AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರೆಮೇಲೆ ಬರಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್; ವಿಜಯ್ ಸೇತುಪತಿ ಕಾಲ್​ಶೀಟ್ ಕೇಳಿದ ತಂಡ

ಇತ್ತೀಚೆಗೆ ಚಿತ್ರರಂಗದಲ್ಲಿ ಬಯೋಪಿಕ್ ಟ್ರೆಂಡ್ ಹೆಚ್ಚಾಗಿದೆ. ಈಗ ಸಿದ್ದರಾಮಯ್ಯ ಅವರ ಬಗ್ಗೆ ಬಯೋಪಿಕ್ ಸಿದ್ಧಗೊಳ್ಳುವ ವಿಚಾರ ಅಧಿಕೃತವಾಗಿದೆ.

ತೆರೆಮೇಲೆ ಬರಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್; ವಿಜಯ್ ಸೇತುಪತಿ ಕಾಲ್​ಶೀಟ್ ಕೇಳಿದ ತಂಡ
ಸಿದ್ದರಾಮಯ್ಯ-ವಿಜಯ್ ಸೇತುಪತಿ
TV9 Web
| Edited By: |

Updated on:Nov 29, 2022 | 1:52 PM

Share

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಅವರು ತಮ್ಮದೇ ಚಾರ್ಮ್​ ಹೊಂದಿದ್ದಾರೆ. ರಾಜಕೀಯದಲ್ಲಿ ಅವರ ಹೆಸರು ಸದಾ ಮುಂಚೂಣಿಯಲ್ಲಿರುತ್ತದೆ. ಸದ್ಯ ವಿರೋಧ ಪಕ್ಷದ ನಾಯಕನಾಗಿರುವ ಅವರು, ಈ ಮೊದಲು ಸಿಎಂ ಆಗಿ ರಾಜ್ಯವನ್ನು ಮುನ್ನಡೆಸಿದ್ದರು. ಅವರು ತಮ್ಮ ಚಿಂತನೆಗಳ ಮೂಲಕವೂ ಆಗಾಗ ಸುದ್ದಿ ಆಗುತ್ತಾರೆ. ಈಗ ಸಿದ್ದರಾಮಯ್ಯ ಬಯೋಪಿಕ್ (Siddaramaiah Boipic) ತೆರೆಮೇಲೆ ತರಲು ಸಿದ್ಧತೆ ನಡೆದಿದೆ. ಗಾಂಧಿ ನಗರದ ಅಂಗಳದಲ್ಲಿ ಹರಿದು ಬಂದ ಈ ಸುದ್ದಿ ಕೇಳಿ ಸಿದ್ದರಾಮಯ್ಯ ಅಭಿಮಾನಿಗಳು ಖುಷಿಯಾಗಿದ್ದಾರೆ.

ಇತ್ತೀಚೆಗೆ ಚಿತ್ರರಂಗದಲ್ಲಿ ಬಯೋಪಿಕ್ ಟ್ರೆಂಡ್ ಹೆಚ್ಚಾಗಿದೆ. ಇದನ್ನು ಮಾಡಿ ಅನೇಕರು ಯಶಸ್ಸು ಕಂಡಿದ್ದಾರೆ. ಚಿತ್ರರಂಗ, ರಾಜಕೀಯ, ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಕುರಿತು ಬಯೋಪಿಕ್​ಗಳು ಸಿದ್ಧಗೊಂಡಿವೆ. ಈಗ ಸಿದ್ದರಾಮಯ್ಯ ಅವರ ಬಗ್ಗೆ ಬಯೋಪಿಕ್ ಸಿದ್ಧಗೊಳ್ಳುವ ವಿಚಾರ ಅಧಿಕೃತವಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಹಯಾತ್ ಪೀರ್ ಸಾಬ್ ಅವರು ಎಂ.ಎಸ್​. ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನು ತೆರೆಮೇಲೆ ತರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವಿಚಾರ ಸದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಪಂಕಜ್ ತ್ರಿಪಾಟಿ; 2023ಕ್ಕೆ ರಿಲೀಸ್ ಆಗಲಿದೆ ಬಯೋಪಿಕ್

ಇದನ್ನೂ ಓದಿ
Image
ಶಿವಮೊಗ್ಗದಲ್ಲಿ ಸಿದ್ದರಾಮಯ್ಯನವರಿಗೆ ಹೆಲಿಕಾಪ್ಟರ್ ಹತ್ತಿಸಿದ ಕಾಂಗ್ರೆಸ್ ಕಾರ್ಯಕರ್ತರು!
Image
ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಪಂಕಜ್ ತ್ರಿಪಾಟಿ; 2023ಕ್ಕೆ ರಿಲೀಸ್ ಆಗಲಿದೆ ಬಯೋಪಿಕ್
Image
Vijay Sethupathi: ‘ಶುಗರ್​ಲೆಸ್’​ ಚಿತ್ರಕ್ಕೆ ವಿಜಯ್​ ಸೇತುಪತಿ ಅಭಿನಂದನೆ; ಪರಭಾಷೆ ಮಂದಿಯ ಗಮನ ಸೆಳೆದ ಕನ್ನಡ ಸಿನಿಮಾ

ಸಿದ್ದರಾಮಯ್ಯ ಜತೆ ನಡೆದಿದೆ ಮಾತುಕತೆ

ಬಯೋಪಿಕ್ ಮಾಡುವಾಗ ಮಾಹಿತಿಗಳು ಸ್ಪಷ್ಟವಾಗಿರಬೇಕು. ಹೆಚ್ಚು ಮಸಾಲೆ ಸೇರಿಸುವ ಪ್ರಯತ್ನ ನಡೆದರೆ ವಿವಾದ ಸೃಷ್ಟಿ ಆಗುತ್ತದೆ. ಈ ಕಾರಣಕ್ಕೆ ನಿರ್ಮಾಪಕರು ಸಿದ್ದರಾಮಯ್ಯ ಅವರಿಂದ ಒಪ್ಪಿಗೆ ಪಡೆದು ಅವರಿಂದಲೇ ಮಾಹಿತಿ ಪಡೆಯಲು ಮುಂದಾಗಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಮೊದಲ ಹಂತದ ಮಾತುಕತೆ ನಡೆದಿದೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ಜಮೀರ್ ಆಹ್ಮಮದ್ ನೇತೃತ್ವದಲ್ಲಿ ಈ ಮಾತುಕತೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಸಿದ್ದರಾಮಯ್ಯನವರಿಗೆ ಹೆಲಿಕಾಪ್ಟರ್ ಹತ್ತಿಸಿದ ಕಾಂಗ್ರೆಸ್ ಕಾರ್ಯಕರ್ತರು!

50 ಕೋಟಿ ರೂ ಬಜೆಟ್?

ಈ ಚಿತ್ರಕ್ಕೆ 50 ಕೋಟಿ ರೂಪಾಯಿ ಸುರಿಯಲು ನಿರ್ಮಾಪಕರು ನಿರ್ಧರಿಸಿದ್ದಾರೆ. ವಿಶೇಷ ಎಂದರೆ ಈ ಚಿತ್ರಕ್ಕೆ ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಅವ ಕಾಲ್​ಶೀಟ್ ಕೇಳಲಾಗಿದೆ. ಅವರು ಒಪ್ಪಿದರೆ ಸಿನಿಮಾದ ತೂಕ ಮತ್ತಷ್ಟು ಹೆಚ್ಚಲಿದೆ. ಸತ್ಯರತ್ನಂ ಅವರ ನಿರ್ದೇಶನದಲ್ಲಿ ಸಿನಿಮಾ ಮೂಡಿಬರಲಿದೆ.

Published On - 1:46 pm, Tue, 29 November 22

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ