AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ ಹುಡುಗಿಯ ಕನ್ನಡ ಹಾಡು; ‘ವಿಷ್ಣುಪ್ರಿಯ’ ಚಿತ್ರದ ರೊಮ್ಯಾಂಟಿಕ್ ಸಾಂಗ್​ ನೋಡಿ..

‘ವಿಷ್ಣುಪ್ರಿಯ’ ಸಿನಿಮಾದ ಈ ಗೀತೆಯು ಸಂಗೀತ ಮತ್ತು ಸಾಹಿತ್ಯದ ಜೊತೆಗೆ ರೊಮ್ಯಾಂಟಿಕ್​ ದೃಶ್ಯಗಳ ಕಾರಣದಿಂದಲೂ ಗಮನ ಸೆಳೆಯುತ್ತಿದೆ. ಖ್ಯಾತ ಗೀತರಚನಕಾರ ವಿ. ನಾಗೇಂದ್ರ ಪ್ರಸಾದ್ ಅವರು ಈ ಹಾಡು ಬರೆದಿದ್ದಾರೆ. ‘ಎ2 ಮ್ಯೂಸಿಕ್​’ ಮೂಲಕ ಈ ಸಾಂಗ್​ ಬಿಡುಗಡೆ ಆಗಿದೆ. ಶ್ರೇಯಸ್ ಮಂಜು ಹಾಗೂ ಪ್ರಿಯಾ ಪ್ರಕಾಶ್ ವಾರಿಯರ್ ಅಭಿನಯದ ಈ ಸಿನಿಮಾಗೆ ವಿ.ಕೆ. ಪ್ರಕಾಶ್ ನಿರ್ದೇಶನ ಮಾಡಿದ್ದಾರೆ.

ಕಣ್ಸನ್ನೆ ಹುಡುಗಿಯ ಕನ್ನಡ ಹಾಡು; ‘ವಿಷ್ಣುಪ್ರಿಯ’ ಚಿತ್ರದ ರೊಮ್ಯಾಂಟಿಕ್ ಸಾಂಗ್​ ನೋಡಿ..
ಶ್ರೇಯಸ್​ ಮಂಜು, ಪ್ರಿಯಾ ಪ್ರಕಾಶ್​ ವಾರಿಯರ್​
ಮದನ್​ ಕುಮಾರ್​
|

Updated on: Feb 08, 2024 | 5:58 PM

Share

ಒಂದೇ ಒಂದು ವೈರಲ್​ ವಿಡಿಯೋದಿಂದ ಕಣ್ಸನ್ನೆ ಹುಡುಗಿ ಎಂದೇ ಫೇಮಸ್​ ಆದವರು ನಟಿ ಪ್ರಿಯಾ ಪ್ರಕಾಶ್​ ವಾರಿಯರ್​. ಆ ಬಳಿಕ ಅವರಿಗೆ ಸಿನಿಮಾ ಅವಕಾಶಗಳು ಹೆಚ್ಚಾದವು. ಕನ್ನಡದಲ್ಲೂ ಅವರು ನಟಿಸುತ್ತಿದ್ದಾರೆ. ಪ್ರಿಯಾ ಪ್ರಕಾಶ್​ ವಾರಿಯರ್​ (Priya P. Varrier) ನಟನೆಯ ‘ವಿಷ್ಣುಪ್ರಿಯ’ ಸಿನಿಮಾ (Vishnu Priya) ಕೌತುಕ ಮೂಡಿಸಿದೆ. ಈ ಸಿನಿಮಾಗೆ ಶ್ರೇಯಸ್​ ಮಂಜು ಹೀರೋ. ತೊಂಬತ್ತರ ದಶಕದ ಸಮ್ಮೋಹಕ ಪ್ರೇಮಕಥಾನಕ ಹೊಂದಿರುವ ಚಿತ್ರದಿಂದ ಹೊಸ ಹಾಡು ಬಿಡುಗಡೆ ಆಗಿದೆ. ಈ ಹಿಂದೆ ‘ಪಡ್ಡೆಹುಲಿ’ ಚಿತ್ರದ ಮೂಲಕ ಭರವಸೆ ಮೂಡಿಸಿದ್ದ ಶ್ರೇಯಸ್ ಮಂಜು (Shreyas Manju) ಈಗ ವಿಷ್ಣುಪ್ರಿಯನಾಗಿ ಬರುತ್ತಿದ್ದಾರೆ.

ಈ ಸಿನಿಮಾದಲ್ಲಿ ಶ್ರೇಯಸ್​ ಮಂಜು ಅವರಿಗೆ ವಿಶಿಷ್ಟವಾದ ಪಾತ್ರವಿದೆ. ಈ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಅವರು ತಯಾರಾಗಿದ್ದಾರೆ. ‘ವಿಷ್ಣುಪ್ರಿಯ’ ಸಿನಿಮಾ ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದ ತಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಫೀಲ್​ ಹೊಂದಿರುವ ಈ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಿದೆ. ಸಿನಿಪ್ರಿಯರಿಂದ ಮೆಚ್ಚುಗೆ ಗಳಿಸುತ್ತಿದೆ.

ಇದನ್ನೂ ಓದಿ: ನೀರಿನಲ್ಲಿ ಮುಳುಗಿ ಮೈ ಮರೆತ ನಟಿ ಪ್ರಿಯಾ ಪ್ರಕಾಶ್​ ವಾರಿಯರ್​

‘ಚಿಗುರು ಚಿಗುರೊ ಸಮಯ ಹಿತವಾದ ಒಂದು ಮೌನ.. ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ…’ ಎಂಬ ಸಾಲಿನಿಂದ ಶುರುವಾಗುವ ಈ ಗೀತೆಯು ಸಂಗೀತ ಮತ್ತು ಸಾಹಿತ್ಯದ ಜೊತೆಗೆ ರೊಮ್ಯಾಂಟಿಕ್​ ಆದ ದೃಶ್ಯದ ಮೂಲಕವೂ ಗಮನ ಸೆಳೆಯುತ್ತಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಇದಕ್ಕೆ ಸಾಹಿತ್ಯ ಒದಗಿಸಿದ್ದಾರೆ. ಈ ಮೂಲಕ ವರ್ಷದ ಆರಂಭದಲ್ಲಿಯೇ ನವಿರು ಭಾವವೊಂದನ್ನು ನಾಗೇಂದ್ರ ಪ್ರಸಾದ್ ಕೇಳುಗರಿಗೆ ನೀಡಿದ್ದಾರೆ.

ಇದನ್ನೂ ಓದಿ: ದೇವಕನ್ಯೆಯಾದ ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್

ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಈ ಸಿನಿಮಾದ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ ಎನ್ನಬಹುದು. ಮತ್ತೆ ಮತ್ತೆ ಕೇಳಿಸಿಕೊಳ್ಳುವ ಗುಣ ಹೊಂದಿರುವ ಈ ಡ್ಯುಯೆಟ್​ ಗೀತೆಯ ಪ್ರಭೆಯಲ್ಲಿ ವಿಷ್ಣುಪ್ರಿಯನ ಕ್ರೇಜ್ ಮತ್ತಷ್ಟು ಹೆಚ್ಚುತ್ತಿದೆ. ಈ ವರ್ಷದ ಸುಮಧುರ ಹಾಡು ಎಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಹಾಡಿಗೆ ಇದೆ. ವಿ.ಕೆ. ಪ್ರಕಾಶ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

‘ವಿಷ್ಣುಪ್ರಿಯ’ ಸಿನಿಮಾದ ಹಾಡು:

90ರ ದಶಕದಲ್ಲಿ ನಡೆಯುವ ಕಥೆ ಈ ಸಿನಿಮಾದಲ್ಲಿ ಇರಲಿದೆ. ಶ್ರೇಯಸ್ ಮಂಜು ಮತ್ತು ಪ್ರಿಯಾ ವಾರಿಯರ್ ಅವರ ಕಾಂಬಿನೇಷನ್​ ಕೌತುಕ ಮೂಡಿಸಿದೆ. ಕೆ. ಮಂಜು ನಿರ್ಮಾಣದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಸುಚೇಂದ್ರ ಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ್ದಾರೆ. ಇದರಲ್ಲಿ ಪ್ರೇಮಕಥೆ ಅಷ್ಟೇ ಅಲ್ಲದೇ ತೊಂಬತ್ತರ ದಶಕದಲ್ಲಿ ನಡೆದ ನೈಜ ಕಥೆಯೂ ಹೌದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್