AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaram: ಶಿವರಾಂ ನೆನೆದು ಭಾವುಕರಾದ ಹಿರಿಯ ನಟಿಯರು; ಭಾರತಿ, ಜಯಮಾಲ, ಸುಮಲತಾ ಹೇಳಿದ್ದೇನು?

Shivaram Funeral: ಶಿವರಾಂ ಅವರು ಎಲ್ಲರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ವ್ಯಕ್ತಿ ಆಗಿದ್ದರು. ಚಂದನವನದಲ್ಲಿ ಹಿರಿಯಣ್ಣನಂತೆ ಬದುಕಿದ್ದ ಅವರ ವ್ಯಕ್ತಿತ್ವವನ್ನು ಎಲ್ಲರೂ ಕೊಂಡಾಡಿದ್ದಾರೆ.

Shivaram: ಶಿವರಾಂ ನೆನೆದು ಭಾವುಕರಾದ ಹಿರಿಯ ನಟಿಯರು; ಭಾರತಿ, ಜಯಮಾಲ, ಸುಮಲತಾ ಹೇಳಿದ್ದೇನು?
ಭಾರತಿ, ಶಿವರಾಂ, ಜಯಮಾಲ, ಸುಮಲತಾ
TV9 Web
| Updated By: ಮದನ್​ ಕುಮಾರ್​|

Updated on: Dec 05, 2021 | 1:06 PM

Share

ಹಿರಿಯ ನಟ ಶಿವರಾಂ (Shivaram) ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಶಿವರಾಂ ಜತೆ ಒಡನಾಟ ಹೊಂದಿದ್ದ ಎಲ್ಲರೂ ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ಹಿರಿಯ ನಟಿಯರಾದ ಭಾರತಿ ವಿಷ್ಣುವರ್ಧನ್ (Bharathi Vishnuvardhan), ಜಯಮಾಲಾ ((Jayamala), ಸುಮಲತಾ ಅಂಬರೀಷ್ (Sumalatha Ambareesh)​,​ ತಾರಾ ಅನುರಾಧ ಮುಂತಾದವರು ಶಿವರಾಂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಚಂದನವನದಲ್ಲಿ ಹಿರಿಯಣ್ಣನಂತೆ ಬದುಕಿದ್ದ ಅವರ ವ್ಯಕ್ತಿತ್ವವನ್ನು ಎಲ್ಲರೂ ಕೊಂಡಾಡಿದ್ದಾರೆ. ಶಿವರಾಂ ಅವರು ಎಲ್ಲರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ವ್ಯಕ್ತಿ ಆಗಿದ್ದರು. ಅವರಿಂದ ಅನೇಕರಿಗೆ ಸಹಾಯ ಆಗಿದೆ. ಅಧ್ಯಾತ್ಮದ ವಿಚಾರದಲ್ಲೂ ಅವರು ಹಲವರಿಗೆ ಮಾರ್ಗದರ್ಶನ ನೀಡಿದ್ದರು. ಅವರ ಬಗ್ಗೆ ಕನ್ನಡದ ಹಿರಿಯ ನಟಿಯರು ಹಂಚಿಕೊಂಡ ಮಾತುಗಳು ಇಲ್ಲಿವೆ..

ಸುಮಲತಾ ಅಂಬರೀಷ್​​ ನುಡಿ ನಮನ ಸಲ್ಲಿಸಿದ್ದಾರೆ. ‘ಶಿವರಾಮಣ್ಣ ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಅಂಬರೀಷ್​ ಜೊತೆಗೆ ನಾಗರಹಾವು ಸಿನಿಮಾದಲ್ಲಿ ಮೊದಲ ಬಾರಿ‌ ನಟಿಸಿದ್ರು. ಇತ್ತೀಚೆಗೆ ಕರೆ ಮಾಡಿ ಮಾತನಾಡಿದ್ರು. ಕೊರೊನಾ ಬಂದು ಎಲ್ಲರೂ ದೂರ ಆಗಿದ್ದೇವೆ, ಒಟ್ಟಿಗೆ ಒಮ್ಮೆ ಸಿಗೋಣ ಅಂತ ಹೇಳಿದ್ರು. ಅದೇ ಕೊನೆ ಮಾತಾಗಿ ಹೋಗಿದೆ. ನಿಜಕ್ಕೂ ಕನ್ನಡ ಚಿತ್ರರಂಗದಲ್ಲಿ ಒಂದು ಯುಗ ಮುಗಿದುಹೋಗಿದೆ. ಅವರ ಆತ್ಮಕ್ಕೆ ಶಾಂತಿ‌ ಸಿಗಲಿ’ ಎಂದು ಸುಮಲತಾ ಅಂಬರೀಷ್​ ಹೇಳಿದ್ದಾರೆ.

‘ಯಾವುದೇ ಸಭೆ, ಸಮಾರಂಭಗಳಲ್ಲಿ ಶಿವರಾಂ ಇರುತ್ತಿದ್ದರು. ಎಲ್ಲರಿಗೂ ಸಹಾಯ ಮಾಡೋದು ಅವರ ದೊಡ್ಡ ಗುಣ ಆಗಿತ್ತು. ಕಲಾವಿದರು ಸಂಕಷ್ಟದಲ್ಲಿದ್ದಾಗ ನೆರವಿಗೆ ಬರುತ್ತಿದ್ದರು. ತನಗಾಗಿ ಏನನ್ನೂ ಕೇಳಿಕೊಂಡಿಲ್ಲ. ಬಹಳ ಸ್ವಾಭಿಮಾನಿ ಆಗಿದ್ದರು. ಶಿವರಾಮಣ್ಣ ದೇವರ ಆರಾಧನೆ ಮಾಡುವಾಗಲೇ ಈ ಘಟನೆ ನಡೆದಿದೆ. ದೇವರೇ ಅವರನ್ನು ಕರೆಸಿಕೊಂಡಿದ್ದಾನೆ’ ಎಂದು ಜಯಮಾಲ ಹೇಳಿದ್ದಾರೆ.

ಇದನ್ನೂ ಓದಿ:

‘ಶಿವರಾಂ ನಡೆದಾಡುವ ಅಯ್ಯಪ್ಪ ಸ್ವಾಮಿ ಆಗಿದ್ರು; ಅವರಿಗೆ ಹಲವು ಅಭಿಷೇಕ ಮಾಡ್ತೀವಿ’: ಡಾ. ಎನ್​. ಜಯರಾಂ

‘ದೇವ್ರನ್ನ ನಂಬಬೇಕೋ ಬೇಡವೋ ಎಂಬಂತಾಗಿದೆ’; ಅಯ್ಯಪ್ಪ ಭಕ್ತ ಶಿವರಾಂ ನಿಧನಕ್ಕೆ ಬೆಂಗಳೂರು ನಾಗೇಶ್​ ಕಂಬನಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!