Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರಗಜ್ಜ’ ಸಿನಿಮಾ ಹಾಡುಗಳಿಗೆ ಶ್ರೇಯಾ ಘೋಷಾಲ್, ಶಂಕರ್ ಮಹಾದೇವನ್ ಧ್ವನಿ

ಒಂದಷ್ಟು ಕಾರಣಗಳಿಂದ ‘ಕೊರಗಜ್ಜ’ ಸಿನಿಮಾ ಮೇಲೆ ಕುತೂಹಲ ಮೂಡಿದೆ. ಈ ಸಿನಿಮಾದ ಹಾಡುಗಳಿಗೆ ದೇಶದ ಖ್ಯಾತ ಗಾಯಕರು ಧ್ವನಿ ನೀಡಿದ್ದಾರೆ. ಈ ಬಗ್ಗೆ ಚಿತ್ರತಂಡದವರು ಮಾಹಿತಿ ನೀಡಿದ್ದಾರೆ. ಈ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸುಧೀರ್ ಅತ್ತಾವರ್ ಅವರ ನಿರ್ದೇಶನದಲ್ಲಿ ‘ಕೊರಗಜ್ಜ’ ಸಿನಿಮಾ ಮೂಡಿಬರುತ್ತಿದೆ.

‘ಕೊರಗಜ್ಜ’ ಸಿನಿಮಾ ಹಾಡುಗಳಿಗೆ ಶ್ರೇಯಾ ಘೋಷಾಲ್, ಶಂಕರ್ ಮಹಾದೇವನ್ ಧ್ವನಿ
Shreya Ghoshal With Koragajja Movie Team
Follow us
ಮದನ್​ ಕುಮಾರ್​
|

Updated on: Jan 05, 2025 | 5:42 PM

‘ಕೊರಗಜ್ಜ’ ಸಿನಿಮಾ ಸೆಟ್ಟೇರಿದ ದಿನದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗುತ್ತಿದೆ. ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ಸುಧೀರ್ ಅತ್ತಾವರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಕೊರಗಜ್ಜ’ ಸಿನಿಮಾದಲ್ಲಿ ಶ್ರೇಯಾ ಘೋಷಾಲ್, ಶಂಕರ್ ಮಹಾದೇವನ್ ಅವರಂತಹ ಖ್ಯಾತ ಗಾಯಕರ ಹಾಡುಗಳು ಇರಲಿವೆ. ‘ತ್ರಿವಿಕ್ರಮ ಸಿನಿಮಾಸ್’ ಹಾಗೂ ‘ಸಕ್ಸಸ್ ಫಿಲ್ಮ್ಸ್​’ ಬ್ಯಾನರ್ ಮೂಲಕ ಮೂಡಿಬರುತ್ತಿರುವ ಈ ಸಿನಿಮಾಗೆ ಕಳೆದ ವಾರವಷ್ಟೇ ಶ್ರೇಯಾ ಘೋಷಾಲ್ ಅವರು ಎರಡು ಹಾಡುಗಳ ರೆಕಾರ್ಡಿಂಗ್ ಮುಗಿಸಿಕೊಟ್ಟಿದ್ದಾರೆ.

‘ಕೊರಗಜ್ಜ’ ಸಿನಿಮಾದ ಹಾಡಿನ ಸಾಹಿತ್ಯಕ್ಕೆ ಮಾರುಹೋದ ಶ್ರೇಯಾ ಘೋಷಾಲ್ ಅವರು ಕನ್ನಡ ಹಾಡುಗಳ ಸೊಬಗನ್ನು ಸಂಭ್ರಮಿಸಿದರು. ‘ಕನ್ನಡ ಸಿನಿಮಾ ಸಾಹಿತ್ಯ ಉತ್ಕ್ರಷ್ಟ ಮಟ್ಟದಲ್ಲಿ ಇರುತ್ತದೆ . ಆದ್ದರಿಂದ ಕನ್ನಡದ ಸಿನಿಮಾ ಗೀತೆಗಳಿಗೆ ಹೆಚ್ಚು ಆದ್ಯತೆ ನೀಡುತ್ತೇನೆ’ ಎಂದು ಶ್ರೇಯಾ ಘೋಷಾಲ್ ಹೇಳಿರುವುದಾಗಿ ‘ಕೊರಗಜ್ಜ’ ಚಿತ್ರತಂಡದವರು ತಿಳಿಸಿದ್ದಾರೆ.

ಈ ಚಿತ್ರದ ‘ಗಾಳಿಗಂಧ’ ಎಂಬ ಹಾಡನ್ನು ಶ್ರೇಯಾ ಅವರ ಜೊತೆ ಅದರ ಸೋನು ನಿಗಮ್ ಮತ್ತು ಶಾನ್ ಹಾಡಲಿದ್ದಾರೆ. ಉಳಿದಂತೆ ‘ಪೋರ್ಕುಳಿ ಪೆರತದಲಿ’ ಎಂಬ ಹಾಡನ್ನು ಸುನಿಧಿ ಚೌಹಾಣ್ ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಹಾಡಿದ್ದಾರೆ. ‘ವಾಜೀ ಸವಾರಿಯಲಿ’ ಹಾಗೂ ‘ಜಾವಂದ ಕುಲದ..’ ಎಂಬ ಹಾಡುಗಳನ್ನು ಜಾವೆದ್ ಆಲಿ ಹಾಡಿದ್ದಾರೆ.

‘ತೌಳವ ದೇಶೇ…’ ಎಂಬ 7 ನಿಮಿಷಗಳ ವಿಶೇಷವಾದ ಸಂಸ್ಕ್ರತ ಹಾಡನ್ನು ಶಂಕರ್ ಮಹದೇವನ್ ಹಾಡಿದ್ದಾರೆ. ‘ಪಿಕೆ’, ‘ಪದ್ಮಾವತ್’ ಸಿನಿಮಾಗಳ ಹಿನ್ನೆಲೆ ಗಾಯಕ ಸ್ವರೂಪ್ ಖಾನ್ ಹಾಗೂ ಪಾಪ್ ಗಾಯಕಿ ಶರೋನ್ ಪ್ರಭಾಕರ್ ಅವರು ‘ತೆಲ್ಲಂಟಿ.. ತೆಲ್ಲಂಟಿ…’ ಗೀತೆಗೆ ಧ್ವನಿ ಆಗಿದ್ದಾರೆ. ಪ್ರತಿಮಾ ಭಟ್, ರಮೇಶ್ ಚಂದ್ರ, ಸನ್ನಿಧಾನಂದನ್, ಕಾಂಜನ ಶ್ರೀರಾಂ, ಅನಿಲ ರಾಜಿವ, ಸೌಮ್ಯ ರಾಮಕೃಷ್ಣನ್, ವಿಜೇಶ್ ಗೋಪಾಲ್ ಅವರು ಸಹ ಹಾಡುಗಳನ್ನು ಹಾಡಿದ್ದಾರೆ.

ಇದನ್ನೂ ಓದಿ: ಕೊರಗಜ್ಜನ ಕೃಪೆ: ಮಣ್ಣಿನ ರಾಶಿಯಲ್ಲಿ ಚೈತ್ರಾ ಕಳೆದುಕೊಂಡ ಚಿನ್ನದ ಉಂಗುರ ಕೂಡಲೇ ಪತ್ತೆ

ದಕ್ಷಿಣದ ಖ್ಯಾತ ಗೋಪಿ ಸುಂದರ್ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲಾ ಗೀತೆಗಳನ್ನು ಸುಧೀರ್ ಅತ್ತಾವರ್ ಅವರು ರಚಿಸಿದ್ದಾರೆ. ಚಿತ್ರದ ಆಡಿಯೋ ಲಾಂಚ್, ಫಸ್ಟ್ ಲುಕ್ ಮತ್ತು ಟ್ರೇಲರ್ ಬಿಡುಗಡೆ ಕಾರ್ಯಕ್ರಮವನ್ನು ಡಿಫರೆಂಟ್​ ಆಗಿ ಮಾಡಲು ಪ್ಲ್ಯಾನ್ ನಡೆಯುತ್ತಿದೆ ಎಂದು ‘ಕೊರಗಜ್ಜ’ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ