AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಥಿ ಐ ಲವ್​ ಯೂ’ ಚಿತ್ರದಲ್ಲಿ ಶ್ರಾವ್ಯಾ-ಲೋಕೇಂದ್ರ ಸೂರ್ಯ; ನೆರವೇರಿತು ಮುಹೂರ್ತ

Shravya Rao | Lokendra Surya: ‘ಅಥಿ ಐ ಲವ್​ ಯೂ’ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಸೆವೆನ್‌ ರಾಜ್‌ ಆರ್ಟ್ಸ್‌ ಬ್ಯಾನರ್‌ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

‘ಅಥಿ ಐ ಲವ್​ ಯೂ’ ಚಿತ್ರದಲ್ಲಿ ಶ್ರಾವ್ಯಾ-ಲೋಕೇಂದ್ರ ಸೂರ್ಯ; ನೆರವೇರಿತು ಮುಹೂರ್ತ
‘ಅಥಿ ಐ ಲವ್ ಯೂ’ ಚಿತ್ರದ ಮುಹೂರ್ತ ಸಮಾರಂಭ
ಮದನ್​ ಕುಮಾರ್​
|

Updated on:Feb 12, 2023 | 1:31 PM

Share

ನಟ, ನಿರ್ದೇಶಕ ಹಾಗೂ ಛಾಯಾಗ್ರಾಹಕನಾಗಿ ಕನ್ನಡ ಚಿತ್ರರಂಗದಲ್ಲಿ ತೊಡಗಿಕೊಂಡಿರುವ ಲೋಕೇಂದ್ರ ಸೂರ್ಯ (Lokendra Surya) ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೆ ‘ಅಥಿ ಐ ಲವ್​ ಯೂ’ ಎಂದು ಶೀರ್ಷಿಕೆ ಇಡಲಾಗಿದೆ. ಲೋಕೇಂದ್ರ ಅವರೇ ಈ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಹೀರೋ ಆಗಿಯೂ ನಟಿಸುತ್ತಿದ್ದಾರೆ. ಫೆಬ್ರವರಿ 7ರ ಬೆಳಿಗ್ಗೆ ಬೆಂಗಳೂರಿನ ರಾಜಾಜಿನಗರದ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ‘ಅಥಿ ಐ ಲವ್​ ಯೂ’ (Athi I love You) ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್‌ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿ ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿದರು. ಭಾ.ಮ. ಗಿರೀಶ್‌ ಅವರು ಕ್ಯಾಮೆರಾ ಚಾಲನೆ ಮಾಡಿದರು.

‘ಅಥಿ ಐ ಲವ್​ ಯೂ’ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಸೆವೆನ್‌ ರಾಜ್‌ ಆರ್ಟ್ಸ್‌ ಬ್ಯಾನರ್‌ ಮೂಲಕ ರೆಡ್‌ ಅಂಡ್‌ ವೈಟ್‌ ಸೆವೆನ್‌ ರಾಜ್‌ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಯುಡಿವಿ ವೆಂಕಿ ಸಂಕಲನ, ಅನಂತ್‌ ಆರ್ಯನ್‌ ಸಂಗೀತ ನಿರ್ದೇಶನ, ಋತು ಚೈತ್ರಾ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ.

ಇದನ್ನೂ ಓದಿ: Kabzaa: ನಾರ್ತ್​ ಅಮೆರಿಕದಲ್ಲಿ ಕನ್ನಡದ ‘ಕಬ್ಜ’ ಚಿತ್ರಕ್ಕೆ ಭಾರಿ ಡಿಮ್ಯಾಂಡ್​; ರಿಲೀಸ್​ಗೆ ಭರ್ಜರಿ ತಯಾರಿ

ಇದನ್ನೂ ಓದಿ
Image
KCC: ಕೆಸಿಸಿ ಪಂದ್ಯಗಳ ಬಗ್ಗೆ ಮಾಹಿತಿ ನೀಡಿದ ಕಿಚ್ಚ ಸುದೀಪ್​; ಪೂರ್ತಿ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ
Image
Ashika Ranganath: ‘ಟಾಲಿವುಡ್​ಗೆ ಹೋದ ಮಾತ್ರಕ್ಕೆ ಕನ್ನಡ ಮರೆಯಲ್ಲ’; ಅಭಿಮಾನಿಗಳಿಗೆ ಆಶಿಕಾ ರಂಗನಾಥ್​ ಭರವಸೆ
Image
ಐದು ಕಡೆ ಐಷಾರಾಮಿ ಅಪಾರ್ಟ್​ಮೆಂಟ್ ಹೊಂದಿದ್ದಾರೆ ರಶ್ಮಿಕಾ ಮಂದಣ್ಣ? ಸ್ಪಷ್ಟನೆ ನೀಡಿದ ನಟಿ
Image
ರಿಷಬ್ ಜತೆ ಫೋಟೋ ಹಂಚಿಕೊಂಡು ‘ಕಾಂತಾರ 2’ ಲೋಡಿಂಗ್ ಎಂದ ಊರ್ವಶಿ ರೌಟೇಲಾ; ನಾಯಕಿ ಫೈನಲ್?  

ನಟಿ ಶ್ರಾವ್ಯಾ ರಾವ್‌ ಅವರು ‘ಅಥಿ ಐ ಲವ್​ ಯೂ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ‘ಇತ್ತೀಚಿನ ದಿನಗಳಲ್ಲಿ ಅನೇಕ ಕಥೆಗಳನ್ನು ಕೇಳಿದ್ದೇನೆ. ಆದರೆ ಈ ಸಿನಿಮಾದ ಕಥೆ ನನಗೆ ಬಹಳ ಇಷ್ಟವಾಯ್ತು. ಈ ಪಾತ್ರ ಮತ್ತು ಸಿನಿಮಾ ಎರಡೂ ಕನ್ನಡದ ಮಟ್ಟಿಗೆ ತೀರಾ ಹೊಸದು. ಇಡೀ ಚಿತ್ರ ನನ್ನ ಪಾತ್ರದ ಸುತ್ತವೇ ಹೆಚ್ಚು ಸಾಗುತ್ತದೆ. ಅದು ನನಗೆ ಖುಷಿ ನೀಡಿದೆ’ ಎಂದಿದ್ದಾರೆ ಶ್ರಾವ್ಯಾ ರಾವ್‌.

ಇದನ್ನೂ ಓದಿ: Film City: ಮೈಸೂರಿನಲ್ಲಿ ಫಿಲ್ಮ್​ ಸಿಟಿ ನಿರ್ಮಾಣಕ್ಕೆ ಸಿಎಂಗೆ ಮನವಿ; ಕನ್ನಡದ ಸೆಲೆಬ್ರಿಟಿಗಳ ಜತೆ ಬಾಲಿವುಡ್​ ಮಂದಿ ಸಹಿ

ಕಥೆಯ ಎಳೆ ಏನು ಎಂಬ ಬಗ್ಗೆ ಲೋಕೇಂದ್ರ ಸೂರ್ಯ ​ ಮಾತನಾಡಿದ್ದಾರೆ. ‘ಇದು ಗಂಡ-ಹೆಂಡತಿ ನಡುವೆ ಒಂದು ದಿನದಲ್ಲಿ ನಡೆಯುವ ಕಥೆ. ಎರಡು ಪಾತ್ರಗಳನ್ನು ಮುಖ್ಯವಾಗಿ ಇಟ್ಟುಕೊಂಡು ಚಿತ್ರಕಥೆ ಬರೆಯಲಾಗಿದೆ. ಗಂಡ ಕೆಲಸಕ್ಕೆಂದು ಹೊರಗೆ ಹೋದ ನಂತರ ನಡೆಯುವ ಒಂದಷ್ಟು ಘಟನೆಗಳನ್ನು ರೋಚಕವಾಗಿ ತೋರಿಸಲಾಗುತ್ತದೆ’ ಎಂದಿದ್ದಾರೆ ಲೋಕೇಂದ್ರ ಸೂರ್ಯ.

ಲೋಕೇಂದ್ರ ಸೂರ್ಯ ಹಿನ್ನಲೆ:

‘ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು’ ಚಿತ್ರದ ಮೂಲಕ ಲೋಕೇಂದ್ರ ಸೂರ್ಯ ಖ್ಯಾತಿ ಗಳಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಆ ಸಿನಿಮಾಗೆ ಜನ ಮೆಚ್ಚುಗೆ ಸಿಕ್ಕಿತ್ತು. ಆ ಬಳಿಕ ‘ಚೆಡ್ಡಿದೋಸ್ತ್​’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಟಿಸಿದ್ದರು. ನಂತರ ಥ್ರಿಲ್ಲರ್‌ ಮಂಜು ಅವರ ‘ಡೆಡ್ಲಿ ಕಿಲ್ಲರ್‌’ ಸಿನಿಮಾದಲ್ಲಿ ಲೋಕೇಂದ್ರ ಅವರು ವಿಲನ್​ ಆಗಿ ಕಾಣಿಸಿಕೊಂಡರು. ಇತ್ತೀಚೆಗೆ ಸಿಂಗಾಪೂರದ ಕಾರ್ನಿವಲ್‌ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿ ಪಡೆದ ‘ಕುಗ್ರಾಮ’ ಸಿನಿಮಾಗೆ ನಿರ್ದೇಶನ ಮಾಡಿದ್ದು ಕೂಡ ಲೋಕೇಂದ್ರ. ಬಿಡುಗಡೆಗೆ ಸಿದ್ಧವಾಗಿರುವ ರೆಡಿಯಾಗಿರುವ ‘ಬ್ರಹ್ಮಕಮಲ’ ಚಿತ್ರಕ್ಕೂ ಅವರು ಛಾಯಾಗ್ರಹಣ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:31 pm, Sun, 12 February 23

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು