AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaram: ಶಿವರಾಂ ನೆನೆದು ಭಾವುಕರಾದ ಹಿರಿಯ ನಟಿಯರು; ಭಾರತಿ, ಜಯಮಾಲ, ಸುಮಲತಾ ಹೇಳಿದ್ದೇನು?

Shivaram Funeral: ಶಿವರಾಂ ಅವರು ಎಲ್ಲರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ವ್ಯಕ್ತಿ ಆಗಿದ್ದರು. ಚಂದನವನದಲ್ಲಿ ಹಿರಿಯಣ್ಣನಂತೆ ಬದುಕಿದ್ದ ಅವರ ವ್ಯಕ್ತಿತ್ವವನ್ನು ಎಲ್ಲರೂ ಕೊಂಡಾಡಿದ್ದಾರೆ.

Shivaram: ಶಿವರಾಂ ನೆನೆದು ಭಾವುಕರಾದ ಹಿರಿಯ ನಟಿಯರು; ಭಾರತಿ, ಜಯಮಾಲ, ಸುಮಲತಾ ಹೇಳಿದ್ದೇನು?
ಭಾರತಿ, ಶಿವರಾಂ, ಜಯಮಾಲ, ಸುಮಲತಾ
TV9 Web
| Edited By: |

Updated on: Dec 05, 2021 | 1:06 PM

Share

ಹಿರಿಯ ನಟ ಶಿವರಾಂ (Shivaram) ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಶಿವರಾಂ ಜತೆ ಒಡನಾಟ ಹೊಂದಿದ್ದ ಎಲ್ಲರೂ ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ಹಿರಿಯ ನಟಿಯರಾದ ಭಾರತಿ ವಿಷ್ಣುವರ್ಧನ್ (Bharathi Vishnuvardhan), ಜಯಮಾಲಾ ((Jayamala), ಸುಮಲತಾ ಅಂಬರೀಷ್ (Sumalatha Ambareesh)​,​ ತಾರಾ ಅನುರಾಧ ಮುಂತಾದವರು ಶಿವರಾಂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಚಂದನವನದಲ್ಲಿ ಹಿರಿಯಣ್ಣನಂತೆ ಬದುಕಿದ್ದ ಅವರ ವ್ಯಕ್ತಿತ್ವವನ್ನು ಎಲ್ಲರೂ ಕೊಂಡಾಡಿದ್ದಾರೆ. ಶಿವರಾಂ ಅವರು ಎಲ್ಲರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ವ್ಯಕ್ತಿ ಆಗಿದ್ದರು. ಅವರಿಂದ ಅನೇಕರಿಗೆ ಸಹಾಯ ಆಗಿದೆ. ಅಧ್ಯಾತ್ಮದ ವಿಚಾರದಲ್ಲೂ ಅವರು ಹಲವರಿಗೆ ಮಾರ್ಗದರ್ಶನ ನೀಡಿದ್ದರು. ಅವರ ಬಗ್ಗೆ ಕನ್ನಡದ ಹಿರಿಯ ನಟಿಯರು ಹಂಚಿಕೊಂಡ ಮಾತುಗಳು ಇಲ್ಲಿವೆ..

ಸುಮಲತಾ ಅಂಬರೀಷ್​​ ನುಡಿ ನಮನ ಸಲ್ಲಿಸಿದ್ದಾರೆ. ‘ಶಿವರಾಮಣ್ಣ ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಅಂಬರೀಷ್​ ಜೊತೆಗೆ ನಾಗರಹಾವು ಸಿನಿಮಾದಲ್ಲಿ ಮೊದಲ ಬಾರಿ‌ ನಟಿಸಿದ್ರು. ಇತ್ತೀಚೆಗೆ ಕರೆ ಮಾಡಿ ಮಾತನಾಡಿದ್ರು. ಕೊರೊನಾ ಬಂದು ಎಲ್ಲರೂ ದೂರ ಆಗಿದ್ದೇವೆ, ಒಟ್ಟಿಗೆ ಒಮ್ಮೆ ಸಿಗೋಣ ಅಂತ ಹೇಳಿದ್ರು. ಅದೇ ಕೊನೆ ಮಾತಾಗಿ ಹೋಗಿದೆ. ನಿಜಕ್ಕೂ ಕನ್ನಡ ಚಿತ್ರರಂಗದಲ್ಲಿ ಒಂದು ಯುಗ ಮುಗಿದುಹೋಗಿದೆ. ಅವರ ಆತ್ಮಕ್ಕೆ ಶಾಂತಿ‌ ಸಿಗಲಿ’ ಎಂದು ಸುಮಲತಾ ಅಂಬರೀಷ್​ ಹೇಳಿದ್ದಾರೆ.

‘ಯಾವುದೇ ಸಭೆ, ಸಮಾರಂಭಗಳಲ್ಲಿ ಶಿವರಾಂ ಇರುತ್ತಿದ್ದರು. ಎಲ್ಲರಿಗೂ ಸಹಾಯ ಮಾಡೋದು ಅವರ ದೊಡ್ಡ ಗುಣ ಆಗಿತ್ತು. ಕಲಾವಿದರು ಸಂಕಷ್ಟದಲ್ಲಿದ್ದಾಗ ನೆರವಿಗೆ ಬರುತ್ತಿದ್ದರು. ತನಗಾಗಿ ಏನನ್ನೂ ಕೇಳಿಕೊಂಡಿಲ್ಲ. ಬಹಳ ಸ್ವಾಭಿಮಾನಿ ಆಗಿದ್ದರು. ಶಿವರಾಮಣ್ಣ ದೇವರ ಆರಾಧನೆ ಮಾಡುವಾಗಲೇ ಈ ಘಟನೆ ನಡೆದಿದೆ. ದೇವರೇ ಅವರನ್ನು ಕರೆಸಿಕೊಂಡಿದ್ದಾನೆ’ ಎಂದು ಜಯಮಾಲ ಹೇಳಿದ್ದಾರೆ.

ಇದನ್ನೂ ಓದಿ:

‘ಶಿವರಾಂ ನಡೆದಾಡುವ ಅಯ್ಯಪ್ಪ ಸ್ವಾಮಿ ಆಗಿದ್ರು; ಅವರಿಗೆ ಹಲವು ಅಭಿಷೇಕ ಮಾಡ್ತೀವಿ’: ಡಾ. ಎನ್​. ಜಯರಾಂ

‘ದೇವ್ರನ್ನ ನಂಬಬೇಕೋ ಬೇಡವೋ ಎಂಬಂತಾಗಿದೆ’; ಅಯ್ಯಪ್ಪ ಭಕ್ತ ಶಿವರಾಂ ನಿಧನಕ್ಕೆ ಬೆಂಗಳೂರು ನಾಗೇಶ್​ ಕಂಬನಿ

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!