Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾಗಳಿಗಾಗಿ ಒಟಿಟಿ, ಕೈಗಾರಿಕಾ ನೀತಿಯಡಿ ಚಿತ್ರರಂಗ; ಬಜೆಟ್​ನಲ್ಲಿ ಘೋಷಣೆ ಮಾಡಿದ ಸಿದ್ದರಾಮಯ್ಯ

ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳು ರಿಲೀಸ್ ಆಗುತ್ತಿವೆ. ಆದರೆ, ಒಟಿಟಿಯಲ್ಲಿ ಅವುಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಈ ಕಾರಣಕ್ಕೆ ಅನೇಕ ಸಿನಿಮಾಗಳು ಮಾರಾಟವಾಗದೆ ಉಳಿದಿವೆ. ಥಿಯೇಟರ್​ನಲ್ಲಿ ರಿಲೀಸ್ ಆದ ಅನೇಕ ಒಳ್ಳೆಯ ಸಿನಿಮಾಗಳು ಒಟಿಟಿಗೆ ಬರದೆ ಮೂಲೆಗುಂಪಾಗಿವೆ. ಅವುಗಳು ಜನರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಈಗ ಪರಿಹಾರ ಸಿಕ್ಕಂತೆ ಆಗಿದೆ.

ಕನ್ನಡ ಸಿನಿಮಾಗಳಿಗಾಗಿ ಒಟಿಟಿ, ಕೈಗಾರಿಕಾ ನೀತಿಯಡಿ ಚಿತ್ರರಂಗ; ಬಜೆಟ್​ನಲ್ಲಿ ಘೋಷಣೆ ಮಾಡಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 07, 2025 | 11:17 AM

ಕನ್ನಡದ ಸಿನಿಮಾಗಳನ್ನು ಒಟಿಟಿಯವರು ಖರೀದಿ ಮಾಡಲು ಮುಂದೆ ಬರುತ್ತಿಲ್ಲ ಎನ್ನುವ ಕೊರಗು ಮೊದಲಿನಿಂದಲೂ ಇದೆ. ಬಿಗ್ ಬಜೆಟ್ ಚಿತ್ರಗಳಿಗೆ ಮಾತ್ರ ಮಣೆ ಹಾಕುವ ಒಟಿಟಿ ಪ್ಲಾಟ್​ಫಾರ್ಮ್​ಗಳು, ಸಣ್ಣ ಚಿತ್ರಗಳನ್ನು ಕಡೆಗಣಿಸಿದ್ದವು. ಈ ಕಾರಣಕ್ಕೆ ಯೂಟ್ಯೂಬ್​ನಲ್ಲೇ ಸಿನಿಮಾ ಬಿಡುಗಡೆ ಮಾಡುವ ಕೆಲಸ ಆಗುತ್ತಿತ್ತು. ಬಜೆಟ್​​ನಲ್ಲಿ ಇದಕ್ಕೆ ಪರಿಹಾರ ಕಂಡು ಹಿಡಿಯುವ ಕೆಲಸ ಸರ್ಕಾರದಿಂದ ಆಗಿದೆ. ಕನ್ನಡ ಸಿನಿಮಾಗಳಿಗಾಗಿ ವಿಶೇಷ ಒಟಿಟಿ ತರೋ ಬಗ್ಗೆ ಸರ್ಕಾರ ಘೋಷಣೆ ಮಾಡಿದೆ.

ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳು ರಿಲೀಸ್ ಆಗುತ್ತಿವೆ. ಆದರೆ, ಒಟಿಟಿಯಲ್ಲಿ ಅವುಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಈ ಕಾರಣಕ್ಕೆ ಅನೇಕ ಸಿನಿಮಾಗಳು ಮಾರಾಟವಾಗದೆ ಉಳಿದಿವೆ. ಥಿಯೇಟರ್​ನಲ್ಲಿ ರಿಲೀಸ್ ಆದ ಅನೇಕ ಒಳ್ಳೆಯ ಸಿನಿಮಾಗಳು ಒಟಿಟಿಗೆ ಬರದೆ ಮೂಲೆಗುಂಪಾಗಿವೆ. ಅವುಗಳು ಜನರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಈಗ ಪರಿಹಾರ ಸಿಕ್ಕಂತೆ ಆಗಿದೆ.

ಇದನ್ನೂ ಓದಿ: ಒಳ್ಳೆಯ ಸಿನಿಮಾ ಸಿಗುತ್ತಿಲ್ಲ, ಒಟಿಟಿ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ ರಮ್ಯಾ

ಇದನ್ನೂ ಓದಿ
Image
ಮಲ್ಟಿಪ್ಲೆಕ್ಸ್​ಗಳ ನಟ್ಟು-ಬೋಲ್ಟು ಟೈಟ್ ಮಾಡಿದ ರಾಜ್ಯ ಸರ್ಕಾರ
Image
ಮಲ್ಟಿಪ್ಲೆಕ್ಸ್-ಚಿತ್ರಮಂದಿರಕ್ಕೆ ಏಕ ರೂಪದ ದರ ನೀತಿ? ತಗ್ಗಲಿದೆ ಬೆಲೆ

ಕಳೆದ ವರ್ಷ ಕೇರಳ ಸರ್ಕಾರವು ಹೊಸ ಒಟಿಟಿಯನ್ನು ಆರಂಭಿಸಿತ್ತು. ಇದು ಸರ್ಕಾರಿ ಸ್ವಾಮ್ಯದ ಮೊದಲ ಒಟಿಟಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಯಿತು. ಸದ್ಯ ನಮ್ಮ ರಾಜ್ಯ ಸರ್ಕಾರ ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧಾರ ಮಾಡಿದೆ. ಇದರಿಂದ ಕನ್ನಡ ಚಿತ್ರರಂಗ ಬೆಳೆಯಲು ಮತ್ತಷ್ಟು ಸಹಕಾರಿ ಆಗಲಿದೆ. ಖಾಸಗಿ ಒಟಿಟಿ ಸಂಸ್ಥೆಗಳ ಮೇಲೆ ಅವಲಂಬಿತ ಆಗುವುದು ತಪ್ಪಲಿದೆ. ಮುಂದಿನ ದಿನಗಳಲ್ಲಿ ಇದರ ಕಾರ್ಯವೈಖರಿ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.

ಚಿತ್ರರಂಗ ಇನ್ನು ಉದ್ಯಮ

ಸಿನಿಮಾ ಕ್ಷೇತ್ರವನ್ನ ಕೈಗಾರಿಕಾ ನೀತಿಯಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಸಿನಿಮಾ ರಂಗವನ್ನು ಉದ್ಯಮ ಎಂದು ಪರಿಗಣಿಸಿ ಸರ್ಕಾರ ಘೋಷಣೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!