AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಬಯೋಪಿಕ್ ಸಿದ್ಧತೆ ಎಲ್ಲಿಯವರೆಗೆ ಬಂತು? ಹೊರಬಿತ್ತು ಹೊಸ ವಿಚಾರ

Siddaramaiah Biopic: ಸಿದ್ದರಾಮಯ್ಯ ಬಯೋಪಿಕ್​ಗೆ ‘ಲೀಡರ್ ರಾಮಯ್ಯ’ ಎನ್ನುವ ಶೀರ್ಷಿಕೆ ಇಡಲಾಗಿದೆ ಎಂದು ತಿಳಿದುಬಂದಿದೆ. ಸತ್ಯರತ್ನಂ ಎಂಬುವವರು ಇದನ್ನು ನಿರ್ದೇಶನ ಮಾಡುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಯೋಪಿಕ್ ಸಿದ್ಧತೆ ಎಲ್ಲಿಯವರೆಗೆ ಬಂತು? ಹೊರಬಿತ್ತು ಹೊಸ ವಿಚಾರ
ಸಿದ್ದರಾಮಯ್ಯ
ರಾಜೇಶ್ ದುಗ್ಗುಮನೆ
|

Updated on: Aug 02, 2023 | 7:48 AM

Share

ಸಿಎಂ ಸಿದ್ದರಾಮಯ್ಯ (Siddaramaiah) ಅವರ ಕುರಿತು ಬಯೋಪಿಕ್ ಸಿದ್ಧಗೊಳ್ಳಲಿದೆ ಎಂಬ ವಿಚಾರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಘೋಷಣೆ ಆಗಿತ್ತು. ಆ ಬಳಿಕ ಈ ವಿಚಾರ ಸೈಲೆಂಟ್ ಆಗಿತ್ತು. ಹಾಗಂತ ಸಿನಿಮಾ ಕೆಲಸಗಳು ನಿಂತಿಲ್ಲ. ಈ ಚಿತ್ರಕ್ಕೆ ಭರದ ಸಿದ್ಧತೆ ನಡೆದಿದೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರತಂಡದಿಂದ ಈ ಬಗ್ಗೆ ಅಪ್​ಡೇಟ್​ ಸಿಗುವ ಸಾಧ್ಯತೆ ಇದೆ. ಈ ವಿಚಾರ ಕೇಳಿ ಸಿದ್ದರಾಮಯ್ಯ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಮತ್ತೊಂದು ವಿಶೇಷ ಎಂದರೆ ಈ ಚಿತ್ರ ಎರಡು ಭಾಗದಲ್ಲಿ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ಬಯೋಪಿಕ್​ಗೆ ‘ಲೀಡರ್ ರಾಮಯ್ಯ’ ಎನ್ನುವ ಶೀರ್ಷಿಕೆ ಇಡಲಾಗಿದೆ ಎಂದು ತಿಳಿದುಬಂದಿದೆ. ಸತ್ಯರತ್ನಂ ಎಂಬುವವರು ಇದನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಖ್ಯಾತಿ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಹೀಗಾಗಿ, ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಪಡಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಿನಿಮಾ ತಂಡದಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಸಿದ್ದರಾಮಯ್ಯ ಅವರ ಪಾತ್ರದಲ್ಲಿ ತಮಿಳು ನಟ ವಿಜಯ್ ಸೇತುಪತಿ ನಟಿಸುವ ಸಾಧ್ಯತೆ ಇದೆ ಎಂದು ಈ ಮೊದಲು ಹೇಳಲಾಗಿತ್ತು. ಈಗ ತಂಡ ವಿಜಯ್ ಸೇತುಪತಿ ಅವರನ್ನು ಸಂಪರ್ಕಿಸಿದೆ ಎಂದು ತಿಳಿದು ಬಂದಿದೆ. ಅವರ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗೋದು ಬಾಕಿ ಉಳಿದಿದೆಯಂತೆ.

ಇದನ್ನೂ ಓದಿ: ರಾಜ್ಯದಲ್ಲಿ ಆನ್‌ಲೈನ್ ಗೇಮ್ ನಿಷೇಧಕ್ಕೆ ಚಿಂತನೆ; ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು

ಇತ್ತೀಚೆಗೆ ಚಾಪ್ಟರ್ 1 ಹಾಗೂ ಚಾಪ್ಟರ್​ 2 ಮೂಲಕ ಕಥೆ ಹೇಳುವ ಟ್ರೆಂಡ್ ಜೋರಾಗಿದೆ. ಇದನ್ನು ‘ಲೀಡರ್ ರಾಮಯ್ಯ’ ತಂಡ ಕೂಡ ಅನುಸರಿಸಲಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಏಕಾಏಕಿ ನಾಯಕರಾದವರಲ್ಲ. ಹೀಗಾಗಿ, ಅವರ ಬಾಲ್ಯ, ಕಾಲೇಜು ದಿನಗಳು, ಲಾಯರ್ ಆಗಿದ್ದ ದಿನಗಳು, ರಾಜಕೀಯಕ್ಕೆ ಬರಲು ಅವರಿಗೆ ಸ್ಫೂರ್ತಿ ನೀಡಿದ ವಿಚಾರಗಳು ಸಿನಿಮಾದಲ್ಲಿ ಇರಲಿವೆ. ಬಾಲ್ಯ, ಹರೆಯದ ದಿನಗಳ ಪಾತ್ರವನ್ನು ಬೇರೆ ಕಲಾವಿದರು ನಿರ್ವಹಿಸಲಿದ್ದಾರೆ. ಸಿದ್ದರಾಮಯ್ಯ ಲಾಯರ್ ಆದ ಬಳಿಕ ವಿಜಯ್ ಸೇತುಪತಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು