AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಸ್ತಕ ಬರೆಯಲು ಮುಂದಾದ ಶ್ವೇತಾ ಶ್ರೀವಾತ್ಸವ; ಹೀಗೆ ಮಾಡಿದ್ರೆ ಅದರಲ್ಲಿ ನಿಮ್ಮ ಹೆಸರೂ ಇರುತ್ತೆ

ಈ ತಿಂಗಳ ಆರಂಭದಲ್ಲಿ ತೆರೆಗೆ ಬಂದ ‘ಹೋಪ್​’ ಚಿತ್ರದ ಮೂಲಕ ಶ್ವೇತಾ ಚಿತ್ರರಂಗಕ್ಕೆ ಮರಳಿದ್ದಾರೆ. ಇನ್ನೂ ಎರಡು ಸಿನಿಮಾಗಳು ಅವರ ಕೈಯಲ್ಲಿ ಇವೆ.

ಪುಸ್ತಕ ಬರೆಯಲು ಮುಂದಾದ ಶ್ವೇತಾ ಶ್ರೀವಾತ್ಸವ; ಹೀಗೆ ಮಾಡಿದ್ರೆ ಅದರಲ್ಲಿ ನಿಮ್ಮ ಹೆಸರೂ ಇರುತ್ತೆ
ಶ್ವೇತಾ
TV9 Web
| Edited By: |

Updated on:Jul 29, 2022 | 9:11 PM

Share

ಮದುವೆ, ಮಕ್ಕಳು ಆದ ನಂತರದಲ್ಲಿ ನಟಿಯರಿಗೆ ಚಿತ್ರರಂಗದಲ್ಲಿ ಅವಕಾಶ ಸಿಗುವುದಿಲ್ಲ ಎಂಬ ಒಂದು ಗೊಡ್ಡು ನಂಬಿಕೆ ಇದೆ. ಆದರೆ, ಇದನ್ನು ಸುಳ್ಳು ಮಾಡಿದ ಅನೇಕರಿದ್ದಾರೆ. ಅನೇಕ ನಟಿಯರು ಸಂಸಾರದಲ್ಲಿ ಬ್ಯುಸಿ ಆದ ನಂತರವೂ ಸಿನಿಮಾಗಳಲ್ಲಿ ನಟಿಸಿ ದೊಡ್ಡ ಯಶಸ್ಸು ಕಂಡಿದ್ದಾರೆ. ಕನ್ನಡದ ನಟಿ ಶ್ವೇತಾ ಶ್ರೀವಾತ್ಸವ (Shwetha Srivatsav) ಕೂಡ ಈ ಸಾಲಿನಲ್ಲಿ ನಿಲ್ಲುತ್ತಾರೆ. ಈ ಕುರಿತು ಅವರು ಒಂದು ಪುಸ್ತಕ (Book) ಬರೆಯಲು ಹೊರಟಿದ್ದಾರೆ. ಅಷ್ಟೇ ಅಲ್ಲ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ್ದಾರೆ.

ಶ್ವೇತಾ ಶ್ರೀವಾತ್ಸವ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡವರು. ನಂತರ ಅವರು ಚಿತ್ರರಂಗದಲ್ಲಿ ಬ್ಯುಸಿ ಆದರು. 2013ರಲ್ಲಿ ತೆರೆಗೆ ಬಂದ ‘ಸಿಂಪಲ್ ಆಗ್ ಒಂದ್ ಲವ್​ ಸ್ಟೋರಿ’ ಚಿತ್ರದಿಂದ ಶ್ವೇತಾ ಜನಪ್ರಿಯತೆ ಸಾಕಷ್ಟು ಹೆಚ್ಚಿತು.  2017ರಲ್ಲಿ ಶ್ವೇತಾ ಕುಟುಂಬಕ್ಕೆ ಹೊಸ ಸದಸ್ಯಯೆಯ ಆಗಮನವಾಯಿತು. ಹೀಗಾಗಿ, ಅವರು ಚಿತ್ರರಂಗದಿಂದ ಒಂದು ಬ್ರೇಕ್ ತೆಗೆದುಕೊಂಡರು.

ಇದನ್ನೂ ಓದಿ
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​
Image
ವಿಚ್ಛೇದನದ ಬಳಿಕ ಅಕ್ಕಿನೇನಿ ಕುಟುಂಬಕ್ಕೆ ಸಮಂತಾ ಹಿಂದಿರುಗಿಸಿದರು ಒಂದು ಪ್ರಮುಖ ವಸ್ತು; ಏನದು?
Image
ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ಚಿತ್ರರಂಗದಿಂದ ಸುಮಾರು 6 ವರ್ಷ ಬ್ರೇಕ್​ ತೆಗೆದುಕೊಂಡಿದ್ದ ಶ್ವೇತಾ ಅವರು ಕುಟುಂಬದ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಈ ತಿಂಗಳ ಆರಂಭದಲ್ಲಿ ತೆರೆಗೆ ಬಂದ ‘ಹೋಪ್​’ ಚಿತ್ರದ ಮೂಲಕ ಶ್ವೇತಾ ಚಿತ್ರರಂಗಕ್ಕೆ ಮರಳಿದ್ದಾರೆ. ಇನ್ನೂ ಎರಡು ಸಿನಿಮಾಗಳು ಅವರ ಕೈಯಲ್ಲಿ ಇವೆ. ಅವರು ಚಿತ್ರರಂಗಕ್ಕೆ ಬಂದಿದ್ದು ಹೇಗೆ ಎಂಬ ಕುರಿತು ಪುಸ್ತಕ ಬರೆಯಲಿದ್ದಾರೆ. ಈ ಮೂಲಕ ಅನೇಕರಿಗೆ ಸ್ಫೂರ್ತಿ ಆಗಲಿದ್ದಾರೆ.

ಈ ಬಗ್ಗೆ ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ ಶ್ವೇತಾ. ಇದರಲ್ಲಿ ತಾವು ಪುಸ್ತಕ ಬರೆಯುತ್ತಿರುವುದು ಏಕೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ‘ನಮಸ್ಕಾರ, ಒಂದು ಮುಖ್ಯವಾದ ವಿಷಯ ತಿಳಿಸುವುದಿತ್ತು. ಮದುವೆಯಾದ ನಂತರ ಸಿನಿಮಾಗಳಲ್ಲಿ ಮುಖ್ಯಭೂಮಿಕೆ ನಿರ್ವಹಿಸುವ ನನ್ನ ಕನಸನ್ನು ನನಸು ಮಾಡಿಕೊಳ್ಳುವ ಹಾದಿಯಲ್ಲಿ, ಈ ಚಿತ್ರ-ರಂಗಕ್ಕೆ ಪ್ರವೇಶ ನೀಡಿರುವ ನನ್ನ ಅಸಾಧ್ಯವಾದ ಪ್ರಯತ್ನ ದ ಕುರಿತು, ಒಂದು ಪುಸ್ತಕ ಬರೆಯುತಿದ್ದೇನೆ. ಇದರಿಂದ ಯಾರಿಗಾದರೂ ಸ್ಫೂರ್ತಿ ಸಿಗಬಹುದೇನೋ ಎಂಬುದು ಇದರ ಮುಖ್ಯ ಉದ್ದೇಶ’ ಎಂದು ಹೇಳಿದ್ದಾರೆ ಅವರು.

ಇದನ್ನೂ ಓದಿ: Shwetha Srivatsav: ಮದ್ವೆ ನಂತರ ಚಿತ್ರರಂಗಕ್ಕೆ ಬಂದು ಶ್ವೇತಾ ಶ್ರೀವಾತ್ಸವ್​ ಎದುರಿಸಿದ ಚಾಲೆಂಜ್​ ಏನು? ಇಲ್ಲಿದೆ ಓಪನ್​ ಟಾಕ್​

‘ನಿಮ್ಮಲ್ಲಿ ನನ್ನ ಕುರಿತು ಯಾವುದೇ ಪ್ರಶ್ನೆಗಳಿದ್ದರೂ, ಅದನ್ನು shwethasrivatsav04@gmail.com ಗೆ ಕಳುಹಿಸಿ. ಆಸಕ್ತಿದಾಯಕ ಪ್ರಶ್ನೆಗಳಿಗೆ ಉತ್ತರಿಸಿ, ನನ್ನ ಪುಸ್ತಕದಲ್ಲಿ ಪ್ರಕಟಿಸಲಾಗುತ್ತದೆ. ನಿಮ್ಮ ಹೆಸರು ಅನಾಮಧೇಯವಾಗಿರಿಸಬೇಕೆಂದರೆ ಖಂಡಿತ ಅದನ್ನು ನಾವು ಗೌರವಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.

Published On - 4:35 pm, Fri, 29 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್