AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವೇತಾ ಶ್ರೀವಾತ್ಸವ್‌ ಹುಟ್ಟುಹಬ್ಬಕ್ಕೆ ‘ಹೋಪ್’ ಸಿನಿಮಾ ಮೋಷನ್ ಪೋಸ್ಟರ್ ಬಿಡುಗಡೆ

ಶ್ವೇತಾ ಶ್ರೀವಾತ್ಸವ್ ನಟನೆಯ ‘ಹೋಪ್​’ ಚಿತ್ರಕ್ಕೆ 34 ದಿನಗಳಲ್ಲೇ ಶೂಟಿಂಗ್​ ಪೂರ್ಣಗಳಿಸಲಾಗಿದೆ. ಲಾಕ್‌ಡೌನ್‌ ಅವಧಿಯಲ್ಲೇ ಸಿನಿಮಾದ ಕೆಲಸಗಳು ಮುಕ್ತಾಯಗೊಂಡಿವೆ.

ಶ್ವೇತಾ ಶ್ರೀವಾತ್ಸವ್‌ ಹುಟ್ಟುಹಬ್ಬಕ್ಕೆ ‘ಹೋಪ್' ಸಿನಿಮಾ ಮೋಷನ್ ಪೋಸ್ಟರ್ ಬಿಡುಗಡೆ
ಶ್ವೇತಾ ಶ್ರೀವಾತ್ಸವ್
TV9 Web
| Updated By: ಮದನ್​ ಕುಮಾರ್​|

Updated on: Sep 04, 2021 | 3:38 PM

Share

ಖ್ಯಾತ ನಟಿ ಶ್ವೇತಾ ಶ್ರೀವಾತ್ಸವ್​ ಈಗೇನು ಮಾಡುತ್ತಿದ್ದಾರೆ? ಇಷ್ಟು ದಿನಗಳ ಕಾಲ ಕುಟುಂಬದ ಕಡೆಗೆ ಹೆಚ್ಚು ಗಮನ ನೀಡುತ್ತಿದ್ದ ಅವರು ಈಗ ಮತ್ತೆ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಮಗಳ ಲಾಲನೆ-ಪಾಲನೆಯ ಜೊತೆಜೊತೆಗೆ ನಟನೆ ಕೂಡ ಮುಂದುವರಿಸಿದ್ದಾರೆ. ಇಂದು (ಸೆ.4) ಅವರ ಜನ್ಮದಿನ. ಸೆಲೆಬ್ರಿಟಿಗಳು, ಅಭಿಮಾನಿಗಳು, ಸ್ನೇಹಿತರಿಂದ ಶ್ವೇತಾಗೆ ಬರ್ತ್​ಡೇ ವಿಶ್​ ಹರಿದುಬರುತ್ತಿದೆ. ‘ಹೋಪ್​’ ಸಿನಿಮಾ ತಂಡದಿಂದ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಿ ಶ್ವೇತಾಗೆ ಹುಟ್ಟುಹಬ್ಬದ ಶುಭ ಕೋರಲಾಗಿದೆ.

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’, ‘ಕಿರಗೂರಿನ ಗಯ್ಯಾಳಿಗಳು’ ಮುಂತಾದ ಸಿನಿಮಾಗಳಿಂದ ಶ್ವೇತಾ ಶ್ರೀವಾತ್ಸವ್‌ ಖ್ಯಾತಿ ಹೆಚ್ಚಿತ್ತು. ಈಗ ‘ಹೋಪ್​’ ಸಿನಿಮಾದಲ್ಲಿ ಅವರಿಗೆ ಮುಖ್ಯ ಪಾತ್ರವಿದೆ. ಮೋಷನ್‌ ಪೋಸ್ಟರ್ ಮೂಲಕ ಪ್ರೇಕ್ಷಕರ ಗಮನ ಸೆಳೆಯುವ ಪ್ರಯತ್ನ ಮಾಡಿದೆ ಈ ಸಿನಿಮಾ ತಂಡ. ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ನೇರ ಮತ್ತು ದಿಟ್ಟ ನಡುವಳಿಕೆಯ ಕಾರಣದಿಂದಲೇ ಶ್ವೇತಾ ಶ್ರೀವಾತ್ಸವ್ ಅವರನ್ನು ಈ ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳಲಾಯಿತು ಎನ್ನುತ್ತಾರೆ ವರ್ಷಾ ಸಂಜೀವ್​. ‘ನಮ್ಮ ಹೋಪ್ ಸಿನಿಮಾದಲ್ಲಿ ಅವರು ಅದೇ ರೀತಿಯ ಪಾತ್ರವನ್ನು ನಿಭಾಯಿಸಿದ್ದಾರೆ. ಹಾಗಾಗಿ ಆ ಪಾತ್ರದ ಬಗ್ಗೆ ಕೇಳಿದಾಗಲೇ ನನ್ನ ಮತ್ತು ನಿರ್ದೇಶಕರ ತಲೆಯಲ್ಲಿ ಸುಳಿದಾಡಿದ್ದು ಇವರ ಹೆಸರು ಮಾತ್ರ. ನಮ್ಮ ಸಿನಿಮಾದಲ್ಲಿ ಕೆಎಎಸ್ ಅಧಿಕಾರಿಯ ಪಾತ್ರದಲ್ಲಿ ಶ್ವೇತಾ ಕಾಣಿಸಿಕೊಳ್ಳುತ್ತಿದ್ದಾರೆ. ಆ ಪಾತ್ರದಲ್ಲಿ ಅವರು ತುಂಬ ಚೆನ್ನಾಗಿ ಅಭಿನಯಿಸಿದ್ದಾರೆ. ಸಿನಿಮಾ‌ ನೋಡಿದ ನಂತರ ಪ್ರೇಕ್ಷಕರಿಗೂ ಆ ಭಾವನೆ ಬರುತ್ತದೆ’ ಎಂಬುದು ವರ್ಷಾ ಮಾತುಗಳು. ‘ಶ್ವೇತಾ ನಟನೆಯ ಈ ಹಿಂದಿನ ಸಿನಿಮಾಗಳನ್ನು ನಾನು ನೋಡಿದ್ದೇನೆ. ಕಿರಗೂರಿನ ಗಯ್ಯಾಳಿಗಳು ಸಿನಿಮಾದಲ್ಲಿನ ಅವರ ಪಾತ್ರ ನನಗೆ ತುಂಬ ಇಷ್ಟ ಆಗಿತ್ತು. ಅಲ್ಲಿನ ದಿಟ್ಟತನದ ಮುಖವು ಇಲ್ಲಿ ಅಧಿಕಾರಿಯ ರೂಪದಲ್ಲಿ ಕಾಣಿಸುತ್ತದೆ’ ಎನ್ನುತ್ತಾರೆ ವರ್ಷಾ.

ಈ ಪಾತ್ರದ ಬಗ್ಗೆ ಶ್ವೇತಾ ಶ್ರೀವಾತ್ಸವ್‌ ಭರವಸೆ ಇಟ್ಟುಕೊಂಡಿದ್ದಾರೆ. ‘ಇದೊಂದು ಪವರ್‌ಫುಲ್ ಪಾತ್ರ. ನಿರ್ದೇಶಕ ಅಂಬರೀಷ್ ಅವರು ಉತ್ತಮವಾಗಿ ಸಿನಿಮಾ ಮಾಡಿದ್ದಾರೆ’ ಎಂದು ಶ್ವೇತಾ ಹೇಳಿದ್ದಾರೆ. ಸಂಸದೆ ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ, ಪ್ರಕಾಶ್ ಬೆಳವಾಡಿ, ಗೋಪಾಲ್ ದೇಶಪಾಂಡೆ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ನಿರ್ಮಾಪಕಿ ವರ್ಷಾ ಸಂಜೀವ್ ಬರೆದ ಕಥೆಗೆ ಅಂಬರೀಷ್‌ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

‘ಹೋಪ್​’ ಚಿತ್ರಕ್ಕೆ 34 ದಿನಗಳಲ್ಲೇ ಶೂಟಿಂಗ್​ ಪೂರ್ಣಗಳಿಸಲಾಗಿದೆ. ಲಾಕ್‌ಡೌನ್‌ ಅವಧಿಯಲ್ಲೇ ಸಿನಿಮಾದ ಕೆಲಸಗಳು ಮುಕ್ತಾಯಗೊಂಡಿವೆ. ಚಿತ್ರದ ಹಾಡುಗಳಿಗೆ ರಿತ್ವಿಕ್ ಮುರಳೀಧರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಹಾಲೇಶ್ ಛಾಯಾಗ್ರಹಣ ಚಿತ್ರಕ್ಕಿದ್ದು, ಹರೀಶ್ ಕೊಮ್ಮೆ ಸಂಕಲನ ಮಾಡಿದ್ದಾರೆ.

ಇದನ್ನೂ ಓದಿ:

Anant Nag Birthday: ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್​; ಹುಟ್ಟುಹಬ್ಬಕ್ಕೆ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ

‘ರಮ್ಯಾ-ರಕ್ಷಿತಾ ನಡುವೆ ಆ ವಿಚಾರಕ್ಕೆ ಕಿರಿಕ್​ ಆಗಿತ್ತು’; ಶೂಟಿಂಗ್​ ಸಮಯದ ವಿವರ ತೆರೆದಿಟ್ಟ ಕವಿತಾ ಲಂಕೇಶ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!