತ್ತಿದ್ದರು. ಎಲ್ಲರಿಗೂ ಸಹಾಯ ಮಾಡೋದು ಅವರ ದೊಡ್ಡ ಗುಣ ಆಗಿತ್ತು. ಕಲಾವಿದರು ಸಂಕಷ್ಟದಲ್ಲಿದ್ದಾಗ ನೆರವಿಗೆ ಬರುತ್ತಿದ್ದರು. ತನಗಾಗಿ ಏನನ್ನೂ ಕೇಳಿಕೊಂಡಿಲ್ಲ. ಬಹಳ ಸ್ವಾಭಿಮಾನಿ ಆಗಿದ್ದರು. ಶಿವರಾಮಣ್ಣ ದೇವರ ಆರಾಧನೆ ಮಾಡುವಾಗಲೇ ಈ ಘಟನೆ ನಡೆದಿದೆ. ದೇವರೇ ಅವರನ್ನು ಕರೆಸಿಕೊಂಡಿದ್ದಾನೆ’ ಎಂದು ಜಯಮಾಲ ಹೇಳಿದ್ದಾರೆ.

ಇದನ್ನೂ ಓದಿ:

‘ಶಿವರಾಂ ನಡೆದಾಡುವ ಅಯ್ಯಪ್ಪ ಸ್ವಾಮಿ ಆಗಿದ್ರು; ಅವರಿಗೆ ಹಲವು ಅಭಿಷೇಕ ಮಾಡ್ತೀವಿ’: ಡಾ. ಎನ್​. ಜಯರಾಂ

‘ದೇವ್ರನ್ನ ನಂಬಬೇಕೋ ಬೇಡವೋ ಎಂಬಂತಾಗಿದೆ’; ಅಯ್ಯಪ್ಪ ಭಕ್ತ ಶಿವರಾಂ ನಿಧನಕ್ಕೆ ಬೆಂಗಳೂರು ನಾಗೇಶ್​ ಕಂಬನಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ