AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 3’ ಯಾವಾಗ ಎಂದು ಯಶ್​ಗೆ ಪ್ರಶ್ನೆ ಮಾಡಿದ ಶುಭ್​ಮನ್​ ಗಿಲ್; ಉತ್ತರಿಸಿದ ರಾಕಿಂಗ್ ಸ್ಟಾರ್

‘ಹೊಂಬಾಳೆ ಫಿಲ್ಮ್ಸ್’ನ ವಿಜಯ್ ಕಿರಗಂದೂರು ಅವರು 3-4 ತಿಂಗಳಲ್ಲಿ ‘ಕೆಜಿಎಫ್ 3’ ಬಗ್ಗೆ ಅಪ್​ಡೇಟ್ ಕೋಡೋದಾಗಿ ಹೇಳಿದ್ದರು. ಕ್ರಿಕೆಟರ್ ಶುಭ್​ಮನ್​ ಗಿಲ್​ಗೆ ‘ಕೆಜಿಎಫ್ 3’ ಸಿನಿಮಾ ಬಗ್ಗೆ ಕುತೂಹಲ ಇದೆ. ಇದಕ್ಕೆ ಯಶ್ ಉತ್ತರ ಕೊಟ್ಟಿದ್ದಾರೆ.

‘ಕೆಜಿಎಫ್ 3’ ಯಾವಾಗ ಎಂದು ಯಶ್​ಗೆ ಪ್ರಶ್ನೆ ಮಾಡಿದ ಶುಭ್​ಮನ್​ ಗಿಲ್; ಉತ್ತರಿಸಿದ ರಾಕಿಂಗ್ ಸ್ಟಾರ್
ಶುಭ್​ಮನ್-ಯಶ್
ರಾಜೇಶ್ ದುಗ್ಗುಮನೆ
|

Updated on:Oct 23, 2024 | 7:31 AM

Share

‘ಕೆಜಿಎಫ್ 3 ಸಿನಿಮಾ ಸೆಟ್ಟೋರುದು ಯಾವಾಗ’ ಈ ಪ್ರಶ್ನೆ ಆಗಾಗ ಎಲ್ಲರಲ್ಲೂ ಮೂಡುತ್ತಲೇ ಇರುತ್ತದೆ. ಈಗಾಗಲೇ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ಎರಡು ವರ್ಷಗಳು ಪೂರ್ಣಗೊಂಡಿವೆ. ಇತ್ತೀಚೆಗೆ ಮಾತನಾಡಿದ್ದ ‘ಹೊಂಬಾಳೆ ಫಿಲ್ಮ್ಸ್’ನ ವಿಜಯ್ ಕಿರಗಂದೂರು ಅವರು 3-4 ತಿಂಗಳಲ್ಲಿ ಈ ಬಗ್ಗೆ ಅಪ್​ಡೇಟ್ ಕೋಡೋದಾಗಿ ಹೇಳಿದ್ದರು. ಈಗ ಯಶ್ ಈ ಬಗ್ಗೆ ಮಾತನಾಡಿದ್ದಾರೆ.

‘ದಿ ಹಾಲಿವುಡ್​ ರಿಪೋರ್ಟರ್​ ಇಂಡಿಯಾ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಯಶ್ ಮಾತನಾಡಿದ್ದಾರೆ. ಸಂದರ್ಶಕಿ ಅವರು ಕ್ರಿಕೆಟರ್ ಶುಭ್​​ಮನ್ ಗಿಲ್​ ಕೇಳಿದ ಪ್ರಶ್ನೆಯನ್ನು ಯಶ್​ಗೆ ಕೇಳಿದ್ದಾರೆ. ‘ಶುಭ್​ಮನ್​ ಗಿಲ್ ಅವರು ಕೆಜಿಎಫ್ 3 ಯಾವಾಗ ಆಗುತ್ತದೆ ಎಂದು ಕೇಳಿದ್ದಾರೆ’ ಎಂದರು ಸಂದರ್ಶಕಿ. ಇದಕ್ಕೆ ಯಶ್ ಉತ್ತರ ಕೊಟ್ಟಿದ್ದಾರೆ.

‘ಕೆಜಿಎಫ್ 3 ಆಗೇ ಆಗುತ್ತದೆ. ಈ ಎರಡು (ಟಾಕ್ಸಿಕ್ ಹಾಗೂ ರಾಮಾಯಣ) ಸಿನಿಮಾಗಳ ಮೇಲೆ ಗಮನ ಹರಿಸುತ್ತಿದ್ದೇನೆ. ನಮ್ಮ ಬಳಿ ಒಂದು ಐಡಿಯಾ ಇದೆ. ನಾವು ಆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಸರಿಯಾದ ಸಮಯದಲ್ಲಿ ಬರುತ್ತೇವೆ. ಪ್ರೇಕ್ಷಕರು ಸಾಕಷ್ಟು ನೀಡಿದ್ದಾರೆ. ಈ ಸಿನಿಮಾ ಕಲ್ಟ್​. ಹೀಗಾಗಿ ನಮ್ಮ ಬಗ್ಗೆ ಅವರು ಹೆಮ್ಮೆ ಪಡಬೇಕು. ಆ ರೀತಿಯಲ್ಲಿ ಸಿನಿಮಾ ಮಾಡುತ್ತೇವೆ. ಶುಭಮನ್​ ಗಿಲ್ ಸೇರಿ ಅನೇಕ ಕ್ರಿಕೆಟಿಗರು, ಸೆಲೆಬ್ರಿಟಿಗಳು ಈ ಬಗ್ಗೆ ಕೇಳಿದ್ದಾರೆ. ಎಲ್ಲರೂ ರಾಕಿಭಾಯ್ ಬರಬೇಕು ಎಂದು ಕೇಳುತ್ತಿದ್ದಾರೆ’ ಎಂದಿದ್ದಾರೆ ಯಶ್.

ಇದನ್ನೂ ಓದಿ: KGF 3: ‘ಕೆಜಿಎಫ್ 3’ ನಲ್ಲಿ ರಾಕಿಭಾಯ್ ಜೊತೆಗೆ ಮತ್ತೊಬ್ಬ ಪವರ್​ಫುಲ್ ಸ್ಟಾರ್

ಈ ಚಿತ್ರದ ಕಥೆಯ ಬಗ್ಗೆ, ಚಿತ್ರದ ಬಗ್ಗೆ ಯಶ್ ಹಾಗೂ ಪ್ರಶಾಂತ್ ನೀಲ್ ಚರ್ಚೆಗಳನ್ನು ನಡೆಸುತ್ತಾ ಇದ್ದಾರಂತೆ. ಇವರು ಕಥೆಯನ್ನು ಹೇಗೆ ಮುಂದುವರಿಸಿಕೊಂಡು ಹೋಗುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Wed, 23 October 24

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್