AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 3’ ಯಾವಾಗ ಎಂದು ಯಶ್​ಗೆ ಪ್ರಶ್ನೆ ಮಾಡಿದ ಶುಭ್​ಮನ್​ ಗಿಲ್; ಉತ್ತರಿಸಿದ ರಾಕಿಂಗ್ ಸ್ಟಾರ್

‘ಹೊಂಬಾಳೆ ಫಿಲ್ಮ್ಸ್’ನ ವಿಜಯ್ ಕಿರಗಂದೂರು ಅವರು 3-4 ತಿಂಗಳಲ್ಲಿ ‘ಕೆಜಿಎಫ್ 3’ ಬಗ್ಗೆ ಅಪ್​ಡೇಟ್ ಕೋಡೋದಾಗಿ ಹೇಳಿದ್ದರು. ಕ್ರಿಕೆಟರ್ ಶುಭ್​ಮನ್​ ಗಿಲ್​ಗೆ ‘ಕೆಜಿಎಫ್ 3’ ಸಿನಿಮಾ ಬಗ್ಗೆ ಕುತೂಹಲ ಇದೆ. ಇದಕ್ಕೆ ಯಶ್ ಉತ್ತರ ಕೊಟ್ಟಿದ್ದಾರೆ.

‘ಕೆಜಿಎಫ್ 3’ ಯಾವಾಗ ಎಂದು ಯಶ್​ಗೆ ಪ್ರಶ್ನೆ ಮಾಡಿದ ಶುಭ್​ಮನ್​ ಗಿಲ್; ಉತ್ತರಿಸಿದ ರಾಕಿಂಗ್ ಸ್ಟಾರ್
ಶುಭ್​ಮನ್-ಯಶ್
ರಾಜೇಶ್ ದುಗ್ಗುಮನೆ
|

Updated on:Oct 23, 2024 | 7:31 AM

Share

‘ಕೆಜಿಎಫ್ 3 ಸಿನಿಮಾ ಸೆಟ್ಟೋರುದು ಯಾವಾಗ’ ಈ ಪ್ರಶ್ನೆ ಆಗಾಗ ಎಲ್ಲರಲ್ಲೂ ಮೂಡುತ್ತಲೇ ಇರುತ್ತದೆ. ಈಗಾಗಲೇ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ಎರಡು ವರ್ಷಗಳು ಪೂರ್ಣಗೊಂಡಿವೆ. ಇತ್ತೀಚೆಗೆ ಮಾತನಾಡಿದ್ದ ‘ಹೊಂಬಾಳೆ ಫಿಲ್ಮ್ಸ್’ನ ವಿಜಯ್ ಕಿರಗಂದೂರು ಅವರು 3-4 ತಿಂಗಳಲ್ಲಿ ಈ ಬಗ್ಗೆ ಅಪ್​ಡೇಟ್ ಕೋಡೋದಾಗಿ ಹೇಳಿದ್ದರು. ಈಗ ಯಶ್ ಈ ಬಗ್ಗೆ ಮಾತನಾಡಿದ್ದಾರೆ.

‘ದಿ ಹಾಲಿವುಡ್​ ರಿಪೋರ್ಟರ್​ ಇಂಡಿಯಾ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಯಶ್ ಮಾತನಾಡಿದ್ದಾರೆ. ಸಂದರ್ಶಕಿ ಅವರು ಕ್ರಿಕೆಟರ್ ಶುಭ್​​ಮನ್ ಗಿಲ್​ ಕೇಳಿದ ಪ್ರಶ್ನೆಯನ್ನು ಯಶ್​ಗೆ ಕೇಳಿದ್ದಾರೆ. ‘ಶುಭ್​ಮನ್​ ಗಿಲ್ ಅವರು ಕೆಜಿಎಫ್ 3 ಯಾವಾಗ ಆಗುತ್ತದೆ ಎಂದು ಕೇಳಿದ್ದಾರೆ’ ಎಂದರು ಸಂದರ್ಶಕಿ. ಇದಕ್ಕೆ ಯಶ್ ಉತ್ತರ ಕೊಟ್ಟಿದ್ದಾರೆ.

‘ಕೆಜಿಎಫ್ 3 ಆಗೇ ಆಗುತ್ತದೆ. ಈ ಎರಡು (ಟಾಕ್ಸಿಕ್ ಹಾಗೂ ರಾಮಾಯಣ) ಸಿನಿಮಾಗಳ ಮೇಲೆ ಗಮನ ಹರಿಸುತ್ತಿದ್ದೇನೆ. ನಮ್ಮ ಬಳಿ ಒಂದು ಐಡಿಯಾ ಇದೆ. ನಾವು ಆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಸರಿಯಾದ ಸಮಯದಲ್ಲಿ ಬರುತ್ತೇವೆ. ಪ್ರೇಕ್ಷಕರು ಸಾಕಷ್ಟು ನೀಡಿದ್ದಾರೆ. ಈ ಸಿನಿಮಾ ಕಲ್ಟ್​. ಹೀಗಾಗಿ ನಮ್ಮ ಬಗ್ಗೆ ಅವರು ಹೆಮ್ಮೆ ಪಡಬೇಕು. ಆ ರೀತಿಯಲ್ಲಿ ಸಿನಿಮಾ ಮಾಡುತ್ತೇವೆ. ಶುಭಮನ್​ ಗಿಲ್ ಸೇರಿ ಅನೇಕ ಕ್ರಿಕೆಟಿಗರು, ಸೆಲೆಬ್ರಿಟಿಗಳು ಈ ಬಗ್ಗೆ ಕೇಳಿದ್ದಾರೆ. ಎಲ್ಲರೂ ರಾಕಿಭಾಯ್ ಬರಬೇಕು ಎಂದು ಕೇಳುತ್ತಿದ್ದಾರೆ’ ಎಂದಿದ್ದಾರೆ ಯಶ್.

ಇದನ್ನೂ ಓದಿ: KGF 3: ‘ಕೆಜಿಎಫ್ 3’ ನಲ್ಲಿ ರಾಕಿಭಾಯ್ ಜೊತೆಗೆ ಮತ್ತೊಬ್ಬ ಪವರ್​ಫುಲ್ ಸ್ಟಾರ್

ಈ ಚಿತ್ರದ ಕಥೆಯ ಬಗ್ಗೆ, ಚಿತ್ರದ ಬಗ್ಗೆ ಯಶ್ ಹಾಗೂ ಪ್ರಶಾಂತ್ ನೀಲ್ ಚರ್ಚೆಗಳನ್ನು ನಡೆಸುತ್ತಾ ಇದ್ದಾರಂತೆ. ಇವರು ಕಥೆಯನ್ನು ಹೇಗೆ ಮುಂದುವರಿಸಿಕೊಂಡು ಹೋಗುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Wed, 23 October 24

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ