AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ

‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ
ಸೈಮಾ
TV9 Web
| Edited By: |

Updated on:Sep 11, 2022 | 7:02 AM

Share

ಸೈಮಾ-2022 (SIIMA) ಪ್ರಶಸ್ತಿ ಕಾರ್ಯಕ್ರಮ ಇಂದು (ಸೆಪ್ಟೆಂಬರ್ 10) ಬೆಂಗಳೂರಿನಲ್ಲಿ ನಡೆದಿದೆ. ವಿವಿಧ ವಿಭಾಗದಲ್ಲಿ ಪ್ರಶಸ್ತಿ ನೀಡಲಾಗಿದೆ. 2021ರಲ್ಲಿ ತೆರೆಗೆ ಬಂದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ನಾನಾ ವಿಭಾಗಗಳಲ್ಲಿ ನಾಮಿನೇಷನ್ ಮಾಡಲಾಗಿತ್ತು. ಆ ಪೈಕಿ ಹಲವು ಸಿನಿಮಾಗಳು ಪ್ರಶಸ್ತಿ ಬಾಚಿಕೊಂಡಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಸೌತ್ ಇಂಡಿಯನ್ ಇಂಟರ್​ನ್ಯಾಷನಲ್​ ಮೂವಿ ಅವಾರ್ಡ್ಸ್​’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ. ಪ್ರತಿ ಭಾಷೆಯಲ್ಲಿ ಸುಮಾರು 19 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.

2021ರಲ್ಲಿ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್​’ ಸಿನಿಮಾ ತೆರೆಗೆ ಬಂತು. ಸುಧಾಕರ್ ರಾಜ್ ಅವರು ಈ ಚಿತ್ರದ ಸಿನಿಮಾಟೋಗ್ರಫಿಗೆ ‘ಬೆಸ್ಟ್ ಸಿನಿಮಾಟೋಗ್ರಫಿ’ (ಕನ್ನಡ) ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ (ಕನ್ನಡ) ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಅತ್ಯುತ್ತಮ ನಟ (ಕನ್ನಡ): ಪುನೀತ್ ರಾಜ್​ಕುಮಾರ್ (ಯುವರತ್ನ)

ಅತ್ಯುತ್ತಮ ನಟಿ (ಕನ್ನಡ): ಆಶಿಕಾ ರಂಗನಾಥ್ (ಮದಗಜ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ (ಕನ್ನಡ): ಅಮೃತಾ ಅಯ್ಯಂಗಾರ್ (ಬಡವ ರಾಸ್ಕಲ್)

ಅತ್ಯುತ್ತಮ ಹಾಸ್ಯ ನಟ- ಚಿಕ್ಕಣ್ಣ (ಪೊಗರು)

ಅತ್ಯುತ್ತಮ ನಿರ್ದೇಶನ- ತರುಣ್ ಸುಧೀರ್ (ರಾಬರ್ಟ್​)

ಅತ್ಯುತ್ತಮ ಪೋಷಕ ನಟಿ: ಆರೋಹಿ ನಾರಾಯಣ್ (ದೃಶ್ಯ 2)

ಅತ್ಯುತ್ತಮ ಪೋಷಕ ನಟ: ಪ್ರಮೋದ್​ (ರತ್ನನ್​ ಪ್ರಪಂಚ)

ಅತ್ಯುತ್ತಮ ಹಿನ್ನೆಲೆ ಗಾಯಕಿ (ಕನ್ನಡ)- ಚೈತ್ರಾ ಆಚಾರ್ (‘ಗರುಡ ಗಮನ ವೃಷಭ ವಾಹನ’ ಚಿತ್ರದ ‘ಸೋಜುಗಾದ ಸೂಜುಮಲ್ಲಿಗೆ ಹಾಡು’)

ಅತ್ಯುತ್ತಮ ಸಂಗೀತ ನಿರ್ದೇಶಕ: ಅರ್ಜುನ್ ಜನ್ಯ- ‘ರಾಬರ್ಟ್​’

Published On - 10:03 pm, Sat, 10 September 22

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್