AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನೆ ಮೊನ್ನೆ ಬಂದವ್ರೆಲ್ಲ ನಂಬರ್ 1 ಅಂತಾರೋ’; ವೈಲ್ಡ್ ಕಾರ್ಡ್ ಎಂಟ್ರಿಗಳ ಪರ್ಫಾರ್ಮೆನ್ಸ್​ಗೆ ಮೂಲ ನಿವಾಸಿಗಳಿಗೆ ಹೊಟ್ಟೆ ಉರಿ

ಈ ವಾರ ಬಿಗ್ ಬಾಸ್ ಕನ್ನಡದಲ್ಲಿ ರಜತ್ ಮತ್ತು ಶೋಭಾ ಶೆಟ್ಟಿ ಅವರ ವೈಲ್ಡ್ ಕಾರ್ಡ್ ಎಂಟ್ರಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮೊದಲಿನಿಂದಲೂ ಇದ್ದ ಸ್ಪರ್ಧಿಗಳು ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕ್ಯಾಪ್ಟನ್ಸಿ ರೇಸ್‌ನಲ್ಲಿ ರಜತ್ ಮತ್ತು ಶೋಭಾ ಅವರ ಇರುವಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಿದೆ.

‘ನಿನ್ನೆ ಮೊನ್ನೆ ಬಂದವ್ರೆಲ್ಲ ನಂಬರ್ 1 ಅಂತಾರೋ’; ವೈಲ್ಡ್ ಕಾರ್ಡ್ ಎಂಟ್ರಿಗಳ ಪರ್ಫಾರ್ಮೆನ್ಸ್​ಗೆ ಮೂಲ ನಿವಾಸಿಗಳಿಗೆ ಹೊಟ್ಟೆ ಉರಿ
ರಜತ್, ಶೋಭಾ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Nov 23, 2024 | 7:22 AM

Share

ಈ ವಾರ ರಜತ್ ಹಾಗೂ ಶೋಭಾ ಶೆಟ್ಟಿ ಅವರು ದೊಡ್ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ. ಇಬ್ಬರೂ ಪ್ರಬಲ ಸ್ಪರ್ಧಿಗಳು ಎಂದು ಎನಿಸಿಕೊಂಡಿದ್ದಾರೆ. ಅವರು ಈ ವಾರ ಉತ್ತಮವಾಗಿ ಆಟ ಆಡಿದರು. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಆದರೆ, ಮೊದಲಿನಿಂದಲೂ ಇಲ್ಲಿಯೇ ಇದ್ದ ಸ್ಪರ್ಧಿಗಳಿಗೆ ಅವರ ಬಗ್ಗೆ ಹೊಟ್ಟೆ ಉರಿ ಶುರುವಾಗಿದೆ. ಈ ಬಗ್ಗೆ ಅವರು ನೇರವಾಗಿ ಹೇಳಿಕೊಂಡಿದ್ದಾರೆ.

ಈ ವಾರ ಎರಡು ತಂಡಗಳನ್ನು ಮಾಡಲಾಗಿತ್ತು. ಶೋಭಾ ಶೆಟ್ಟಿ, ಮಂಜು, ರಜತ್, ಹನುಮಂತ, ಗೌತಮಿ, ಚೈತ್ರಾ ಒಂದು ತಂಡದಲ್ಲಿ ಇದ್ದರೆ ಮತ್ತೊಂದು ತಂಡದಲ್ಲಿ ಭವ್ಯಾ, ತ್ರಿವಿಕ್ರಂ, ಧನರಾಜ್, ಶಿಶಿರ್ ಮೊದಲಾದವರು ಇದ್ದರು. ಶೋಭಾ ತಂಡದಲ್ಲಿ ಇದ್ದ ಶೋಭಾ, ಮಂಜು, ರಜತ್, ಹನುಮಂತ, ಚೈತ್ರಾ ಕ್ಯಾಪ್ಟನ್ಸಿ ರೇಸ್​ಗೆ ಬಂದರು. ಈ ಪೈಕಿ ರಜತ್ ಹಾಗೂ ಶೋಭಾ ಶೆಟ್ಟಿ ವೈಲ್ಡ್ ಕಾರ್ಡ್ ಎಂಟ್ರಿಗಳು. ಈ ವಿಚಾರ ಚರ್ಚೆಯ ಕೇಂದ್ರ ಬಿಂದು ಆಗಿದೆ.

ತ್ರಿವಿಕ್ರಂ ಅವರು ಗೌತಮಿ ಹಾಗೂ ಮಂಜು ಬಳಿ ಈ ವಿಚಾರ ಮಾತನಾಡಿದ್ದಾರೆ. ‘ನಮ್ಮ ತಂಡದ ಒಬ್ಬರೂ ಕ್ಯಾಪ್ಟನ್ಸಿ ರೇಸ್​ನಲ್ಲಿ ಇಲ್ಲ. ಅದು ಬೇಸರದ ವಿಚಾರ’ ಎಂದು ಹೇಳಿಕೊಂಡರು ತ್ರಿವಿಕ್ರಂ. ‘ನಾನು ಶೋಭಾ ತಂಡದಲ್ಲಿ ಇದ್ದ ಹೊರತಾಗಿಯೂ ಕ್ಯಾಪ್ಟನ್ಸಿ ರೇಸ್​ಗೆ ಹೋಗೋಕೆ ಆಗುತ್ತಿಲ್ಲ. ಅದು ನನಗೆಷ್ಟು ಬೇಸರ ಮೂಡಿಸಿರಬಹುದು ಎಂದು ಯೋಚಿಸಿದ್ದೀರಾ’ ಎಂಬುದಾಗಿ ಗೌತಮಿ ಹೇಳಿದರು. ಆಗ ತ್ರಿವಿಕ್ರಂ ಅವರು ಮಂಜು ಬಳಿ ಕೆಲ ವಿಚಾರವನ್ನು ನೇರವಾಗಿ ಹೇಳಿಕೊಂಡರು.

ಇದನ್ನೂ ಓದಿ: ಹನುಮಂತನಿಗೆ ಕ್ಯಾಪ್ಟನ್​ ಪಟ್ಟ ಜಸ್ಟ್ ಮಿಸ್; ನಾಯಕತ್ವ ಸಿಕ್ಕಿದ್ದು ಯಾರಿಗೆ?

ಶಿವರಾಜ್​ಕುಮಾರ್ ಹಾಗೂ ಸುದೀಪ್ ನಟನೆಯ ‘ದಿ ವಿಲನ್’ ಸಿನಿಮಾದ ಸಾಂಗ್​ನಲ್ಲಿ ಬರುವ ‘ನಿನ್ನೆ ಮೊನ್ನೆ ಬಂದವ್ರೆಲ್ಲ ನಂಬರ್ 1 ಅಂತಾರೋ..’ ಸಾಲುಗಳನ್ನು ಹೇಳಿದ್ದಾರೆ ತ್ರಿವಿಕ್ರಂ. ‘ಏನೇ ಆಗಲಿ ನೀವು ಕ್ಯಾಪ್ಟನ್ ಆಗಬೇಕು. ಅವರಿಗೆ (ರಜತ್ ಹಾಗೂ ಶೋಭಾ) ಬಿಟ್ಟುಕೊಡಬಾರದು’ ಎಂದರು. ಈ ಮೂಲಕ ಮೊದಲಿನಿಂದ ದೊಡ್ಮನೆಯಲ್ಲಿ ಇರುವ ಆಟಗಾರರನ್ನು ಕ್ಯಾಪ್ಟನ್ ಆಗಬೇಕು ಎಂದು ಅವರು ಅಂದುಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:21 am, Sat, 23 November 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್