ಮದುವೆ ಬಳಿಕ ಇಂಡಸ್ಟ್ರಿಯಲ್ಲಿ ಎದುರಾದ ಕಷ್ಟಗಳೇನು? ಶ್ವೇತಾ ಶ್ರೀವಾತ್ಸವ್ ವಿವರಿಸಿದ್ದು ಹೀಗೆ

ಶ್ವೇತಾ ಕುಟುಂಬದ ಜೊತೆಯೂ ಗಮನ ಹರಿಸುತ್ತಿದ್ದಾರೆ. ತಾಯಿ ಆದ ಬಳಿಕ ಅವರು ಎದುರಿಸಿದ ಕಷ್ಟಗಳ ಬಗ್ಗೆ ಶ್ವೇತಾ ಮಾತನಾಡಿದ್ದಾರೆ.

ಮದುವೆ ಬಳಿಕ ಇಂಡಸ್ಟ್ರಿಯಲ್ಲಿ ಎದುರಾದ ಕಷ್ಟಗಳೇನು? ಶ್ವೇತಾ ಶ್ರೀವಾತ್ಸವ್ ವಿವರಿಸಿದ್ದು ಹೀಗೆ
ಶ್ವೇತಾ
Follow us
|

Updated on:May 15, 2023 | 2:40 PM

ನಟಿ ಶ್ವೇತಾ ಶ್ರೀವಾತ್ಸವ್ (Shwetha Srivatsav) ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅವರು ತಮ್ಮ ಪಾಲಿಗೆ ಬಂದ ಎಲ್ಲಾ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಅವರು ಕುಟುಂಬದ ಕೆಲಸಗಳಲ್ಲೂ ಬ್ಯುಸಿ ಇದ್ದಾರೆ. ಶ್ವೇತಾ ಶ್ರೀವಾತ್ಸವ್ ಅವರು ಈಗ ಕೆಲ ವಿಚಾರಗಳ ಬಗ್ಗೆ ಓಪನ್ ಆಗಿ ಮಾತನಾಡಿದ್ದಾರೆ. ತಾಯಿ ಆದ ಬಳಿಕ ಚಿತ್ರರಂಗದಲ್ಲಿ ಎದುರಿಸಬೇಕಾದ ಸಮಸ್ಯೆಗಳ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಶ್ವೇತಾ ಶ್ರೀವಾತ್ಸವ್ ಅವರು ‘ಸೈಬರ್ ಯುಗದೋಳ್​ ನವಯುವ ಮಧುರ ಪ್ರೇಮ ಕಾವ್ಯಂ’ ಚಿತ್ರದ ಮೂಲಕ ನಾಯಕಿ ಆಗಿ ಕಾಣಿಸಿಕೊಂಡರು. ಈ ಸಿನಿಮಾ 2012ರಲ್ಲಿ ರಿಲೀಸ್ ಆಯಿತು. ಆ ಬಳಿಕ ರಿಲೀಸ್ ಆಗಿದ್ದು ‘ಸಿಂಪಲ್ಲಾಗ್ ಒಂದ್ ಲವ್​ಸ್ಟೋರಿ’ ಚಿತ್ರ. ಇದರಲ್ಲಿ ಅವರು ನಟಿಸಿದರು. ಆ ಬಳಿಕ ಅವರು ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ಅವರು ಕುಟುಂಬದ ಕಡೆಗೂ ಗಮನ ಹರಿಸುತ್ತಿದ್ದಾರೆ. ತಾಯಿ ಆದ ಬಳಿಕ ಅವರು ಎದುರಿಸಿದ ಕಷ್ಟಗಳ ಬಗ್ಗೆ ಶ್ವೇತಾ ಮಾತನಾಡಿದ್ದಾರೆ.

‘ತಾಯಿ ಆದ ಬಳಿಕ ನಾವು ಪ್ರಮುಖ ಪಾತ್ರಗಳಿಗೆ ಯೋಗ್ಯರಲ್ಲ ಎಂಬ ಭಾವನೆಯನ್ನು ನಮ್ಮ ಇಂಡಸ್ಟ್ರಿ ಉಂಟು ಮಾಡುತ್ತದೆ. ಆದರೆ ತಾಯಿ ಆಗೋದು ನಿಮಗೆ ಬಹಳಷ್ಟು ವಿಚಾರಗಳನ್ನು ಕಲಿಸುತ್ತದೆ. ತಾಳ್ಮೆ ಬರುತ್ತದೆ. ನಾನು ತಾಯಿಯಾದ ನಂತರ ಮೂರು ಸಿನಿಮಾ ಮಾಡಿದ್ದೇನೆ. ಎರಡರಲ್ಲಿ ನಾಯಕಿಯಾಗಿ ನಟಿಸಿದ್ದೇನೆ. ತಾಯಂದಿರು ತಮ್ಮಲ್ಲಿ ನಂಬಿಕೆ ಇಡಬೇಕು. ನಮ್ಮಲ್ಲಿ ವಿಶೇಷ ಶಕ್ತಿ ಇದೆ’ ಎಂದು ಹಿಂದುಸ್ತಾನ್ ಟೈಮ್ಸ್​​ ಜೊತೆ ಮಾತನಾಡಿದ್ದಾರೆ.

ಮೇ 15ರಂದು ತಾಯಂದಿರ ದಿನಾಚರಣೆ ಆಚರಿಸಲಾಯಿತು. ಈ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ನಾನು ತಾಯಿ ಆಗುವುದಕ್ಕೂ ಮೊದಲು ನನ್ನ ಅಮ್ಮನ ಕಾರ್ಯವನ್ನು ಶ್ಲಾಘಿಸುತ್ತಿದೆ. ನಾನು ತಾಯಿ ಆದ ಬಳಿಕ ತಾಯಿಯ ಮತ್ತೊಂದಷ್ಟು ಜವಾಬ್ದಾರಿಯನ್ನು ತಿಳಿದುಕೊಂಡೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: Shwetha Srivatsav: ಮದ್ವೆ ನಂತರ ಚಿತ್ರರಂಗಕ್ಕೆ ಬಂದು ಶ್ವೇತಾ ಶ್ರೀವಾತ್ಸವ್​ ಎದುರಿಸಿದ ಚಾಲೆಂಜ್​ ಏನು? ಇಲ್ಲಿದೆ ಓಪನ್​ ಟಾಕ್​

ಮೇ 14ರಂದು ತಾಯಂದಿರ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಅನೇಕ ಸೆಲೆಬ್ರಿಟಿಗಳು ತಮ್ಮ ತಾಯಂದಿರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಶುಭಾಶಯ ಕೋರಿದ್ದಾರೆ. ಶ್ವೇತಾ ಕೂಡ ಸೋಶಿಯಲ್ ಮೀಡಿಯಾದಲ್ಲಿ ಮಗಳು ಮತ್ತು ತಾಯಿಯ ಪೋಸ್ಟ್ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:41 pm, Mon, 15 May 23

ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ