AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ‘ಕಬ್ಜ’ ಚಿತ್ರಕ್ಕೆ ನಾಯಕಿಯಾದ ಶ್ರೀಯಾ ಶರಣ್​; ಫಸ್ಟ್​ ಪೋಸ್ಟರ್​ ನೋಡಿ ಫಿದಾ ಆದ ಫ್ಯಾನ್ಸ್​

‘ಕಬ್ಜ’ ಸಿನಿಮಾದಲ್ಲಿ ಇಬ್ಬರು ಹೀರೋಯಿನ್​ಗಳು ಇರಲಿದ್ದಾರೆ. ಆ ಪೈಕಿ ಒಬ್ಬರನ್ನು ಚಿತ್ರತಂಡ ರಿವೀಲ್‌ ಮಾಡಿದೆ. ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನ ಮಾಡುತ್ತಿರುವ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಶ್ರೀಯಾ ನಟಿಸಿದ್ದಾರೆ.

Shriya Saran: ‘ಕಬ್ಜ’ ಚಿತ್ರಕ್ಕೆ ನಾಯಕಿಯಾದ ಶ್ರೀಯಾ ಶರಣ್​; ಫಸ್ಟ್​ ಪೋಸ್ಟರ್​ ನೋಡಿ ಫಿದಾ ಆದ ಫ್ಯಾನ್ಸ್​
ಉಪೇಂದ್ರ-ಶ್ರೀಯಾ
TV9 Web
| Edited By: |

Updated on:Mar 07, 2022 | 4:26 PM

Share

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗುತ್ತಿರುವ ಕನ್ನಡದ ‘ಕಬ್ಜ’ ಸಿನಿಮಾ ಸೆಟ್ಟೇರಿ ಹಲವು ಸಮಯ ಕಳೆದಿದೆ. ಆದರೆ, ಚಿತ್ರದ ನಾಯಕಿ ಯಾರು ಎನ್ನುವ ವಿಚಾರದಲ್ಲಿ ಗುಟ್ಟು ಕಾಯ್ದುಕೊಳ್ಳಲಾಗಿತ್ತು. ಉಪೇಂದ್ರ ಅಭಿನಯದ ಈ ಚಿತ್ರದಲ್ಲಿ ಸುದೀಪ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾಗೆ ಪ್ಯಾನ್​ ಇಂಡಿಯಾ ನಟಿಯನ್ನೇ ತರಬೇಕು ಎಂಬುದು ನಿರ್ದೇಶಕ ಆರ್. ಚಂದ್ರು ಅವರ ಪ್ಲ್ಯಾನ್​ ಆಗಿತ್ತು. ಅಂತೆಯೇ ಈಗ ಬಹುಭಾಷಾ ನಟಿ ಶ್ರೀಯಾ ಶರಣ್​ ಅವರನ್ನು ‘ಕಬ್ಜ’ ಚಿತ್ರಕ್ಕೆ (Kabza Movie) ನಾಯಕಿಯಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಈ ಸಿನಿಮಾದಲ್ಲಿ ಮಧುಮತಿಯಾಗಿ ಶ್ರೀಯಾ (Shriya Saran) ಕಾಣಿಸಿಕೊಳ್ಳುತ್ತಿದ್ದು, ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ.

‘ಕಬ್ಜ’ ಸಿನಿಮಾದಲ್ಲಿ ಇಬ್ಬರು ಹೀರೋಯಿನ್​ಗಳು ಇರಲಿದ್ದಾರೆ. ಆ ಪೈಕಿ ಒಬ್ಬರನ್ನು ಚಿತ್ರತಂಡ ರಿವೀಲ್‌ ಮಾಡಿದೆ. ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನ ಮಾಡುತ್ತಿರುವ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಶ್ರೀಯಾ ನಟಿಸಿದ್ದಾರೆ. ಅವರಿಗೆ ಹಲವು ಇಂಡಸ್ಟ್ರಿಯಲ್ಲಿ ಬೇಡಿಕೆ ಇದೆ. ಈ ಕಾರಣಕ್ಕೆ ಶ್ರೀಯಾ ಅವರನ್ನು ಚಿತ್ರತಂಡ ಆಯ್ಕೆ ಮಾಡಿಕೊಂಡಿದೆ.

‘ಕಬ್ಜ’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಾಕಷ್ಟು ಸೌಂಡ್​ ಮಾಡುತ್ತಿದೆ. ಉಪೇಂದ್ರ ಹಾಗೂ ಸುದೀಪ್​ ಅವರು ಪರಭಾಷೆಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಚಿತ್ರತಂಡಕ್ಕೆ ನಾಯಕಿ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡವರು ಸಿಕ್ಕಿರುವುದರಿಂದ ಸಹಜವಾಗಿಯೇ ಸಿನಿಮಾದ ಚಾರ್ಮ್​ ಹೆಚ್ಚಿದೆ.

‘ಕಬ್ಜ’ ಸಿನಿಮಾ ಸೆಟ್ಟೇರಿ ಎರಡು ವರ್ಷ ಕಳೆದಿದೆ. ಸಿನಿಮಾದ ಬಹುತೇಕ ಶೂಟಿಂಗ್ ಪೂರ್ಣಗೊಂಡಿದ್ದು, ಕೊನೆಯ ಹಂತದ ಕೆಲಸದಲ್ಲಿ ಚಿತ್ರತಂಡ ಬ್ಯುಸಿ ಇದೆ. ಈ ಮೊದಲು ರಿಲೀಸ್​ ಆದ ‘ಕಬ್ಜ’ ಚಿತ್ರದ ಪೋಸ್ಟರ್​ ಸಾಕಷ್ಟು ಗಮನ ಸೆಳೆದಿತ್ತು. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಚಿತ್ರವನ್ನು ಬೇಗ ರಿಲೀಸ್‌ ಮಾಡುವಂತೆ ಒತ್ತಾಯಿಸಿದ್ದರು.

ಕನ್ನಡ, ತೆಲುಗು ಸೇರಿ ಏಳು ಭಾಷೆಯಲ್ಲಿ ‘ಕಬ್ಜ’ ರೆಡಿ ಆಗುತ್ತಿದೆ. ದೊಡ್ಡ ತಾರಾಬಳಗ ಇರುವ ಈ ಸಿನಿಮಾಗೆ ಬೃಹತ್‌ ಸೆಟ್‌ಗಳನ್ನು ಹಾಕಲಾಗಿದೆ. ರವಿ ಬಸ್ರೂರು ಸಂಗೀತ ಸಂಯೋಜನೆ, ಶಿವಕುಮಾರ್‌ ಕಲಾ ನಿರ್ದೇಶನ ಸೇರಿದಂತೆ ಬಹುತೇಕ ‘ಕೆ.ಜಿ.ಎಫ್‌’ ತಾಂತ್ರಿಕ ಬಳಗವೇ ಈ ಚಿತ್ರದಲ್ಲೂ ಮುಂದುವರೆದಿದೆ. ಸದ್ಯ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಶೂಟಿಂಗ್ ಮಾಡೋದು ಬಾಕಿ ಉಳಿದಿದೆ. ಈ ಸಿನಿಮಾವನ್ನು ಈ ವರ್ಷವೇ ತೆರೆಗೆ ತರುವ ಆಲೋಚನೆಯಲ್ಲಿ ಚಿತ್ರತಂಡ ಇದೆ.

ಇದನ್ನೂ ಓದಿ: Kichcha Sudeep: ‘ಕಬ್ಜ’ ಚಿತ್ರದ ಲುಕ್​ ರಿವೀಲ್​ ಮಾಡಿದ ಸುದೀಪ್; ಅಭಿಮಾನಿಗಳು ಫಿದಾ

‘ಕಬ್ಜ’ ತಂಡಕ್ಕೆ ಶಿವರಾಜ್​ಕುಮಾರ್​ ಕಿವಿಮಾತು; ಇದನ್ನು ಪಾಲಿಸ್ತಾರಾ ನಿರ್ದೇಶಕರು?

Published On - 3:41 pm, Mon, 7 March 22

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ