AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ ಡೇಟ್​ ಮುಂದೂಡಿಕೊಂಡ ‘ಗಜಾನನ ಆ್ಯಂಡ್​ ಗ್ಯಾಂಗ್​’; ಚಿತ್ರತಂಡ ನೀಡಿದ ಕಾರಣ ಏನು?

‘ಗಜಾನನ ಆ್ಯಂಡ್​ ಗ್ಯಾಂಗ್​’ ಚಿತ್ರದ ಟ್ರೇಲರ್​ಗೆ ಈಗಾಗಲೇ ಜನಮೆಚ್ಚುಗೆ ಸಿಕ್ಕಿದೆ. ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ಇದ್ದಾಗಲೇ ಇಂಥ ಚಿತ್ರವನ್ನು ತೆರೆಕಾಣಿಸುವುದು ಸೂಕ್ತ ಎಂದು ನಿರ್ಮಾಪಕರು ತೀರ್ಮಾನಿಸಿದ್ದಾರೆ.

ರಿಲೀಸ್​ ಡೇಟ್​ ಮುಂದೂಡಿಕೊಂಡ ‘ಗಜಾನನ ಆ್ಯಂಡ್​ ಗ್ಯಾಂಗ್​’; ಚಿತ್ರತಂಡ ನೀಡಿದ ಕಾರಣ ಏನು?
ಶ್ರೀ ಮಹಾದೇವ್​, ಅದಿತಿ ಪ್ರಭುದೇವ
TV9 Web
| Edited By: |

Updated on: Jan 26, 2022 | 4:14 PM

Share

ಅನೇಕ ಸಿನಿಮಾಗಳು ಬಿಡುಗಡೆಗಾಗಿ ಕಾದು ಕುಳಿತಿವೆ. ಆದರೆ ಅದಕ್ಕೆ ಸೂಕ್ತವಾದಂತಹ ವಾತಾವರಣ ಕೂಡಿಬರುತ್ತಿಲ್ಲ. ಕೊರೊನಾ (Coronavirus) ಮೂರನೇ ಅಲೆಯ ಕಾರಣದಿಂದ ಹಲವು ರಾಜ್ಯಗಳಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡಲಾಗಿದೆ. ಚಿತ್ರಮಂದಿರಗಳಲ್ಲಿ ಪ್ರಸ್ತುತ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅನೇಕ ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಳ್ಳುತ್ತಿವೆ. ಈ ಸಾಲಿಗೆ ಕನ್ನಡದ ‘ಗಜಾನನ ಆ್ಯಂಡ್​ ಗ್ಯಾಂಗ್​’ (Gajanana And Gang) ಸಿನಿಮಾ ಕೂಡ ಸೇರ್ಪಡೆ ಆಗಿದೆ. ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ ಫೆ.4ರಂದು ಈ ಸಿನಿಮಾ ಬಿಡುಗಡೆ ಆಗುತ್ತಿತ್ತು. ಆದರೆ ಈಗ ಚಿತ್ರದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿದೆ. ಈ ಸಿನಿಮಾದಲ್ಲಿ ಅದಿತಿ ಪ್ರಭುದೇವ (Aditi Prabhudeva) ಹಾಗೂ ಶ್ರೀಮಹದೇವ್​ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇನ್ನೊಂದು ಮುಖ್ಯ ಪಾತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ ಅಭಿಷೇಕ್​ ಶೆಟ್ಟಿ. ‘ನಮ್​ ಗಣಿ ಬಿ.ಕಾಂ ಪಾಸ್​’ ಸಿನಿಮಾ ಖ್ಯಾತಿಯ ನಾಗೇಶ್​ ಕುಮಾರ್​ ಬಂಡವಾಳ ಹೂಡಿದ್ದು, ಪ್ರದ್ಯೋತನ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಶೀಘ್ರದಲ್ಲೇ ಹೊಸ ರಿಲೀಸ್​ ಡೇಟ್​ ತಿಳಿಸಲಿದೆ ‘ಗಜಾನನ ಆ್ಯಂಡ್​ ಗ್ಯಾಂಗ್​’ ಚಿತ್ರತಂಡ.

‘ನಮ್ಮದು ಒಂದೊಳ್ಳೆಯ ಮನರಂಜನಾ ಚಿತ್ರ. ಕೊವಿಡ್​ ಕಾರಣದಿಂದ ನಮ್ಮ ಸಿನಿಮಾ ಸೋಲುವಂತಾಗಬಾರದು. ಪ್ರೇಕ್ಷಕರನ್ನು ರಂಜಿಸುವಲ್ಲಿ ಶೇ.100ರಷ್ಟು ಈ ಸಿನಿಮಾ ಯಶಸ್ಚಿ ಆಗುತ್ತದೆ ಎಂಬ ನಂಬಿಕೆ ನಮಗಿದೆ. ಹಾಗಾಗಿ ಸೂಕ್ತ ದಿನಾಂಕದಲ್ಲೇ ಈ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ. ಶೀಘ್ರದಲ್ಲೇ ಹೊಸ ರಿಲೀಸ್​ ಡೇಟ್​ ತಿಳಿಸುತ್ತೇವೆ’ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಸದ್ಯಕ್ಕೆ ವೀಕೆಂಡ್​ ಕರ್ಫ್ಯೂ ತೆರವುಗೊಂಡಿದೆ. ಆದರೆ ನೈಟ್​ ಕರ್ಫ್ಯೂ ಹಾಗೆಯೇ ಇದೆ. ಅಲ್ಲದೇ ಚಿತ್ರಮಂದಿರದಲ್ಲಿ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ. ಇಂಥ ಪರಿಸ್ಥಿತಿಯಲ್ಲಿ ಸಿನಿಮಾ ರಿಲೀಸ್​ ಮಾಡಿದರೆ ಚಿತ್ರದ ಕಲೆಕ್ಷನ್​ ಮೇಲೆ ಪೆಟ್ಟು ಬೀಳಲಿದೆ. ಆ ಕಾರಣದಿಂದ ‘ಗಜಾನನ ಆ್ಯಂಡ್​ ಗ್ಯಾಂಗ್​’ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಈ ಚಿತ್ರಕ್ಕೆ ಉದಯ್​ ಲೀಲಾ ಛಾಯಾಗ್ರಹಣ ಮಾಡಿದ್ದಾರೆ. ವಿಜೇತ್​ ಚಂದ್ರ ಸಂಕಲನದ ಜಬಾವ್ದಾರಿ ನಿಭಾಯಿಸಿದ್ದಾರೆ. ಬಿಗ್​ ಬಾಸ್​ ಖ್ಯಾತಿಯ ಶಮಂತ್​ ಬ್ರೋ ಗೌಡ, ರಘು ಗೌಡ, ನಾಟ್ಯರಂಗ, ಅಶ್ವಿನ್​ ಹಾಸನ್​ ಮುಂತಾದವರು ಅಭಿನಯಿಸಿದ್ದಾರೆ. ಈ ಸಿನಿಮಾ ಮೂಲಕ ಒಂದು ಮಜವಾದ ಕಾಲೇಜ್​ ಸ್ಟೋರಿ ಹೇಳಲಿದ್ದಾರೆ ನಿರ್ದೇಶಕರು. ಫ್ರೆಂಡ್​ಶಿಪ್​, ಲವ್​, ಸೆಂಟಿಮೆಂಟ್​ ಮುಂತಾದ ಅಂಶಗಳನ್ನು ಒಳಗೊಂಡ ಈ ಚಿತ್ರದ ಟ್ರೇಲರ್​ಗೆ ಈಗಾಗಲೇ ಜನಮೆಚ್ಚುಗೆ ಸಿಕ್ಕಿದೆ. ಟ್ರೇಲರ್​ ಬಿಡುಗಡೆ ಮಾಡಿದ ಮೇಘನಾ ರಾಜ್​ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದರು. ಆ ಮೂಲಕ ‘ಗಜಾನನ ಆ್ಯಂಡ್​ ಗ್ಯಾಂಗ್​’ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದರು. ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ಇದ್ದಾಗಲೇ ಇಂಥ ಚಿತ್ರವನ್ನು ತೆರೆಕಾಣಿಸುವುದು ಸೂಕ್ತ ಎಂದು ನಿರ್ಮಾಪಕರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ:

ಮೇಘನಾ ರಾಜ್​ ಬದುಕಿಗೆ ಹತ್ತಿರವಾಗಿದೆ ‘ಗಜಾನನ ಆ್ಯಂಡ್​ ಗ್ಯಾಂಗ್​’ ಚಿತ್ರ; ಟ್ರೇಲರ್​ ನೋಡಿ ಅವರು ಹೇಳಿದ್ದೇನು?

ಆ ಸಿನಿಮಾ ನೋಡದೆಯೂ ಅದಿತಿಗೆ ಫ್ಯಾನ್​ ಆದ ಮೇಘನಾ ರಾಜ್ ಸರ್ಜಾ​; ಯಾವುದು ಆ ಚಿತ್ರ?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ