AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hope Movie: ಪ್ರತಿಭಾವಂತ ಕಲಾವಿದರ ‘ಹೋಪ್​’ ಸಿನಿಮಾ ಜುಲೈ 8ಕ್ಕೆ ತೆರೆಗೆ; ಈ ಚಿತ್ರದ ಕಥಾಹಂದರ ಏನು?

Shwetha Srivatsav: ವರ್ಷಾ ಸಂಜೀವ್ ಅವರು ‘ಹೋಪ್​’​ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಅದರ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಅವರು ನಿಭಾಯಿಸಿದ್ದಾರೆ. ಅಂಬರೀಷ್ ಅವರು ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

Hope Movie: ಪ್ರತಿಭಾವಂತ ಕಲಾವಿದರ ‘ಹೋಪ್​’ ಸಿನಿಮಾ ಜುಲೈ 8ಕ್ಕೆ ತೆರೆಗೆ; ಈ ಚಿತ್ರದ ಕಥಾಹಂದರ ಏನು?
ಹೋಪ್ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Jun 09, 2022 | 7:30 AM

Share

ಖ್ಯಾತ ನಟಿ ಶ್ವೇತಾ ಶ್ರೀವಾತ್ಸವ್ (Shwetha Srivatsav)​ ಅವರು ‘ಹೋಪ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡದ ಈ ಸಿನಿಮಾ ಮೇಲೆ ಅವರ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿ, ಬೇರೆ ಬೇರೆ ಪಾತ್ರಗಳ ಮೂಲಕ ಜನಮನ ಗೆದ್ದಿರುವ ಶ್ವೇತಾ ಶ್ರೀವಾತ್ಸವ್​ ಅವರಿಗೆ ‘ಹೋಪ್​’ ಸಿನಿಮಾದಲ್ಲಿ ಕೆಎಎಸ್​ ಅಧಿಕಾರಿಯ ಪಾತ್ರ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್​ ಆಗುವುದು ವಿಳಂಬ ಆಯಿತು. ಈಗ ‘ಹೋಪ್​’ (Hope Movie) ಬಿಡುಗಡೆಗೆ ಕಾಲ ಕೂಡಿಬಂದಿದೆ. ಸಿನಿಮಾದ ಎಲ್ಲಾ ಕೆಲಸಗಳನ್ನು ಮುಗಿಸಿಕೊಂಡಿರುವ ಚಿತ್ರತಂಡ ಜುಲೈ 8ಕ್ಕೆ ರಿಲೀಸ್​ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಶ್ವೇತಾ ಶ್ರೀವಾತ್ಸವ್ ಮಾತ್ರವಲ್ಲದೇ ಅನೇಕ ಪ್ರತಿಭಾವಂತ ಕಲಾವಿದರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಕಾಶ್​ ಬೆಳವಾಡಿ, ಸುಮಲತಾ ಅಂಬರೀಶ್​, ಗೋಪಾಲ ದೇಶಪಾಂಡೆ, ಪ್ರಮೋದ್​ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ.

‘ಹೋಪ್​’ ಸಿನಿಮಾದ ಕಥಾಹಂದರ ಕೂಡ ಭಿನ್ನವಾಗಿದೆ. ಕೆಎಎಸ್ ಅಧಿಕಾರಿಗಳ ವರ್ಗಾವಣೆಯಿಂದ ಸಾಮಾನ್ಯ ಜನರ ಜೀವನದಲ್ಲಿ ಏನೆಲ್ಲಾ ಪರಿಣಾಮಗಳು ಆಗುತ್ತವೆ ಎಂಬ ಕಥಾವಸ್ತು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಆ ಕಾರಣದಿಂದ ಕೆಎಎಸ್​ ಅಧಿಕಾರಿ ಪಾತ್ರವನ್ನು ಶ್ವೇತಾ ಶ್ರೀವಾತ್ಸವ್​ ಅವರು ನಿಭಾಯಿಸಿ​ದ್ದಾರೆ. ಉಳಿದ ಕಲಾವಿದರಾದ ಪ್ರಮೋದ್​ ಶೆಟ್ಟಿ, ಸುಮಲತಾ ಅಂಬರೀಶ್​, ಗೋಪಾಲ ದೇಶಪಾಂಡೆ, ಪ್ರಕಾಶ್​ ಬೆಳವಾಡಿ ಅವರ ಪಾತ್ರಗಳು ಹೇಗಿವೆ ಎಂಬುದನ್ನು ತಿಳಿದುಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ಅವರು ‘ಹೋಪ್​’​ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಅದರ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಅವರು ನಿಭಾಯಿಸಿದ್ದಾರೆ. ಅಂಬರೀಷ್ ಅವರು ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕೊರೊನಾ ಕಾರಣದಿಂದ ಚಿತ್ರದ ಕೆಲಸಗಳು ವಿಳಂಬ ಆಗಿದ್ದವು. ಈಗ ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು ಸಿನಿಮಾ ರಿಲೀಸ್​ ಆಗುತ್ತಿದೆ. ‘ಹೋಪ್’ ಚಿತ್ರಕ್ಕೆ ಹಾಲೇಶ್ ಛಾಯಾಗ್ರಾಹಣ ಮಾಡಿದ್ದಾರೆ. ಹರೀಶ್ ಕೊಮ್ಮೆ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ರಿತ್ವಿಕ್ ಮುರಳೀಧರ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಒಟ್ಟು 34 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ.

ಇದನ್ನೂ ಓದಿ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​
Image
‘ಕೆಜಿಎಫ್​ 3’ ಚಿತ್ರದಲ್ಲಿ ಹೃತಿಕ್​ ರೋಷನ್​ ಇರ್ತಾರಾ? ಊರ ತುಂಬ ಹಬ್ಬಿದೆ ಹೊಸ ಗಾಸಿಪ್​
Image
Yogaraj Bhat: ಶಿವಣ್ಣ- ಪ್ರಭುದೇವ ಕಾಂಬಿನೇಷನ್​ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ ಯೋಗರಾಜ್ ಭಟ್; ಚಿತ್ರೀಕರಣ ಯಾವಾಗ?
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
TV9 Web
TV9 Web

TV9 Kannada

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ