AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 3’ ಯಾವಾಗ ಎಂದು ಯಶ್​ಗೆ ಪ್ರಶ್ನೆ ಮಾಡಿದ ಶುಭ್​ಮನ್​ ಗಿಲ್; ಉತ್ತರಿಸಿದ ರಾಕಿಂಗ್ ಸ್ಟಾರ್

‘ಹೊಂಬಾಳೆ ಫಿಲ್ಮ್ಸ್’ನ ವಿಜಯ್ ಕಿರಗಂದೂರು ಅವರು 3-4 ತಿಂಗಳಲ್ಲಿ ‘ಕೆಜಿಎಫ್ 3’ ಬಗ್ಗೆ ಅಪ್​ಡೇಟ್ ಕೋಡೋದಾಗಿ ಹೇಳಿದ್ದರು. ಕ್ರಿಕೆಟರ್ ಶುಭ್​ಮನ್​ ಗಿಲ್​ಗೆ ‘ಕೆಜಿಎಫ್ 3’ ಸಿನಿಮಾ ಬಗ್ಗೆ ಕುತೂಹಲ ಇದೆ. ಇದಕ್ಕೆ ಯಶ್ ಉತ್ತರ ಕೊಟ್ಟಿದ್ದಾರೆ.

‘ಕೆಜಿಎಫ್ 3’ ಯಾವಾಗ ಎಂದು ಯಶ್​ಗೆ ಪ್ರಶ್ನೆ ಮಾಡಿದ ಶುಭ್​ಮನ್​ ಗಿಲ್; ಉತ್ತರಿಸಿದ ರಾಕಿಂಗ್ ಸ್ಟಾರ್
ಶುಭ್​ಮನ್-ಯಶ್
ರಾಜೇಶ್ ದುಗ್ಗುಮನೆ
|

Updated on:Oct 23, 2024 | 7:31 AM

Share

‘ಕೆಜಿಎಫ್ 3 ಸಿನಿಮಾ ಸೆಟ್ಟೋರುದು ಯಾವಾಗ’ ಈ ಪ್ರಶ್ನೆ ಆಗಾಗ ಎಲ್ಲರಲ್ಲೂ ಮೂಡುತ್ತಲೇ ಇರುತ್ತದೆ. ಈಗಾಗಲೇ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ಎರಡು ವರ್ಷಗಳು ಪೂರ್ಣಗೊಂಡಿವೆ. ಇತ್ತೀಚೆಗೆ ಮಾತನಾಡಿದ್ದ ‘ಹೊಂಬಾಳೆ ಫಿಲ್ಮ್ಸ್’ನ ವಿಜಯ್ ಕಿರಗಂದೂರು ಅವರು 3-4 ತಿಂಗಳಲ್ಲಿ ಈ ಬಗ್ಗೆ ಅಪ್​ಡೇಟ್ ಕೋಡೋದಾಗಿ ಹೇಳಿದ್ದರು. ಈಗ ಯಶ್ ಈ ಬಗ್ಗೆ ಮಾತನಾಡಿದ್ದಾರೆ.

‘ದಿ ಹಾಲಿವುಡ್​ ರಿಪೋರ್ಟರ್​ ಇಂಡಿಯಾ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಯಶ್ ಮಾತನಾಡಿದ್ದಾರೆ. ಸಂದರ್ಶಕಿ ಅವರು ಕ್ರಿಕೆಟರ್ ಶುಭ್​​ಮನ್ ಗಿಲ್​ ಕೇಳಿದ ಪ್ರಶ್ನೆಯನ್ನು ಯಶ್​ಗೆ ಕೇಳಿದ್ದಾರೆ. ‘ಶುಭ್​ಮನ್​ ಗಿಲ್ ಅವರು ಕೆಜಿಎಫ್ 3 ಯಾವಾಗ ಆಗುತ್ತದೆ ಎಂದು ಕೇಳಿದ್ದಾರೆ’ ಎಂದರು ಸಂದರ್ಶಕಿ. ಇದಕ್ಕೆ ಯಶ್ ಉತ್ತರ ಕೊಟ್ಟಿದ್ದಾರೆ.

‘ಕೆಜಿಎಫ್ 3 ಆಗೇ ಆಗುತ್ತದೆ. ಈ ಎರಡು (ಟಾಕ್ಸಿಕ್ ಹಾಗೂ ರಾಮಾಯಣ) ಸಿನಿಮಾಗಳ ಮೇಲೆ ಗಮನ ಹರಿಸುತ್ತಿದ್ದೇನೆ. ನಮ್ಮ ಬಳಿ ಒಂದು ಐಡಿಯಾ ಇದೆ. ನಾವು ಆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಸರಿಯಾದ ಸಮಯದಲ್ಲಿ ಬರುತ್ತೇವೆ. ಪ್ರೇಕ್ಷಕರು ಸಾಕಷ್ಟು ನೀಡಿದ್ದಾರೆ. ಈ ಸಿನಿಮಾ ಕಲ್ಟ್​. ಹೀಗಾಗಿ ನಮ್ಮ ಬಗ್ಗೆ ಅವರು ಹೆಮ್ಮೆ ಪಡಬೇಕು. ಆ ರೀತಿಯಲ್ಲಿ ಸಿನಿಮಾ ಮಾಡುತ್ತೇವೆ. ಶುಭಮನ್​ ಗಿಲ್ ಸೇರಿ ಅನೇಕ ಕ್ರಿಕೆಟಿಗರು, ಸೆಲೆಬ್ರಿಟಿಗಳು ಈ ಬಗ್ಗೆ ಕೇಳಿದ್ದಾರೆ. ಎಲ್ಲರೂ ರಾಕಿಭಾಯ್ ಬರಬೇಕು ಎಂದು ಕೇಳುತ್ತಿದ್ದಾರೆ’ ಎಂದಿದ್ದಾರೆ ಯಶ್.

ಇದನ್ನೂ ಓದಿ: KGF 3: ‘ಕೆಜಿಎಫ್ 3’ ನಲ್ಲಿ ರಾಕಿಭಾಯ್ ಜೊತೆಗೆ ಮತ್ತೊಬ್ಬ ಪವರ್​ಫುಲ್ ಸ್ಟಾರ್

ಈ ಚಿತ್ರದ ಕಥೆಯ ಬಗ್ಗೆ, ಚಿತ್ರದ ಬಗ್ಗೆ ಯಶ್ ಹಾಗೂ ಪ್ರಶಾಂತ್ ನೀಲ್ ಚರ್ಚೆಗಳನ್ನು ನಡೆಸುತ್ತಾ ಇದ್ದಾರಂತೆ. ಇವರು ಕಥೆಯನ್ನು ಹೇಗೆ ಮುಂದುವರಿಸಿಕೊಂಡು ಹೋಗುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Wed, 23 October 24

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು