AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ

‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ
ಸೈಮಾ
TV9 Web
| Edited By: |

Updated on:Sep 11, 2022 | 7:02 AM

Share

ಸೈಮಾ-2022 (SIIMA) ಪ್ರಶಸ್ತಿ ಕಾರ್ಯಕ್ರಮ ಇಂದು (ಸೆಪ್ಟೆಂಬರ್ 10) ಬೆಂಗಳೂರಿನಲ್ಲಿ ನಡೆದಿದೆ. ವಿವಿಧ ವಿಭಾಗದಲ್ಲಿ ಪ್ರಶಸ್ತಿ ನೀಡಲಾಗಿದೆ. 2021ರಲ್ಲಿ ತೆರೆಗೆ ಬಂದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ನಾನಾ ವಿಭಾಗಗಳಲ್ಲಿ ನಾಮಿನೇಷನ್ ಮಾಡಲಾಗಿತ್ತು. ಆ ಪೈಕಿ ಹಲವು ಸಿನಿಮಾಗಳು ಪ್ರಶಸ್ತಿ ಬಾಚಿಕೊಂಡಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಸೌತ್ ಇಂಡಿಯನ್ ಇಂಟರ್​ನ್ಯಾಷನಲ್​ ಮೂವಿ ಅವಾರ್ಡ್ಸ್​’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ. ಪ್ರತಿ ಭಾಷೆಯಲ್ಲಿ ಸುಮಾರು 19 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.

2021ರಲ್ಲಿ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್​’ ಸಿನಿಮಾ ತೆರೆಗೆ ಬಂತು. ಸುಧಾಕರ್ ರಾಜ್ ಅವರು ಈ ಚಿತ್ರದ ಸಿನಿಮಾಟೋಗ್ರಫಿಗೆ ‘ಬೆಸ್ಟ್ ಸಿನಿಮಾಟೋಗ್ರಫಿ’ (ಕನ್ನಡ) ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ (ಕನ್ನಡ) ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಅತ್ಯುತ್ತಮ ನಟ (ಕನ್ನಡ): ಪುನೀತ್ ರಾಜ್​ಕುಮಾರ್ (ಯುವರತ್ನ)

ಅತ್ಯುತ್ತಮ ನಟಿ (ಕನ್ನಡ): ಆಶಿಕಾ ರಂಗನಾಥ್ (ಮದಗಜ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ (ಕನ್ನಡ): ಅಮೃತಾ ಅಯ್ಯಂಗಾರ್ (ಬಡವ ರಾಸ್ಕಲ್)

ಅತ್ಯುತ್ತಮ ಹಾಸ್ಯ ನಟ- ಚಿಕ್ಕಣ್ಣ (ಪೊಗರು)

ಅತ್ಯುತ್ತಮ ನಿರ್ದೇಶನ- ತರುಣ್ ಸುಧೀರ್ (ರಾಬರ್ಟ್​)

ಅತ್ಯುತ್ತಮ ಪೋಷಕ ನಟಿ: ಆರೋಹಿ ನಾರಾಯಣ್ (ದೃಶ್ಯ 2)

ಅತ್ಯುತ್ತಮ ಪೋಷಕ ನಟ: ಪ್ರಮೋದ್​ (ರತ್ನನ್​ ಪ್ರಪಂಚ)

ಅತ್ಯುತ್ತಮ ಹಿನ್ನೆಲೆ ಗಾಯಕಿ (ಕನ್ನಡ)- ಚೈತ್ರಾ ಆಚಾರ್ (‘ಗರುಡ ಗಮನ ವೃಷಭ ವಾಹನ’ ಚಿತ್ರದ ‘ಸೋಜುಗಾದ ಸೂಜುಮಲ್ಲಿಗೆ ಹಾಡು’)

ಅತ್ಯುತ್ತಮ ಸಂಗೀತ ನಿರ್ದೇಶಕ: ಅರ್ಜುನ್ ಜನ್ಯ- ‘ರಾಬರ್ಟ್​’

Published On - 10:03 pm, Sat, 10 September 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ