AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ ಮರಣೋತ್ತರ ಪರೀಕ್ಷೆ ಅಂತ್ಯ; ನಟಿ ಸಾವಿಗೆ ಕಾರಣ ತಿಳಿಸಿದ ವೈದ್ಯರು

ಕನ್ನಡ ಕಿರುತೆರೆಯಲ್ಲಿ ಹೆಸರು ಗಳಿಸಿದ್ದ ನಟಿ ಶೋಭಿತಾ ಶಿವಣ್ಣ ಅವರು ನಿಧನರಾದ ಸುದ್ದಿ ತಿಳಿದು ಎಲ್ಲರಿಗೂ ನೋವಾಗಿದೆ. ಹೈದರಾಬಾದ್​ನಲ್ಲಿ ಅವರ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಪೋಸ್ಟ್​ ಮಾರ್ಟಮ್​ ಬಳಿಕ ವೈದ್ಯರು ನಟಿಯ ಸಾವಿಗೆ ಕಾರಣ ಏನು ಎಂಬದನ್ನು ತಿಳಿಸಿದ್ದಾರೆ. ಶೋಭಿತಾ ಶಿವಣ್ಣ ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಶೋಭಿತಾ ಮರಣೋತ್ತರ ಪರೀಕ್ಷೆ ಅಂತ್ಯ; ನಟಿ ಸಾವಿಗೆ ಕಾರಣ ತಿಳಿಸಿದ ವೈದ್ಯರು
ಶೋಭಿತಾ ಶಿವಣ್ಣ
ಮದನ್​ ಕುಮಾರ್​
|

Updated on: Dec 02, 2024 | 3:54 PM

Share

ಕನ್ನಡದ ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ಖ್ಯಾತಿ ಗಳಿಸಿದ್ದ ನಟಿ ಶೋಭಿತಾ ಶಿವಣ್ಣ ಅವರು ಡಿಸೆಂಬರ್​ 1ರಂದು ನಿಧನರಾದ ಸುದ್ದಿ ತಿಳಿದು ಎಲ್ಲರಿಗೂ ನೋವಾಗಿದೆ. ಹೈದರಾಬಾದ್​ನಲ್ಲಿ ಅವರು ಸಾವನ್ನಪ್ಪಿದ್ದಾರೆ. ಇಂದು (ಡಿಸೆಂಬರ್​ 2) ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಪೋಸ್ಟ್​ ಮಾರ್ಟಮ್​ ಅಂತ್ಯಗೊಂಡ ಬಳಿಕ ವೈದ್ಯರು ನಟಿಯ ಸಾವಿಗೆ ಕಾರಣ ಏನು ಎಂಬದನ್ನು ತಿಳಿಸಿದ್ದಾರೆ. ಶೋಭಿತಾ ಶಿವಣ್ಣ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಆತ್ಮಹತ್ಯೆಯಿಂದಲೇ ಶೋಭಿತಾ ನಿಧರಾಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಶೋಭಿತಾ ಅವರು ಮದುವೆ ಆದ ಬಳಿಕ ಹೈದರಾಬಾದ್​ನಲ್ಲಿ ಪತಿಯ ಜೊತೆ ನೆಲೆಸಿದ್ದರು. ಅಪಾರ್ಟ್​ಮೆಂಟ್​ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಯಾರಾದರೂ ನಟಿಯನ್ನು ಹತ್ಯೆ ಮಾಡಿರಬಹುದೇ ಎಂಬ ಪ್ರಶ್ನೆ ಕೂಡ ಉದ್ಭವ ಆಗಿತ್ತು. ಆದರೆ ಶೋಭಿತಾ ಅವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಾಣಿಸಿಲ್ಲ. ಹಾಗಾಗಿ ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂಬುದು ಖಚಿತವಾಗಿದೆ.

ಶೋಭಿತಾ ಸಾವಿನ ಬಗ್ಗೆ ಪೊಲೀಸರು ಈಗಾಗಲೇ ತನಿಖೆ ಆರಂಭಿದ್ದಾರೆ. ಶೋಭಿತಾ ಬರೆದಿದ್ದರು ಎನ್ನಲಾದ ಸೂಸೈಡ್​ ನೋಟ್​ ಕೂಡ ಲಭ್ಯವಾಗಿದೆ. ‘ನೀನು ಸಾಯಬಹುದು ಅಂದ್ರೆ ನೀನು ಸಾಯಬಹುದು’ ಎಂದು ಇದರಲ್ಲಿ ಬರೆಯಲಾಗಿದೆ. ಅಲ್ಲದೇ, ‘ಜೀವನದಲ್ಲಿ ಎಲ್ಲವೂ ಪರ್ಫೆಕ್ಟ್ ಆಗಿದೆ’ ಎಂದು ಸಹ ಬರೆಯಲಾಗಿದ್ದು, ಈ ಸಾಲುಗಳ ಅರ್ಥ ಏನು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಕಿರುತೆರೆ ನಟಿ ಶೋಭಿತಾ ಶಿವಣ್ಣ ದುರಂತ ಅಂತ್ಯ

ನಟಿಯ ಆತ್ಮಹತ್ಯೆ ಸಂಬಂಧಿಸಿದಂತೆ ನೆರೆಹೊರೆಯವರಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಶೋಭಿತಾ ಅವರ ಸಂಸಾರದಲ್ಲಿ ಏನಾದರೂ ಬಿರುಕು ಮೂಡಿತ್ತಾ ಎಂಬುದನ್ನು ಕೂಡ ಪತ್ತೆ ಹಚ್ಚಲಾಗುತ್ತಿದೆ. ಶೋಭಿತಾ ಅವರು ಮೂಲತಃ ಹಾಸನ‌‌ ಮೂಲದ ಸಕಲೇಶಪುರದವರು. ಹೈದರಾಬಾದ್​ನಲ್ಲಿ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಕುಟುಂಬದವರು ಬೆಂಗಳೂರಿಗೆ ಮೃತದೇಹ ತರುತ್ತಿದ್ದಾರೆ ಎಂಬ ಮಾಹಿತಿ ಇದೆ.

‘ಎರಡೊಂದ್ಲಾ ಮೂರು’, ‘ಒಂದ್‌ ಕಥೆ ಹೇಳ್ಲಾ’, ‘ಎಟಿಎಮ್’, ‘ಫಸ್ಟ್​ ಡೇ ಫಸ್ಟ್​ ಶೋ’ ಮುಂತಾದ ಸಿನಿಮಾಗಳಲ್ಲಿ ಶೋಭಿತಾ ಅವರು ನಟಿಸಿದ್ದರು. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರಿಗೆ ಜನಪ್ರಿಯತೆ ಹೆಚ್ಚಿತ್ತು. ‘ದೀಪವು ನಿನ್ನದೇ ಗಾಳಿಯೂ ನಿನ್ನದೇ’, ‘ಮಂಗಳಗೌರಿ ಮದುವೆ’, ‘ಕೃಷ್ಣ ರುಕ್ಮಿಣಿ’, ‘ಮನೆ ದೇವ್ರು’, ‘ಗಾಳಿಪಟ’, ‘ಅಮ್ಮಾವ್ರು’ ಮುಂತಾದ ಸೀರಿಯಲ್​ಗಳಲ್ಲಿ ಕೂಡ ಅವರು ಅಭಿನಯಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!