AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಒಪ್ಪಿಕೊಂಡ ಶ್ರೇಯಸ್ ಮಂಜು; ಯಂಗ್ ಹೀರೋಗೆ ಜೊತೆಯಾದ ಪ್ರಿಯಾಂಕಾ ಕುಮಾರ್

ವಿಷ್ಣು ಪ್ರಿಯ’ದಲ್ಲಿ ಶ್ರೇಯಸ್ ಕೆ. ಮಂಜು ನಟಿಸಿದ್ದಾರೆ. ಈ ಚಿತ್ರದ ರಿಲೀಸ್​ನ ಅವರು ಎದುರುನೋಡುತ್ತಿದ್ದಾರೆ. ಹೀಗಿರುವಾಗಲೇ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಹೊಸ ಸಿನಿಮಾ ಒಪ್ಪಿಕೊಂಡ ಶ್ರೇಯಸ್ ಮಂಜು; ಯಂಗ್ ಹೀರೋಗೆ ಜೊತೆಯಾದ ಪ್ರಿಯಾಂಕಾ ಕುಮಾರ್
ಶ್ರೇಯಸ್ ಹೊಸ ಸಿನಿಮಾಗೆ ಪ್ರಿಯಾಂಕಾ ಕುಮಾರ್ ನಾಯಕಿ
ರಾಜೇಶ್ ದುಗ್ಗುಮನೆ
|

Updated on:Apr 01, 2023 | 8:23 AM

Share

‘ಪಡ್ಡೆಹುಲಿ’, ‘ರಾಣಾ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್ ಕೆ. ಮಂಜು (Shreyas K Manju) ಅವರು ಹೊಸ ಸಿನಿಮಾ ಘೋಷಿಸಿದ್ದು, ಇದಕ್ಕಾಗಿ ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಪ್ರಿಯಾಂಕಾ ಕುಮಾರ್ (Priyanka Kumar) ಅವರು ಶ್ರೇಯಸ್​ಗೆ ಜೊತೆಯಾಗಿ ನಟಿಸುತ್ತಿದ್ದಾರೆ. ಮಾರ್ಚ್​ 31ರಂದು ಚಿತ್ರದ ಮುಹೂರ್ತ ನಡೆಯುತ್ತಿದ್ದು, ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಸಿಗೋ ನಿರೀಕ್ಷೆ ಇದೆ. ಈ ಸಿನಿಮಾ ಕಾಲೇಜ್​ ಕಥಾ ಹಂದರ ಹೊಂದಿದೆ.

‘ವಿಷ್ಣು ಪ್ರಿಯ’ದಲ್ಲಿ ಶ್ರೇಯಸ್ ಕೆ. ಮಂಜು ನಟಿಸಿದ್ದಾರೆ. ಈ ಚಿತ್ರದ ರಿಲೀಸ್​ನ ಅವರು ಎದುರುನೋಡುತ್ತಿದ್ದಾರೆ. ಹೀಗಿರುವಾಗಲೇ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ದುರ್ಗ’, ‘ನೀಲಿ’ ಧಾರಾವಾಹಿ ಹಾಗೂ ಒಂದಷ್ಟು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಧು ಗೌಡ ಗಂಗೂರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪೂರ್ಣಪ್ರಮಾಣದ ನಿರ್ದೇಶಕನಾಗಿ ಇದು ಮೊದಲ ಸಿನಿಮಾ.

ಮಾಸ್​ ಎಂಟರ್​ಟೇನ್​ ಹಾಗೂ ಕಾಲೇಜು ಕಥೆಯನ್ನು ಈ ಸಿನಿಮಾ ಹೊಂದಿರಲಿದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್ ಆಗಿಲ್ಲ. ಶ್ರೇಯಸ್​ಗೆ ಜೊತೆಯಾಗಿ ಪ್ರಿಯಾಂಕಾ ಕುಮಾರ್ ನಟಿಸುತ್ತಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಹಾಗೂ ‘ಅದ್ದೂರಿ ಲವರ್’ ಸಿನಿಮಾದಲ್ಲಿ ಇವರು ಬಣ್ಣ ಹಚ್ಚಿದ್ದಾರೆ. ಇದು ಪ್ರಿಯಾಂಕಾ ಅವರಿಗೆ ಮೂರನೇ ಚಿತ್ರ. ಕಾಲೇಜ್ ಕಥೆಯಾದ್ದರಿಂದ ಪ್ರಿಯಾಂಕಾಗೆ ಸಿನಿಮಾ ಹೊಂದಿಕೆ ಆಗುತ್ತದೆ ಅನ್ನೋದು ಸಿನಿಪ್ರಿಯರ ಅಭಿಪ್ರಾಯ.

ಇದನ್ನೂ ಓದಿ: ಅಭಿಷೇಕ್ ಅಂಬರೀಷ್ ನಟನೆಯ;ಬ್ಯಾಡ್​ ಮ್ಯಾನರ್ಸ್; ಚಿತ್ರದ ಶೂಟಿಂಗ್​ ಕಂಪ್ಲೀಟ್: ಯಾವಾಗ ಚಿತ್ರ ರಿಲೀಸ್?​​​ ​ 

ಏಷ್ಯಾನೆಟ್ ಮೂವೀ ಬ್ಯಾನರ್​​ನ ಅಡಿಯಲ್ಲಿ  ಆರ್ ಸಂತೋಷ್ ಕುಮಾರ್(ಎಸ್ ವಿಟಿ) ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ, ರಾಜೇಶ್ ಸಾಲುಂಡಿ ಸಂಭಾಷಣೆ ಚಿತ್ರಕ್ಕಿದೆ. ಮಾರ್ಚ್​ 31ರಂದು ಮುಹೂರ್ತ ನೆರವೇರಲಿದೆ. ಏಪ್ರಿಲ್ ತಿಂಗಳಿಂದ ಶೂಟಿಂಗ್​ ಆರಂಭ ಆಗಲಿದೆ. ಬೆಂಗಳೂರು, ಕೊಡಗು, ಚಿಕ್ಕಮಗಳೂರು, ಕೇರಳದಲ್ಲಿ ಶೂಟಿಂಗ್ ನಡೆಸಲು ಚಿತ್ರತಂಡ ಪ್ಲ್ಯಾನ್ ರೂಪಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:13 pm, Tue, 28 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ