AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ್​ಗೆ ಪದ್ಮಶ್ರೀ ಪ್ರಶಸ್ತಿ ನೀಡಿ’; ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಪುನೀತ್​ಗೆ ಪದ್ಮಶ್ರೀ ಪ್ರಶಸ್ತಿ ನೀಡಿ’; ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
ಸಿದ್ದರಾಮಯ್ಯ-ಪುನೀತ್
TV9 Web
| Edited By: |

Updated on: Nov 01, 2021 | 5:42 PM

Share

ಅದ್ಭುತ ನಟನೆ ಮೂಲಕ ಗಮನ ಸೆಳೆದ ಪುನೀತ್​ ರಾಜ್​ಕುಮಾರ್​ ಅವರಿಗೆ ಸಾಕಷ್ಟು ಪ್ರಶಸ್ತಿಗಳು ಒಲಿದಿವೆ. ಡ್ಯಾನ್ಸ್​ನಲ್ಲಿ ಅವರಿಗೆ ಸರಿಸಾಟಿಯಾಗಿ ನಿಲ್ಲುವ ಮತ್ತೊಬ್ಬರು ಸಿಗೋಕೆ ಸಾಧ್ಯವಿಲ್ಲ. ಪುನೀತ್​ ಅವರದ್ದು ನಟನೆಯಲ್ಲೂ ಎತ್ತಿದ ಕೈ. ಅವರಿಗೆ ಶ್ರೇಷ್ಠ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂಬುದು ಅನೇಕರ ಒತ್ತಾಯವಾಗಿತ್ತು. ಅವರ ಮರಣಾ ನಂತರ ಈ ಕೂಗು ಮತ್ತಷ್ಟು ಹೆಚ್ಚಿದೆ. ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಈ ಬಗ್ಗೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ‘ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ಪುನೀತ್​ ನಿಧನದ ನಂತರ ಸಿದ್ದರಾಮಯ್ಯ ಸಾಕಷ್ಟು ಟ್ವೀಟ್​​ಗಳನ್ನು ಮಾಡಿದ್ದರು. ‘ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಿಬಾರದ ನಷ್ಟ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೊಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪುನೀತ್​ ಸರಳತೆಗೆ ಸಾಕ್ಷಿ ಈ ಫೋಟೋಗಳು; ಕುರಿಗಾಹಿಗಳ ಜತೆ ಮಜ್ಜಿಗೆ ಅನ್ನ ಊಟ ಮಾಡಿದ್ದ ಅಪ್ಪು

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು