AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಿಧಿ ಶೆಟ್ಟಿ ಹಾಗೂ ಯಶ್ ಬಗ್ಗೆ ತಪ್ಪು ತಿಳಿದುಕೊಂಡಿದ್ದ ಫ್ಯಾನ್ಸ್; ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ನಟಿ  

ಶ್ರೀನಿಧಿ ಶೆಟ್ಟಿ ಅವರು ಚಿತ್ರರಂಗದಲ್ಲಿನ ಗ್ಯಾಪ್, ಯಶ್ ಅವರ ಜೊತೆಗಿನ ಸಂಬಂಧ ಹಾಗೂ 'ಕೆಜಿಎಫ್' ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. 'ಕೋಬ್ರಾ' ಚಿತ್ರದ ನಂತರ ಅವರು ಯಾಕೆ ಸಿನಿಮಾಗಳಿಂದ ದೂರ ಉಳಿದರು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಯಶ್ ಅವರ ಯಶಸ್ಸಿಗೆ ಅವರು ಶುಭ ಹಾರೈಸಿದ್ದು, ಅವರೊಂದಿಗಿನ ಸ್ನೇಹದ ಬಗ್ಗೆಯೂ ಮಾತನಾಡಿದ್ದಾರೆ.

ಶ್ರೀನಿಧಿ ಶೆಟ್ಟಿ ಹಾಗೂ ಯಶ್ ಬಗ್ಗೆ ತಪ್ಪು ತಿಳಿದುಕೊಂಡಿದ್ದ ಫ್ಯಾನ್ಸ್; ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ನಟಿ  
ಯಶ್-ಶ್ರೀನಿಧಿ
ರಾಜೇಶ್ ದುಗ್ಗುಮನೆ
|

Updated on:Apr 26, 2025 | 3:39 PM

Share

ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ಹಾಗೂ ಯಶ್ ‘ಕೆಜಿಎಫ್’ ಸರಣಿಯಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಶ್ರೀನಿಧಿ ಮಾಡಿದ್ದು ಕೇವಲ ಒಂದು ಸಿನಿಮಾ. ಈಗ ‘ಕೆಜಿಎಫ್’ ಬೆಡಗಿ ‘ಹಿಟ್ 3’ ಸಿನಿಮಾ ಮೂಲಕ ಅವರು ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ಅವರು ಯಶ್ ಜೊತೆಗಿನ ಒಡನಾಟ ಹಾಗೂ ಯಶ್ ಅವರ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಇಷ್ಟು ಸಮಯ ಚಿತ್ರರಂಗದಿಂದ ದೂರ ಇದ್ದಿದ್ದು ಯಾಕೆ ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ.

ಬಣ್ಣದ ಲೋಕದಿಂದ ದೂರ

‘ಕೆಜಿಎಫ್ 2’ ರಿಲೀಸ್ ಬಳಿಕ ಶ್ರೀನಿಧಿ ಶೆಟ್ಟಿ ‘ಕೋಬ್ರಾ’ ಹೆಸರಿನ ತಮಿಳು ಸಿನಿಮಾ ಮಾಡಿದರು. ಚಿಯಾನ್ ವಿಕ್ರಮ್ ಇದಕ್ಕೆ ಹೀರೋ. ಆ ಬಳಿಕ ಅವರು ಸೈಲೆಂಟ್ ಆಗಿ ಹೋದರು. ಆಗ ನಟಿಯ ಬಗ್ಗೆ ಸಾಕಷ್ಟು ಟಾಕ್ ಇತ್ತು. ‘ಕೆಜಿಎಫ್ ರೀತಿಯ ಕಥೆ, ಅದೇ ರೀತಿಯ ಥೀಮ್ ಇಟ್ಟುಕೊಂಡು ಸಾಕಷ್ಟು ಸಿನಿಮಾಗಳು ಬಂದವು. ಆದರೆ, ನಾನು ಯಾವುದೂ ಒಪ್ಪಿಕೊಳ್ಳಲಿಲ್ಲ. ನನಗೆ ಸಿನಿಮಾ ಮಾಡುವ ಆಸಕ್ತಿಯೇ ಇಲ್ಲ ಎಂದು ಜನರು ಭಾವಿಸಿದರು. ಹೀಗಾಗಿ, ನನಗೆ ಸಿನಿಮಾ ಆಫರ್ ನೀಡೋದನ್ನು ಅವರ ನಿಲ್ಲಿಸಿದರು’ ಎಂದಿದ್ದಾರೆ ಶ್ರೀನಿಧಿ ಶೆಟ್ಟಿ.

‘ಯಶ್ ಬಗ್ಗೆ ನನಗೆ ಖುಷಿ ಇದೆ. ಕೆಜಿಎಫ್​ಗೂ ಮೊದಲು ನಮ್ಮ ರಾಜ್ಯದಲ್ಲಿ ಅವರು ದೊಡ್ಡ ಹೀರೋ. ಈಗಿರುವ ಹಂತಕ್ಕೆ ಕೆಜಿಎಫ್ ಕಾರಣ. ಟಾಕ್ಸಿಕ್ ಹಾಗೂ ರಾಮಾಯಣದಂತ ಸಿನಿಮಾ ಅವರ ಕೈಯಲ್ಲಿ ಇದೆ. ಓರ್ವ ಪ್ರೇಕ್ಷಕನಾಗಿ ನಾನು ಈ ಸಿನಿಮಾಗಾಗಿ ಕಾಯುತ್ತಿದ್ದೇನೆ. ಅವರು ದೊಡ್ಡ ಗ್ಯಾಪ್ ತೆಗೆದುಕೊಂಡರೂ ಪ್ರೇಕ್ಷಕರು ಅವರ ಚಿತ್ರಕ್ಕಾಗಿ ಕಾಯುತ್ತಿದ್ದಾರೆ’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
‘ಉಗ್ರ ಸಿಕ್ಕಿದ್ದ, ಕುರಾನ್ ಓದಿಲ್ಲ ಎಂದು ಕಿರುಕುಳ ನೀಡಿದ್ದ’; ನಟಿ ಏಕ್ತಾ
Image
ಮದುವೆಯಲ್ಲಿ ಹಾಡೋಕೆ ಅರಿಜಿತ್ ಸಿಂಗ್ ಪಡೆಯೋ ಹಣ ಎಷ್ಟು?
Image
ನಟಿಯಾಗೋ ಪ್ಲ್ಯಾನ್ ಇರಲಿಲ್ಲ; ರಚಿತಾ ನಟಿ​ ಆಗಿರದಿದ್ದರೆ ಏನಾಗಿರುತ್ತಿದ್ದರು
Image
‘ಕೆಜಿಎಫ್ 2’ ಜೋಡಿನ ಬಾಲಿವುಡ್​ನಲ್ಲಿ ಒಟ್ಟಿಗೆ ತರಲು ನಡೆದಿತ್ತು ಪ್ಲ್ಯಾನ್

ಇದನ್ನೂ ಓದಿ: ‘ಕೆಜಿಎಫ್ 2’ ಜೋಡಿನ ಬಾಲಿವುಡ್​ನಲ್ಲಿ ಒಟ್ಟಿಗೆ ತರಲು ನಡೆದಿತ್ತು ಪ್ಲ್ಯಾನ್; ಕಾಡಿತ್ತು ಆ ಒಂದು ಭಯ

‘ನಾವಿಬ್ಬರೂ (ಶ್ರೀನಿಧಿ ಶೆಟ್ಟಿ ಹಾಗೂ ಯಶ್) ಏನನ್ನೂ ಮಾಡುತ್ತಿಲ್ಲ ಎನ್ನುತ್ತಿದ್ದರು. ನನ್ನ ಸಿನಿಮಾ ಬರುತ್ತಿದೆ. ನನಗೆ ಎಗ್ಸೈಟ್​ಮೆಂಟ್ ಇದೆ. ನಾನು ಯಶ್​​ಗೆ ಯಾವಾಗಲೂ ಒಳ್ಳೆಯದನ್ನೇ ಬಯಸುತ್ತೇನೆ. ನಾವು ಟಚ್​​ನಲ್ಲಿ ಇರಲಿ ಅಥವಾ ಇಲ್ಲದಿರಲಿ, ಅವರು ನನಗೆ ಯಾವಾಗಲೂ ಸ್ಪೆಷಲ್. ಏಕೆಂದರೆ ಅವರು ನನ್ನ ಮೊದಲ ಹೀರೋ’ ಎಂದಿದ್ದಾರೆ ಶ್ರೀನಿಧಿ ಶೆಟ್ಟಿ. ಈ ಮೂಲಕ ಏನು ಮಾಡುತ್ತಿಲ್ಲ ಎಂಬ ತಪ್ಪು ತಿಳುವಳಿಕೆ ಹೋಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:16 pm, Sat, 26 April 25

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ