AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವರಾಂ ಹೆಚ್ಚು ಹೊತ್ತು ನಮ್ಮ ಜತೆ ಇರಲ್ಲ’: ಬಿಕ್ಕಿ ಬಿಕ್ಕಿ ಅಳುತ್ತ ಮಾಹಿತಿ ನೀಡಿದ ಡಾ. ಮೋಹನ್​

Shivaram Health Update: ನಟ ಶಿವರಾಂ ಅವರ ಹೆಲ್ತ್​ ಅಪ್​ಡೇಟ್​ ನೀಡುವ ವೇಳೆ ಡಾಕ್ಟರ್ ಮೋಹನ್​ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ​ವೈದ್ಯರು ನೀಡಿದ ಮಾಹಿತಿ ಕೇಳಿ ಶಿವರಾಂ ಆಪ್ತರಲ್ಲಿ ಆತಂಕ ಹೆಚ್ಚಿದೆ.

‘ಶಿವರಾಂ ಹೆಚ್ಚು ಹೊತ್ತು ನಮ್ಮ ಜತೆ ಇರಲ್ಲ’: ಬಿಕ್ಕಿ ಬಿಕ್ಕಿ ಅಳುತ್ತ ಮಾಹಿತಿ ನೀಡಿದ ಡಾ. ಮೋಹನ್​
ಡಾ. ಮೋಹನ್, ಶಿವರಾಂ
TV9 Web
| Edited By: |

Updated on: Dec 04, 2021 | 12:30 PM

Share

ಹಿರಿಯ ನಟ ಶಿವರಾಂ (Senior Actor Shivaram) ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವುದು ಎಲ್ಲರಿಗೂ ನೋವುಂಟು ಮಾಡಿದೆ. ಬೆಂಗಳೂರಿನ ಬ್ಯಾಂಕ್​ ಕಾಲೋನಿಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕ್ಷಣಕ್ಷಣಕ್ಕೂ ಅವರ ಆರೋಗ್ಯ ಹದಗೆಡುತ್ತಿದೆ. ಅವರ ವಿಚಾರದಲ್ಲಿ ಮಿರಾಕಲ್​ ನಡೆಯಬಹುದು ಎಂದು ವೈದ್ಯರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಈಗ ಎಲ್ಲರ ಭರವಸೆ ಕುಸಿದು ಬೀಳುತ್ತಿದೆ. ಶಿವರಾಂ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ಮೋಹನ್​ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹೆಲ್ತ್​ ಅಪ್​ಡೇಟ್ (Shivaram Health Update)​ ನೀಡುವ ವೇಳೆ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ‘ಶಿವರಾಂ ಅವರು ಇನ್ನು ಹೆಚ್ಚು ಹೊತ್ತು ನಮ್ಮ ಜೊತೆ ಇರಲ್ಲ ಅಂತ ಹೇಳಲು ನನಗೆ ತುಂಬ ಕಷ್ಟ ಆಗುತ್ತಿದೆ’ ಎಂದು ಡಾ. ಮೋಹನ್​ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

‘ಹೆಚ್ಚುವರಿ ಚಿಕಿತ್ಸೆ ನೀಡಿದರೆ ಶಿವರಾಂ ಅವರ ದೇಹ ಸ್ಪಂದಿಸುತ್ತದೆ ಎಂಬ ಭರವಸೆ ಕಡಿಮೆ ಆಗಿದೆ. ಅವರು ನಮಗೆ ಜೀವನಾಡಿ ಆಗಿದ್ದರು. ರೋಗಿ ಎನ್ನುವುದಕ್ಕಿಂತಲೂ ನನಗೆ ಅವರು ಅಪ್ಪನ ಸ್ಥಾನದಲ್ಲಿ ಇದ್ದವರು. ಈಗ ಅವರಿಗೆ ಚಿಕಿತ್ಸೆ ನೀಡಲು ತುಂಬ ಕಷ್ಟ ಆಗುತ್ತಿದೆ. ಅವರ ಕಷ್ಟವನ್ನು ನೋಡಲು ಸಾಧ್ಯವಾಗುತ್ತಿಲ್ಲ. ಗರಿಷ್ಟ ಲೈಫ್​ ಸಪೋರ್ಟ್​ನಲ್ಲಿ ಅವರು ಇದ್ದಾರೆ. ಚೇತರಿಕೆ ಕಾಣುವ ಚಾನ್ಸ್​ ತುಂಬ ಕಡಿಮೆ ಇದೆ. ಇನ್ನು ಎಷ್ಟು ಗಂಟೆ, ಎಷ್ಟು ದಿನ ಅಂತ ಹೇಳುವುದು ಕಷ್ಟ’ ಎಂದು ಡಾ. ಮೋಹನ್​ ಮಾಹಿತಿ ನೀಡಿದ್ದಾರೆ.

‘ಶಿವರಾಂ ಕುಟುಂಬದವರು ಜೊತೆಯಲ್ಲೇ ಇದ್ದಾರೆ. ಕೊನೇ ಗಳಿಗೆವರೆಗೂ ಕೈಲಾದ ಹೋರಾಟ ಮಾಡಿ ಅಂತ ಅವರು ಹೇಳುತ್ತಿದ್ದಾರೆ. ಅವರಿಗೂ ಪರಿಸ್ಥಿತಿ ಅರ್ಥ ಆಗಿದೆ. ತುಂಬ ಸಹಕಾರ ನೀಡಿದ್ದಾರೆ. ಇಂದು (ಡಿ.4) ಶಿವರಾಂ ಅವರಿಗೆ ಎಂಆರ್​ಐ ಸ್ಕ್ಯಾನ್​ ಮಾಡುವುದು ಸಹ ಕಷ್ಟ ಆಗಿದೆ. ಹಾಸಿಗೆಯಿಂದ ಶಿಫ್ಟ್​ ಮಾಡಿದರೆ ಬಿಪಿ ಕಡಿಮೆ ಆಗಬಹುದು ಎಂಬ ಭಯ ಇದೆ. ಪರಿಸ್ಥಿತಿ ಹದಗೆಟ್ಟಿದೆ’ ಎಂದು ವೈದ್ಯರು ಹೇಳಿರುವುದು ಎಲ್ಲರಲ್ಲೂ ಆತಂಕ ಮೂಡಿಸಿದೆ.

‘ಬ್ರೇನ್​ ಮಾತ್ರವಲ್ಲದೇ ಹೃದಯಕ್ಕೂ ಸಂಬಂಧಿಸಿದ ವಿಚಾರ ಇದು. ಹಾಗಾಗಿ ಹೃದಯ ಹೇಗೆ ಸ್ಪಂದಿಸುತ್ತದೆ ಎಂಬುದನ್ನು ಗಮನಿಸಬೇಕು. ಸದ್ಯಕ್ಕಂತೂ ಏನೂ ಹೇಳಲು ಸಾಧ್ಯವಾಗುತ್ತಿಲ್ಲ. ಅವರಿಗೆ ಯಾವುದೇ ರೀತಿ ಹಿಂಸೆ ಆಗುತ್ತಿಲ್ಲ. ಶಾಂತವಾಗಿ ಇದ್ದಾರೆ. ಇಂದು ಶ್ವಾಸಕೋಶದಲ್ಲಿ ನೀರು ತುಂಬಿಕೊಳ್ಳುತ್ತಿದೆ. ಬಿಪಿ ಕುಸಿಯುತ್ತಿದೆ. ಇದರಿಂದ ಬಹು ಅಂಗಾಂಗಕ್ಕೆ ತೊಂದರೆ ಆಗುತ್ತಿದೆ’ ಎಂದು ಡಾ. ಮೋಹನ್​ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

‘ತಮ್ಮನನ್ನು ಕಳೆದುಕೊಂಡು ತಿಂಗಳಾಗಿದೆ; ಮತ್ತೆ ದೇವರು ಯಾಕೆ ನೋವು ಕೊಡ್ತಾನೋ ಗೊತ್ತಿಲ್ಲ’: ಶಿವರಾಂ ಬಗ್ಗೆ ಶಿವಣ್ಣನ ಮಾತು

ಹಿರಿಯ ನಟ ಶಿವರಾಂ​ ಅವರಿಗೆ ಆಗಿದ್ದೇನು? ಇಂಚಿಂಚೂ ವಿವರ ನೀಡಿದ ವೈದ್ಯರು

Follow Us
Web contact
Web contact

TV9 Kannada

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!