AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 3’ ಯಾವಾಗ ಎಂದು ಯಶ್​ಗೆ ಪ್ರಶ್ನೆ ಮಾಡಿದ ಶುಭ್​ಮನ್​ ಗಿಲ್; ಉತ್ತರಿಸಿದ ರಾಕಿಂಗ್ ಸ್ಟಾರ್

‘ಹೊಂಬಾಳೆ ಫಿಲ್ಮ್ಸ್’ನ ವಿಜಯ್ ಕಿರಗಂದೂರು ಅವರು 3-4 ತಿಂಗಳಲ್ಲಿ ‘ಕೆಜಿಎಫ್ 3’ ಬಗ್ಗೆ ಅಪ್​ಡೇಟ್ ಕೋಡೋದಾಗಿ ಹೇಳಿದ್ದರು. ಕ್ರಿಕೆಟರ್ ಶುಭ್​ಮನ್​ ಗಿಲ್​ಗೆ ‘ಕೆಜಿಎಫ್ 3’ ಸಿನಿಮಾ ಬಗ್ಗೆ ಕುತೂಹಲ ಇದೆ. ಇದಕ್ಕೆ ಯಶ್ ಉತ್ತರ ಕೊಟ್ಟಿದ್ದಾರೆ.

‘ಕೆಜಿಎಫ್ 3’ ಯಾವಾಗ ಎಂದು ಯಶ್​ಗೆ ಪ್ರಶ್ನೆ ಮಾಡಿದ ಶುಭ್​ಮನ್​ ಗಿಲ್; ಉತ್ತರಿಸಿದ ರಾಕಿಂಗ್ ಸ್ಟಾರ್
ಶುಭ್​ಮನ್-ಯಶ್
ರಾಜೇಶ್ ದುಗ್ಗುಮನೆ
|

Updated on:Oct 23, 2024 | 7:31 AM

Share

‘ಕೆಜಿಎಫ್ 3 ಸಿನಿಮಾ ಸೆಟ್ಟೋರುದು ಯಾವಾಗ’ ಈ ಪ್ರಶ್ನೆ ಆಗಾಗ ಎಲ್ಲರಲ್ಲೂ ಮೂಡುತ್ತಲೇ ಇರುತ್ತದೆ. ಈಗಾಗಲೇ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ಎರಡು ವರ್ಷಗಳು ಪೂರ್ಣಗೊಂಡಿವೆ. ಇತ್ತೀಚೆಗೆ ಮಾತನಾಡಿದ್ದ ‘ಹೊಂಬಾಳೆ ಫಿಲ್ಮ್ಸ್’ನ ವಿಜಯ್ ಕಿರಗಂದೂರು ಅವರು 3-4 ತಿಂಗಳಲ್ಲಿ ಈ ಬಗ್ಗೆ ಅಪ್​ಡೇಟ್ ಕೋಡೋದಾಗಿ ಹೇಳಿದ್ದರು. ಈಗ ಯಶ್ ಈ ಬಗ್ಗೆ ಮಾತನಾಡಿದ್ದಾರೆ.

‘ದಿ ಹಾಲಿವುಡ್​ ರಿಪೋರ್ಟರ್​ ಇಂಡಿಯಾ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಯಶ್ ಮಾತನಾಡಿದ್ದಾರೆ. ಸಂದರ್ಶಕಿ ಅವರು ಕ್ರಿಕೆಟರ್ ಶುಭ್​​ಮನ್ ಗಿಲ್​ ಕೇಳಿದ ಪ್ರಶ್ನೆಯನ್ನು ಯಶ್​ಗೆ ಕೇಳಿದ್ದಾರೆ. ‘ಶುಭ್​ಮನ್​ ಗಿಲ್ ಅವರು ಕೆಜಿಎಫ್ 3 ಯಾವಾಗ ಆಗುತ್ತದೆ ಎಂದು ಕೇಳಿದ್ದಾರೆ’ ಎಂದರು ಸಂದರ್ಶಕಿ. ಇದಕ್ಕೆ ಯಶ್ ಉತ್ತರ ಕೊಟ್ಟಿದ್ದಾರೆ.

‘ಕೆಜಿಎಫ್ 3 ಆಗೇ ಆಗುತ್ತದೆ. ಈ ಎರಡು (ಟಾಕ್ಸಿಕ್ ಹಾಗೂ ರಾಮಾಯಣ) ಸಿನಿಮಾಗಳ ಮೇಲೆ ಗಮನ ಹರಿಸುತ್ತಿದ್ದೇನೆ. ನಮ್ಮ ಬಳಿ ಒಂದು ಐಡಿಯಾ ಇದೆ. ನಾವು ಆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಸರಿಯಾದ ಸಮಯದಲ್ಲಿ ಬರುತ್ತೇವೆ. ಪ್ರೇಕ್ಷಕರು ಸಾಕಷ್ಟು ನೀಡಿದ್ದಾರೆ. ಈ ಸಿನಿಮಾ ಕಲ್ಟ್​. ಹೀಗಾಗಿ ನಮ್ಮ ಬಗ್ಗೆ ಅವರು ಹೆಮ್ಮೆ ಪಡಬೇಕು. ಆ ರೀತಿಯಲ್ಲಿ ಸಿನಿಮಾ ಮಾಡುತ್ತೇವೆ. ಶುಭಮನ್​ ಗಿಲ್ ಸೇರಿ ಅನೇಕ ಕ್ರಿಕೆಟಿಗರು, ಸೆಲೆಬ್ರಿಟಿಗಳು ಈ ಬಗ್ಗೆ ಕೇಳಿದ್ದಾರೆ. ಎಲ್ಲರೂ ರಾಕಿಭಾಯ್ ಬರಬೇಕು ಎಂದು ಕೇಳುತ್ತಿದ್ದಾರೆ’ ಎಂದಿದ್ದಾರೆ ಯಶ್.

ಇದನ್ನೂ ಓದಿ: KGF 3: ‘ಕೆಜಿಎಫ್ 3’ ನಲ್ಲಿ ರಾಕಿಭಾಯ್ ಜೊತೆಗೆ ಮತ್ತೊಬ್ಬ ಪವರ್​ಫುಲ್ ಸ್ಟಾರ್

ಈ ಚಿತ್ರದ ಕಥೆಯ ಬಗ್ಗೆ, ಚಿತ್ರದ ಬಗ್ಗೆ ಯಶ್ ಹಾಗೂ ಪ್ರಶಾಂತ್ ನೀಲ್ ಚರ್ಚೆಗಳನ್ನು ನಡೆಸುತ್ತಾ ಇದ್ದಾರಂತೆ. ಇವರು ಕಥೆಯನ್ನು ಹೇಗೆ ಮುಂದುವರಿಸಿಕೊಂಡು ಹೋಗುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Wed, 23 October 24

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ