AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಟೋಲ್ಡ್​ ಕ್ರೈಮ್​ ಸ್ಟೋರಿ ಹೇಳ್ತಾರೆ ಶುಭಾ ಪೂಂಜಾ; ಹೇಗಿದೆ ನೋಡಿ ‘ಅಂಬುಜ’ ಟೀಸರ್​

Shubha Poonja: ‘ಅಂಬುಜ’ ಚಿತ್ರದಲ್ಲಿ ಶುಭಾ ಪೂಂಜಾ ಅವರು ಕ್ರೈಂ ರಿಪೋರ್ಟರ್ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

ಅನ್​ಟೋಲ್ಡ್​ ಕ್ರೈಮ್​ ಸ್ಟೋರಿ ಹೇಳ್ತಾರೆ ಶುಭಾ ಪೂಂಜಾ; ಹೇಗಿದೆ ನೋಡಿ ‘ಅಂಬುಜ’ ಟೀಸರ್​
ಅಂಬುಜ ಸಿನಿಮಾ ತಂಡ
TV9 Web
| Edited By: |

Updated on: Oct 11, 2022 | 3:54 PM

Share

ಹಲವಾರು ಬಗೆಯ ಪಾತ್ರಗಳನ್ನು ಮಾಡಿ ಶುಭಾ ಪೂಂಜಾ (Shubha Poonja) ಫೇಮಸ್​ ಆಗಿದ್ದಾರೆ. ಈಗ ಅವರ ಹೊಸ ಸಿನಿಮಾ ‘ಅಂಬುಜ’ (Ambuja Movie) ಕೂಡ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಅವರ ಜೊತೆ ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜಿನಿ ಕೂಡ ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ (Ambuja Teaser) ಹಾಗೂ ಲಿರಿಕಲ್ ವೀಡಿಯೋ ಬಿಡುಗಡೆ ಮಾಡಲಾಯಿತು. ವಿಶೇಷ ಎಂದರೆ, ಇದು ನೈಜ ಘಟನೆ ಆಧಾರಿತ ಸಿನಿಮಾ. ಟೀಸರ್ ನೋಡಿದ ಪ್ರೇಕ್ಷಕರ ಮನದಲ್ಲಿ ನಿರೀಕ್ಷೆ ಹೆಚ್ಚಿದೆ. ಕಥೆ ಏನು ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. ಈ ಚಿತ್ರಕ್ಕೆ ‘ಅನ್​ಟೋಲ್ಡ್​ ಕ್ರೈಮ್​ ಸ್ಟೋರಿ’ ಎಂಬ ಟ್ಯಾಗ್​ ಲೈನ್​ ಇದೆ. ಒಂದು ದಿನ ಕಳೆಯುವುದರೊಳಗೆ 4 ಲಕ್ಷಕ್ಕೂ ಅಧಿಕ ಬಾರಿ ಈ ಚಿತ್ರದ ಟೀಸರ್​ ವೀಕ್ಷಣೆ ಕಂಡಿದೆ.

‘ಅಂಬುಜ’ ಸಿನಿಮಾದಲ್ಲಿ ಒಂದು ಕ್ರೈಂ ಥ್ರಿಲ್ಲರ್ ಹಾರರ್ ಕಥೆ ಇರಲಿದೆ. ಈ ಸಿನಿಮಾಗೆ ಕಾಶಿನಾಥ್ ಡಿ. ಮಡಿವಾಳರ್ ಬಂಡವಾಳ ಹೂಡಿದ್ದಾರೆ. ಇದೇ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡುತ್ತಿರುವ ಅವರು ಕಥೆ ಮತ್ತು ಸಾಹಿತ್ಯವನ್ನೂ ಬರೆದಿರುವುದು ವಿಶೇಷ. ಈ ಚಿತ್ರಕ್ಕೆ ಶ್ರೀನಿ ಹನುಮಂತರಾಜು  ನಿರ್ದೇಶನ ಮಾಡಿದ್ದಾರೆ.

‘ಗೊತ್ತಿಲ್ಲದ ವಿಚಾರಗಳನ್ನು ಜನರಿಗೆ ಹೇಳಬೇಕು ಎನಿಸಿತು. ನಿರ್ದೇಶಕ ಶ್ರೀನಿ ಅವರ ಜೊತೆ ಮಾತನಾಡಿದಾಗ ಈ ಕಥೆ ತುಂಬಾ ಚೆನ್ನಾಗಿದೆ ಎಂಬ ಪ್ರತಿಕ್ರಿಯೆ ಬಂತು. ಹಾಗಾಗಿ ಸಿನಿಮಾ ಮಾಡೋಣ ಎಂದು ನಿರ್ಧರಿಸಿದೆ. ಇದು ಪಕ್ಕಾ ಕಮರ್ಷಿಯಲ್ ಸಿನಿಮಾವಾಗಿದ್ದರೂ ಸಹ ಕುಟುಂಬ ಸಮೇತ ಕುಳಿತು ನೋಡಬಹುದು’ ಎಂದಿದ್ದಾರೆ ನಿರ್ಮಾಪಕ ಕಾಶಿನಾಥ್ ಡಿ. ಮಡಿವಾಳರ್.

ಇದನ್ನೂ ಓದಿ
Image
ಶುಭಾ ಪೂಂಜಾ ಮದುವೆ ವಿಡಿಯೋ ರಿಲೀಸ್​; ಮಿಂಚಿದ ಮಂಜು ಪಾವಗಡ  
Image
ಬಿಗ್​ ಬಾಸ್​ನಲ್ಲಿ ಹೆದರಿಸೋಕೆ ಹೋಗುತ್ತಿದ್ದ ಶುಭಾ ಪೂಂಜಾ ಕೈಯಲ್ಲಿ ಈಗ ಹಾರರ್​ ಸಿನಿಮಾ
Image
ಕ್ರೈಮ್​ ರಿಪೋರ್ಟರ್​ ಶುಭಾ ಪೂಂಜಾ; ಬಿಗ್​ ಬಾಸ್​ ಬಳಿಕ ‘ರೈಮ್ಸ್​’ ಹೇಳಲು ಹೊಸ ಅವತಾರ
Image
ಚಿತ್ರರಂಗದಲ್ಲಿ 17 ವರ್ಷ ಕಳೆದ ಶುಭಾ ಪೂಂಜಾಗೆ ಈ ಗತಿಯೇ; ಮರುಗಿದ ಮಂಜು

ಈ ತಂಡದ ಜೊತೆ ಕೆಲಸ ಮಾಡಿದ್ದಕ್ಕೆ ಶುಭಾ ಪೂಂಜಾ ಅವರಿಗೆ ಖುಷಿ ಇದೆ. ‘ನಿರ್ದೇಶಕ ಶ್ರೀನಿ ಅವರ ಜೊತೆ ಈ ಹಿಂದೆ ಕೂಡ ನಾನು ಕೆಲಸ ಮಾಡಿದ್ದೆ. ಈ ಬಾರಿ ಕ್ರೈಂ ಥ್ರಿಲ್ಲರ್ ಮತ್ತು ಹಾರರ್ ಕಥಾಹಂದರದ ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಈ ಚಿತ್ರದಲ್ಲಿ ನನ್ನದು ಕ್ರೈಂ ರಿಪೋರ್ಟರ್ ಪಾತ್ರ’ ಎಂದಿದ್ದಾರೆ ಶುಭಾ ಪೂಂಜಾ. ಬಹುತೇಕ ಚಿತ್ರೀಕರಣವನ್ನು ರಾತ್ರಿಯೇ ಮಾಡಲಾಗಿದೆ.

(ಅಂಬುಜ ಸಿನಿಮಾ ತಂಡ)

ನಟಿ ರಜಿನಿ ಅವರಿಗೆ ಈ ಸಿನಿಮಾದಲ್ಲಿ ಒಂದು ವಿಶೇಷವಾದ ಪಾತ್ರವಿದೆ. ಲಂಬಾಣಿ ಮಹಿಳೆಯ ಗೆಟಪ್​ನಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಟೀಸರ್​ ಬಿಡುಗಡೆ ಕಾರ್ಯಕ್ರಮಕ್ಕೂ ಅವರು ಅದೇ ವೇಷ ಧರಿಸಿ ಬಂದಿದ್ದು ವಿಶೇಷವಾಗಿತ್ತು. ‘ಲಂಬಾಣಿ ಮಹಿಳೆಯ ಪಾತ್ರ ಅಂದಾಗ ನನಗೆ ಬಹಳ ಖುಷಿ ಆಯ್ತು. ಮೊದಲ ದಿನ ಲಂಬಾಣಿ ವೇಷ ಹಾಕಿಕೊಂಡಾಗ ತಲೆ ಎಲ್ಲ ತುಂಬಾ ನೋವಾಗುತ್ತಿತ್ತು. ನಂತರ ಅಡ್ಜೆಸ್ಟ್​ ಆಯ್ತು. ಚಿತ್ರದಲ್ಲಿ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿವೆ’ ಎಂದು ರಜನಿ ಹೇಳಿದ್ದಾರೆ. ಅವರ ಮಗಳ ಪಾತ್ರದಲ್ಲಿ ಬೇಬಿ ಆಕಾಂಕ್ಷಾ ನಟಿಸಿದ್ದಾಳೆ.

ಎಸ್.ಕೆ. ಸಿನಿಮಾಸ್ ಬ್ಯಾನರ್ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ವಿಜಯ್ ಎಂ. ಕುಮಾರ್ ಸಂಕಲನ, ಮುರಳೀಧರ್ ಎಂ. ಛಾಯಾಗ್ರಹಣ, ಪ್ರಸನ್ನ ಕುಮಾರ್ ಎಂ.ಎಸ್. ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಪದ್ಮಜಾ ರಾವ್, ಕಾಮಿಡಿ ಕಿಲಾಡಿ ಗೋವಿಂದೇಗೌಡ, ಕಾಮಿಡಿ ಕಿಲಾಡಿ ನಿರ್ದೇಶಕ ಶರಣಯ್ಯ, ಪ್ರಿಯಾಂಕಾ ಕಾಮತ್, ಸಂದೇಶ್ ಶೆಟ್ಟಿ ಅಜ್ರಿ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!