AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ಶಿವರಾಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ; ಆಸ್ಪತ್ರೆ ಕಡೆಯಿಂದ ಪಾಸಿಟಿವ್​ ಸುದ್ದಿ

ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಂದನವನದ ಅನೇಕ ಹಿರಿಯ ನಟ-ನಟಿಯರು ಬಂದು ಅವರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಹಿರಿಯ ನಟ ಶಿವರಾಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ; ಆಸ್ಪತ್ರೆ ಕಡೆಯಿಂದ ಪಾಸಿಟಿವ್​ ಸುದ್ದಿ
ನಟ ಶಿವರಾಂ
TV9 Web
| Edited By: |

Updated on: Dec 03, 2021 | 2:59 PM

Share

ಹಿರಿಯ ನಟ ಶಿವರಾಂ ಅವರು ಕೋಮಾ ಸ್ಥಿತಿಗೆ ಹೋಗಿದ್ದಾರೆ ಎನ್ನುವ ಸುದ್ದಿ ಸಾಕಷ್ಟು ಆತಂಕ ಮೂಡಿಸಿತ್ತು. ಇಂದು (ಡಿಸೆಂಬರ್​ 3) ಮುಂಜಾನೆವರೆಗೂ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಆದರೆ, ಮಧ್ಯಾಹ್ನದ ವೇಳೆಗೆ ಅವರು ಚಿಕಿತ್ಸೆಗೆ ಸ್ಪಂದಿಸಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಹಾಗೂ ಚಿತ್ರರಂಗದವರು ಖುಷಿಪಟ್ಟಿದ್ದಾರೆ. ಅವರು ಚೇತರಿಕೆ ಕಂಡು, ಆಸ್ಪತ್ರೆಯಿಂದ ಬೇಗ ಬಿಡುಗಡೆಯಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಶಿವರಾಂ ಅವರನ್ನು ಬೆಂಗಳೂರಿನ ಬ್ಯಾಂಕ್​ ಕಾಲೋನಿಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವರಾಂ ಅವರು ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಲು ಟೆರೆಸ್​ನಲ್ಲಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅಲ್ಲಿಗೆ ತೆರಳಿದ್ದಾಗ ಪ್ರಜ್ಞೆ ತಪ್ಪಿ ಬಿದ್ದರು. ಒಂದೂವರೆ ಗಂಟೆ ಬಳಿಕ ಅದು ತಿಳಿದುಬಂದಿತ್ತು. ನಂತರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎಂಆರ್​ಐ ಸ್ಕ್ಯಾನ್​ ಮಾಡಿದಾಗ ತಲೆ ಒಳಗೆ ಪೆಟ್ಟು ಬಿದ್ದಿರುವುದು ತಿಳಿದಿತ್ತು. ಅವರ ಆರೋಗ್ಯ ಇನ್ನಷ್ಟು ಗಂಭೀರ ಪರಿಸ್ಥಿತಿ ತಲುಪಿದೆ. ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿದ್ದಾರೆ ಎಂದು ಇಂದು ಮುಂಜಾನೆ ವರದಿ ಆಗಿತ್ತು. ಆದರೆ, ಮಧ್ಯಾಹ್ನದ ವೇಳೆಗೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ‘ಹಿರಿಯ ನಟ ಶಿವರಾಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ’ ಎಂದು ಆಸ್ಪತ್ರೆಯ ವೈದ್ಯ ಡಾ.ಮೋಹನ್​ ಮಾಹಿತಿ ನೀಡಿದ್ದಾರೆ. ಈ ಮೂಲಕ ಅವರು ಮತ್ತೆ ಚೇತರಿಕೆ ಕಾಣಬಹುದು ಎನ್ನುವ ಆಶಾಭಾವನೆ ತುಂಬಿದ್ದಾರೆ.

ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಂದನವನದ ಅನೇಕ ಹಿರಿಯ ನಟ-ನಟಿಯರು ಬಂದು ಅವರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿರೋದು ಅವರ ಕುಟುಂಬದವರು, ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಹಿರಿಯ ನಟ ಶಿವರಾಂ​ ಅವರಿಗೆ ಆಗಿದ್ದೇನು? ಇಂಚಿಂಚೂ ವಿವರ ನೀಡಿದ ವೈದ್ಯರು

‘ತಮ್ಮನನ್ನು ಕಳೆದುಕೊಂಡು ತಿಂಗಳಾಗಿದೆ; ಮತ್ತೆ ದೇವರು ಯಾಕೆ ನೋವು ಕೊಡ್ತಾನೋ ಗೊತ್ತಿಲ್ಲ’: ಶಿವರಾಂ ಬಗ್ಗೆ ಶಿವಣ್ಣನ ಮಾತು

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?