AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ

‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ
ಸೈಮಾ
TV9 Web
| Edited By: |

Updated on:Sep 11, 2022 | 7:02 AM

Share

ಸೈಮಾ-2022 (SIIMA) ಪ್ರಶಸ್ತಿ ಕಾರ್ಯಕ್ರಮ ಇಂದು (ಸೆಪ್ಟೆಂಬರ್ 10) ಬೆಂಗಳೂರಿನಲ್ಲಿ ನಡೆದಿದೆ. ವಿವಿಧ ವಿಭಾಗದಲ್ಲಿ ಪ್ರಶಸ್ತಿ ನೀಡಲಾಗಿದೆ. 2021ರಲ್ಲಿ ತೆರೆಗೆ ಬಂದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ನಾನಾ ವಿಭಾಗಗಳಲ್ಲಿ ನಾಮಿನೇಷನ್ ಮಾಡಲಾಗಿತ್ತು. ಆ ಪೈಕಿ ಹಲವು ಸಿನಿಮಾಗಳು ಪ್ರಶಸ್ತಿ ಬಾಚಿಕೊಂಡಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಸೌತ್ ಇಂಡಿಯನ್ ಇಂಟರ್​ನ್ಯಾಷನಲ್​ ಮೂವಿ ಅವಾರ್ಡ್ಸ್​’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ. ಪ್ರತಿ ಭಾಷೆಯಲ್ಲಿ ಸುಮಾರು 19 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.

2021ರಲ್ಲಿ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್​’ ಸಿನಿಮಾ ತೆರೆಗೆ ಬಂತು. ಸುಧಾಕರ್ ರಾಜ್ ಅವರು ಈ ಚಿತ್ರದ ಸಿನಿಮಾಟೋಗ್ರಫಿಗೆ ‘ಬೆಸ್ಟ್ ಸಿನಿಮಾಟೋಗ್ರಫಿ’ (ಕನ್ನಡ) ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ (ಕನ್ನಡ) ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಅತ್ಯುತ್ತಮ ನಟ (ಕನ್ನಡ): ಪುನೀತ್ ರಾಜ್​ಕುಮಾರ್ (ಯುವರತ್ನ)

ಅತ್ಯುತ್ತಮ ನಟಿ (ಕನ್ನಡ): ಆಶಿಕಾ ರಂಗನಾಥ್ (ಮದಗಜ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ (ಕನ್ನಡ): ಅಮೃತಾ ಅಯ್ಯಂಗಾರ್ (ಬಡವ ರಾಸ್ಕಲ್)

ಅತ್ಯುತ್ತಮ ಹಾಸ್ಯ ನಟ- ಚಿಕ್ಕಣ್ಣ (ಪೊಗರು)

ಅತ್ಯುತ್ತಮ ನಿರ್ದೇಶನ- ತರುಣ್ ಸುಧೀರ್ (ರಾಬರ್ಟ್​)

ಅತ್ಯುತ್ತಮ ಪೋಷಕ ನಟಿ: ಆರೋಹಿ ನಾರಾಯಣ್ (ದೃಶ್ಯ 2)

ಅತ್ಯುತ್ತಮ ಪೋಷಕ ನಟ: ಪ್ರಮೋದ್​ (ರತ್ನನ್​ ಪ್ರಪಂಚ)

ಅತ್ಯುತ್ತಮ ಹಿನ್ನೆಲೆ ಗಾಯಕಿ (ಕನ್ನಡ)- ಚೈತ್ರಾ ಆಚಾರ್ (‘ಗರುಡ ಗಮನ ವೃಷಭ ವಾಹನ’ ಚಿತ್ರದ ‘ಸೋಜುಗಾದ ಸೂಜುಮಲ್ಲಿಗೆ ಹಾಡು’)

ಅತ್ಯುತ್ತಮ ಸಂಗೀತ ನಿರ್ದೇಶಕ: ಅರ್ಜುನ್ ಜನ್ಯ- ‘ರಾಬರ್ಟ್​’

Published On - 10:03 pm, Sat, 10 September 22

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ