Hope Movie: ಪ್ರತಿಭಾವಂತ ಕಲಾವಿದರ ‘ಹೋಪ್​’ ಸಿನಿಮಾ ಜುಲೈ 8ಕ್ಕೆ ತೆರೆಗೆ; ಈ ಚಿತ್ರದ ಕಥಾಹಂದರ ಏನು?

Shwetha Srivatsav: ವರ್ಷಾ ಸಂಜೀವ್ ಅವರು ‘ಹೋಪ್​’​ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಅದರ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಅವರು ನಿಭಾಯಿಸಿದ್ದಾರೆ. ಅಂಬರೀಷ್ ಅವರು ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

Hope Movie: ಪ್ರತಿಭಾವಂತ ಕಲಾವಿದರ ‘ಹೋಪ್​’ ಸಿನಿಮಾ ಜುಲೈ 8ಕ್ಕೆ ತೆರೆಗೆ; ಈ ಚಿತ್ರದ ಕಥಾಹಂದರ ಏನು?
ಹೋಪ್ ಸಿನಿಮಾ ಪೋಸ್ಟರ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 09, 2022 | 7:30 AM

ಖ್ಯಾತ ನಟಿ ಶ್ವೇತಾ ಶ್ರೀವಾತ್ಸವ್ (Shwetha Srivatsav)​ ಅವರು ‘ಹೋಪ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡದ ಈ ಸಿನಿಮಾ ಮೇಲೆ ಅವರ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿ, ಬೇರೆ ಬೇರೆ ಪಾತ್ರಗಳ ಮೂಲಕ ಜನಮನ ಗೆದ್ದಿರುವ ಶ್ವೇತಾ ಶ್ರೀವಾತ್ಸವ್​ ಅವರಿಗೆ ‘ಹೋಪ್​’ ಸಿನಿಮಾದಲ್ಲಿ ಕೆಎಎಸ್​ ಅಧಿಕಾರಿಯ ಪಾತ್ರ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್​ ಆಗುವುದು ವಿಳಂಬ ಆಯಿತು. ಈಗ ‘ಹೋಪ್​’ (Hope Movie) ಬಿಡುಗಡೆಗೆ ಕಾಲ ಕೂಡಿಬಂದಿದೆ. ಸಿನಿಮಾದ ಎಲ್ಲಾ ಕೆಲಸಗಳನ್ನು ಮುಗಿಸಿಕೊಂಡಿರುವ ಚಿತ್ರತಂಡ ಜುಲೈ 8ಕ್ಕೆ ರಿಲೀಸ್​ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಶ್ವೇತಾ ಶ್ರೀವಾತ್ಸವ್ ಮಾತ್ರವಲ್ಲದೇ ಅನೇಕ ಪ್ರತಿಭಾವಂತ ಕಲಾವಿದರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಕಾಶ್​ ಬೆಳವಾಡಿ, ಸುಮಲತಾ ಅಂಬರೀಶ್​, ಗೋಪಾಲ ದೇಶಪಾಂಡೆ, ಪ್ರಮೋದ್​ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ.

‘ಹೋಪ್​’ ಸಿನಿಮಾದ ಕಥಾಹಂದರ ಕೂಡ ಭಿನ್ನವಾಗಿದೆ. ಕೆಎಎಸ್ ಅಧಿಕಾರಿಗಳ ವರ್ಗಾವಣೆಯಿಂದ ಸಾಮಾನ್ಯ ಜನರ ಜೀವನದಲ್ಲಿ ಏನೆಲ್ಲಾ ಪರಿಣಾಮಗಳು ಆಗುತ್ತವೆ ಎಂಬ ಕಥಾವಸ್ತು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಆ ಕಾರಣದಿಂದ ಕೆಎಎಸ್​ ಅಧಿಕಾರಿ ಪಾತ್ರವನ್ನು ಶ್ವೇತಾ ಶ್ರೀವಾತ್ಸವ್​ ಅವರು ನಿಭಾಯಿಸಿ​ದ್ದಾರೆ. ಉಳಿದ ಕಲಾವಿದರಾದ ಪ್ರಮೋದ್​ ಶೆಟ್ಟಿ, ಸುಮಲತಾ ಅಂಬರೀಶ್​, ಗೋಪಾಲ ದೇಶಪಾಂಡೆ, ಪ್ರಕಾಶ್​ ಬೆಳವಾಡಿ ಅವರ ಪಾತ್ರಗಳು ಹೇಗಿವೆ ಎಂಬುದನ್ನು ತಿಳಿದುಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ಅವರು ‘ಹೋಪ್​’​ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಅದರ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಅವರು ನಿಭಾಯಿಸಿದ್ದಾರೆ. ಅಂಬರೀಷ್ ಅವರು ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕೊರೊನಾ ಕಾರಣದಿಂದ ಚಿತ್ರದ ಕೆಲಸಗಳು ವಿಳಂಬ ಆಗಿದ್ದವು. ಈಗ ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು ಸಿನಿಮಾ ರಿಲೀಸ್​ ಆಗುತ್ತಿದೆ. ‘ಹೋಪ್’ ಚಿತ್ರಕ್ಕೆ ಹಾಲೇಶ್ ಛಾಯಾಗ್ರಾಹಣ ಮಾಡಿದ್ದಾರೆ. ಹರೀಶ್ ಕೊಮ್ಮೆ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ರಿತ್ವಿಕ್ ಮುರಳೀಧರ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಒಟ್ಟು 34 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ.

ಇದನ್ನೂ ಓದಿ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​
Image
‘ಕೆಜಿಎಫ್​ 3’ ಚಿತ್ರದಲ್ಲಿ ಹೃತಿಕ್​ ರೋಷನ್​ ಇರ್ತಾರಾ? ಊರ ತುಂಬ ಹಬ್ಬಿದೆ ಹೊಸ ಗಾಸಿಪ್​
Image
Yogaraj Bhat: ಶಿವಣ್ಣ- ಪ್ರಭುದೇವ ಕಾಂಬಿನೇಷನ್​ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ ಯೋಗರಾಜ್ ಭಟ್; ಚಿತ್ರೀಕರಣ ಯಾವಾಗ?
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ