AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಒಪ್ಪಿಕೊಂಡ ಶ್ರೇಯಸ್ ಮಂಜು; ಯಂಗ್ ಹೀರೋಗೆ ಜೊತೆಯಾದ ಪ್ರಿಯಾಂಕಾ ಕುಮಾರ್

ವಿಷ್ಣು ಪ್ರಿಯ’ದಲ್ಲಿ ಶ್ರೇಯಸ್ ಕೆ. ಮಂಜು ನಟಿಸಿದ್ದಾರೆ. ಈ ಚಿತ್ರದ ರಿಲೀಸ್​ನ ಅವರು ಎದುರುನೋಡುತ್ತಿದ್ದಾರೆ. ಹೀಗಿರುವಾಗಲೇ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಹೊಸ ಸಿನಿಮಾ ಒಪ್ಪಿಕೊಂಡ ಶ್ರೇಯಸ್ ಮಂಜು; ಯಂಗ್ ಹೀರೋಗೆ ಜೊತೆಯಾದ ಪ್ರಿಯಾಂಕಾ ಕುಮಾರ್
ಶ್ರೇಯಸ್ ಹೊಸ ಸಿನಿಮಾಗೆ ಪ್ರಿಯಾಂಕಾ ಕುಮಾರ್ ನಾಯಕಿ
ರಾಜೇಶ್ ದುಗ್ಗುಮನೆ
|

Updated on:Apr 01, 2023 | 8:23 AM

Share

ಮುಖ್ಯಾಂಶಗಳು

  • ‘ಪಡ್ಡೆಹುಲಿ’, ‘ರಾಣಾ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಶ್ರೇಯಸ್ ಕೆ. ಮಂಜು
  • ಹೊಸ ಸಿನಿಮಾ ಘೋಷಿಸಿದ ಶ್ರೇಯಸ್ ಕೆ. ಮಂಜು
  • ಶ್ರೇಯಸ್​ಗೆ ಜೊತೆಯಾದ ಪ್ರಿಯಾಂಕಾ ಕುಮಾರ್

‘ಪಡ್ಡೆಹುಲಿ’, ‘ರಾಣಾ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್ ಕೆ. ಮಂಜು (Shreyas K Manju) ಅವರು ಹೊಸ ಸಿನಿಮಾ ಘೋಷಿಸಿದ್ದು, ಇದಕ್ಕಾಗಿ ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಪ್ರಿಯಾಂಕಾ ಕುಮಾರ್ (Priyanka Kumar) ಅವರು ಶ್ರೇಯಸ್​ಗೆ ಜೊತೆಯಾಗಿ ನಟಿಸುತ್ತಿದ್ದಾರೆ. ಮಾರ್ಚ್​ 31ರಂದು ಚಿತ್ರದ ಮುಹೂರ್ತ ನಡೆಯುತ್ತಿದ್ದು, ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಸಿಗೋ ನಿರೀಕ್ಷೆ ಇದೆ. ಈ ಸಿನಿಮಾ ಕಾಲೇಜ್​ ಕಥಾ ಹಂದರ ಹೊಂದಿದೆ.

‘ವಿಷ್ಣು ಪ್ರಿಯ’ದಲ್ಲಿ ಶ್ರೇಯಸ್ ಕೆ. ಮಂಜು ನಟಿಸಿದ್ದಾರೆ. ಈ ಚಿತ್ರದ ರಿಲೀಸ್​ನ ಅವರು ಎದುರುನೋಡುತ್ತಿದ್ದಾರೆ. ಹೀಗಿರುವಾಗಲೇ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ದುರ್ಗ’, ‘ನೀಲಿ’ ಧಾರಾವಾಹಿ ಹಾಗೂ ಒಂದಷ್ಟು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಧು ಗೌಡ ಗಂಗೂರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪೂರ್ಣಪ್ರಮಾಣದ ನಿರ್ದೇಶಕನಾಗಿ ಇದು ಮೊದಲ ಸಿನಿಮಾ.

ಮಾಸ್​ ಎಂಟರ್​ಟೇನ್​ ಹಾಗೂ ಕಾಲೇಜು ಕಥೆಯನ್ನು ಈ ಸಿನಿಮಾ ಹೊಂದಿರಲಿದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್ ಆಗಿಲ್ಲ. ಶ್ರೇಯಸ್​ಗೆ ಜೊತೆಯಾಗಿ ಪ್ರಿಯಾಂಕಾ ಕುಮಾರ್ ನಟಿಸುತ್ತಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಹಾಗೂ ‘ಅದ್ದೂರಿ ಲವರ್’ ಸಿನಿಮಾದಲ್ಲಿ ಇವರು ಬಣ್ಣ ಹಚ್ಚಿದ್ದಾರೆ. ಇದು ಪ್ರಿಯಾಂಕಾ ಅವರಿಗೆ ಮೂರನೇ ಚಿತ್ರ. ಕಾಲೇಜ್ ಕಥೆಯಾದ್ದರಿಂದ ಪ್ರಿಯಾಂಕಾಗೆ ಸಿನಿಮಾ ಹೊಂದಿಕೆ ಆಗುತ್ತದೆ ಅನ್ನೋದು ಸಿನಿಪ್ರಿಯರ ಅಭಿಪ್ರಾಯ.

ಇದನ್ನೂ ಓದಿ: ಅಭಿಷೇಕ್ ಅಂಬರೀಷ್ ನಟನೆಯ;ಬ್ಯಾಡ್​ ಮ್ಯಾನರ್ಸ್; ಚಿತ್ರದ ಶೂಟಿಂಗ್​ ಕಂಪ್ಲೀಟ್: ಯಾವಾಗ ಚಿತ್ರ ರಿಲೀಸ್?​​​ ​ 

ಏಷ್ಯಾನೆಟ್ ಮೂವೀ ಬ್ಯಾನರ್​​ನ ಅಡಿಯಲ್ಲಿ  ಆರ್ ಸಂತೋಷ್ ಕುಮಾರ್(ಎಸ್ ವಿಟಿ) ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ, ರಾಜೇಶ್ ಸಾಲುಂಡಿ ಸಂಭಾಷಣೆ ಚಿತ್ರಕ್ಕಿದೆ. ಮಾರ್ಚ್​ 31ರಂದು ಮುಹೂರ್ತ ನೆರವೇರಲಿದೆ. ಏಪ್ರಿಲ್ ತಿಂಗಳಿಂದ ಶೂಟಿಂಗ್​ ಆರಂಭ ಆಗಲಿದೆ. ಬೆಂಗಳೂರು, ಕೊಡಗು, ಚಿಕ್ಕಮಗಳೂರು, ಕೇರಳದಲ್ಲಿ ಶೂಟಿಂಗ್ ನಡೆಸಲು ಚಿತ್ರತಂಡ ಪ್ಲ್ಯಾನ್ ರೂಪಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:13 pm, Tue, 28 March 23

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ