‘ಅಥಿ ಐ ಲವ್​ ಯೂ’ ಚಿತ್ರದಲ್ಲಿ ಶ್ರಾವ್ಯಾ-ಲೋಕೇಂದ್ರ ಸೂರ್ಯ; ನೆರವೇರಿತು ಮುಹೂರ್ತ

Shravya Rao | Lokendra Surya: ‘ಅಥಿ ಐ ಲವ್​ ಯೂ’ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಸೆವೆನ್‌ ರಾಜ್‌ ಆರ್ಟ್ಸ್‌ ಬ್ಯಾನರ್‌ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

‘ಅಥಿ ಐ ಲವ್​ ಯೂ’ ಚಿತ್ರದಲ್ಲಿ ಶ್ರಾವ್ಯಾ-ಲೋಕೇಂದ್ರ ಸೂರ್ಯ; ನೆರವೇರಿತು ಮುಹೂರ್ತ
‘ಅಥಿ ಐ ಲವ್ ಯೂ’ ಚಿತ್ರದ ಮುಹೂರ್ತ ಸಮಾರಂಭ

Updated on: Feb 12, 2023 | 1:31 PM

ನಟ, ನಿರ್ದೇಶಕ ಹಾಗೂ ಛಾಯಾಗ್ರಾಹಕನಾಗಿ ಕನ್ನಡ ಚಿತ್ರರಂಗದಲ್ಲಿ ತೊಡಗಿಕೊಂಡಿರುವ ಲೋಕೇಂದ್ರ ಸೂರ್ಯ (Lokendra Surya) ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೆ ‘ಅಥಿ ಐ ಲವ್​ ಯೂ’ ಎಂದು ಶೀರ್ಷಿಕೆ ಇಡಲಾಗಿದೆ. ಲೋಕೇಂದ್ರ ಅವರೇ ಈ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಹೀರೋ ಆಗಿಯೂ ನಟಿಸುತ್ತಿದ್ದಾರೆ. ಫೆಬ್ರವರಿ 7ರ ಬೆಳಿಗ್ಗೆ ಬೆಂಗಳೂರಿನ ರಾಜಾಜಿನಗರದ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ‘ಅಥಿ ಐ ಲವ್​ ಯೂ’ (Athi I love You) ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್‌ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿ ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿದರು. ಭಾ.ಮ. ಗಿರೀಶ್‌ ಅವರು ಕ್ಯಾಮೆರಾ ಚಾಲನೆ ಮಾಡಿದರು.

‘ಅಥಿ ಐ ಲವ್​ ಯೂ’ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಸೆವೆನ್‌ ರಾಜ್‌ ಆರ್ಟ್ಸ್‌ ಬ್ಯಾನರ್‌ ಮೂಲಕ ರೆಡ್‌ ಅಂಡ್‌ ವೈಟ್‌ ಸೆವೆನ್‌ ರಾಜ್‌ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಯುಡಿವಿ ವೆಂಕಿ ಸಂಕಲನ, ಅನಂತ್‌ ಆರ್ಯನ್‌ ಸಂಗೀತ ನಿರ್ದೇಶನ, ಋತು ಚೈತ್ರಾ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ.

ಇದನ್ನೂ ಓದಿ: Kabzaa: ನಾರ್ತ್​ ಅಮೆರಿಕದಲ್ಲಿ ಕನ್ನಡದ ‘ಕಬ್ಜ’ ಚಿತ್ರಕ್ಕೆ ಭಾರಿ ಡಿಮ್ಯಾಂಡ್​; ರಿಲೀಸ್​ಗೆ ಭರ್ಜರಿ ತಯಾರಿ

ಇದನ್ನೂ ಓದಿ
KCC: ಕೆಸಿಸಿ ಪಂದ್ಯಗಳ ಬಗ್ಗೆ ಮಾಹಿತಿ ನೀಡಿದ ಕಿಚ್ಚ ಸುದೀಪ್​; ಪೂರ್ತಿ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ
Ashika Ranganath: ‘ಟಾಲಿವುಡ್​ಗೆ ಹೋದ ಮಾತ್ರಕ್ಕೆ ಕನ್ನಡ ಮರೆಯಲ್ಲ’; ಅಭಿಮಾನಿಗಳಿಗೆ ಆಶಿಕಾ ರಂಗನಾಥ್​ ಭರವಸೆ
ಐದು ಕಡೆ ಐಷಾರಾಮಿ ಅಪಾರ್ಟ್​ಮೆಂಟ್ ಹೊಂದಿದ್ದಾರೆ ರಶ್ಮಿಕಾ ಮಂದಣ್ಣ? ಸ್ಪಷ್ಟನೆ ನೀಡಿದ ನಟಿ
ರಿಷಬ್ ಜತೆ ಫೋಟೋ ಹಂಚಿಕೊಂಡು ‘ಕಾಂತಾರ 2’ ಲೋಡಿಂಗ್ ಎಂದ ಊರ್ವಶಿ ರೌಟೇಲಾ; ನಾಯಕಿ ಫೈನಲ್?  

ನಟಿ ಶ್ರಾವ್ಯಾ ರಾವ್‌ ಅವರು ‘ಅಥಿ ಐ ಲವ್​ ಯೂ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ‘ಇತ್ತೀಚಿನ ದಿನಗಳಲ್ಲಿ ಅನೇಕ ಕಥೆಗಳನ್ನು ಕೇಳಿದ್ದೇನೆ. ಆದರೆ ಈ ಸಿನಿಮಾದ ಕಥೆ ನನಗೆ ಬಹಳ ಇಷ್ಟವಾಯ್ತು. ಈ ಪಾತ್ರ ಮತ್ತು ಸಿನಿಮಾ ಎರಡೂ ಕನ್ನಡದ ಮಟ್ಟಿಗೆ ತೀರಾ ಹೊಸದು. ಇಡೀ ಚಿತ್ರ ನನ್ನ ಪಾತ್ರದ ಸುತ್ತವೇ ಹೆಚ್ಚು ಸಾಗುತ್ತದೆ. ಅದು ನನಗೆ ಖುಷಿ ನೀಡಿದೆ’ ಎಂದಿದ್ದಾರೆ ಶ್ರಾವ್ಯಾ ರಾವ್‌.

ಇದನ್ನೂ ಓದಿ: Film City: ಮೈಸೂರಿನಲ್ಲಿ ಫಿಲ್ಮ್​ ಸಿಟಿ ನಿರ್ಮಾಣಕ್ಕೆ ಸಿಎಂಗೆ ಮನವಿ; ಕನ್ನಡದ ಸೆಲೆಬ್ರಿಟಿಗಳ ಜತೆ ಬಾಲಿವುಡ್​ ಮಂದಿ ಸಹಿ

ಕಥೆಯ ಎಳೆ ಏನು ಎಂಬ ಬಗ್ಗೆ ಲೋಕೇಂದ್ರ ಸೂರ್ಯ ​ ಮಾತನಾಡಿದ್ದಾರೆ. ‘ಇದು ಗಂಡ-ಹೆಂಡತಿ ನಡುವೆ ಒಂದು ದಿನದಲ್ಲಿ ನಡೆಯುವ ಕಥೆ. ಎರಡು ಪಾತ್ರಗಳನ್ನು ಮುಖ್ಯವಾಗಿ ಇಟ್ಟುಕೊಂಡು ಚಿತ್ರಕಥೆ ಬರೆಯಲಾಗಿದೆ. ಗಂಡ ಕೆಲಸಕ್ಕೆಂದು ಹೊರಗೆ ಹೋದ ನಂತರ ನಡೆಯುವ ಒಂದಷ್ಟು ಘಟನೆಗಳನ್ನು ರೋಚಕವಾಗಿ ತೋರಿಸಲಾಗುತ್ತದೆ’ ಎಂದಿದ್ದಾರೆ ಲೋಕೇಂದ್ರ ಸೂರ್ಯ.

ಲೋಕೇಂದ್ರ ಸೂರ್ಯ ಹಿನ್ನಲೆ:

‘ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು’ ಚಿತ್ರದ ಮೂಲಕ ಲೋಕೇಂದ್ರ ಸೂರ್ಯ ಖ್ಯಾತಿ ಗಳಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಆ ಸಿನಿಮಾಗೆ ಜನ ಮೆಚ್ಚುಗೆ ಸಿಕ್ಕಿತ್ತು. ಆ ಬಳಿಕ ‘ಚೆಡ್ಡಿದೋಸ್ತ್​’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಟಿಸಿದ್ದರು. ನಂತರ ಥ್ರಿಲ್ಲರ್‌ ಮಂಜು ಅವರ ‘ಡೆಡ್ಲಿ ಕಿಲ್ಲರ್‌’ ಸಿನಿಮಾದಲ್ಲಿ ಲೋಕೇಂದ್ರ ಅವರು ವಿಲನ್​ ಆಗಿ ಕಾಣಿಸಿಕೊಂಡರು. ಇತ್ತೀಚೆಗೆ ಸಿಂಗಾಪೂರದ ಕಾರ್ನಿವಲ್‌ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿ ಪಡೆದ ‘ಕುಗ್ರಾಮ’ ಸಿನಿಮಾಗೆ ನಿರ್ದೇಶನ ಮಾಡಿದ್ದು ಕೂಡ ಲೋಕೇಂದ್ರ. ಬಿಡುಗಡೆಗೆ ಸಿದ್ಧವಾಗಿರುವ ರೆಡಿಯಾಗಿರುವ ‘ಬ್ರಹ್ಮಕಮಲ’ ಚಿತ್ರಕ್ಕೂ ಅವರು ಛಾಯಾಗ್ರಹಣ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:31 pm, Sun, 12 February 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us