ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ

‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ
ಸೈಮಾ
Follow us
| Updated By: ರಾಜೇಶ್ ದುಗ್ಗುಮನೆ

Updated on:Sep 11, 2022 | 7:02 AM

ಸೈಮಾ-2022 (SIIMA) ಪ್ರಶಸ್ತಿ ಕಾರ್ಯಕ್ರಮ ಇಂದು (ಸೆಪ್ಟೆಂಬರ್ 10) ಬೆಂಗಳೂರಿನಲ್ಲಿ ನಡೆದಿದೆ. ವಿವಿಧ ವಿಭಾಗದಲ್ಲಿ ಪ್ರಶಸ್ತಿ ನೀಡಲಾಗಿದೆ. 2021ರಲ್ಲಿ ತೆರೆಗೆ ಬಂದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ನಾನಾ ವಿಭಾಗಗಳಲ್ಲಿ ನಾಮಿನೇಷನ್ ಮಾಡಲಾಗಿತ್ತು. ಆ ಪೈಕಿ ಹಲವು ಸಿನಿಮಾಗಳು ಪ್ರಶಸ್ತಿ ಬಾಚಿಕೊಂಡಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಸೌತ್ ಇಂಡಿಯನ್ ಇಂಟರ್​ನ್ಯಾಷನಲ್​ ಮೂವಿ ಅವಾರ್ಡ್ಸ್​’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ. ಪ್ರತಿ ಭಾಷೆಯಲ್ಲಿ ಸುಮಾರು 19 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.

2021ರಲ್ಲಿ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್​’ ಸಿನಿಮಾ ತೆರೆಗೆ ಬಂತು. ಸುಧಾಕರ್ ರಾಜ್ ಅವರು ಈ ಚಿತ್ರದ ಸಿನಿಮಾಟೋಗ್ರಫಿಗೆ ‘ಬೆಸ್ಟ್ ಸಿನಿಮಾಟೋಗ್ರಫಿ’ (ಕನ್ನಡ) ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ (ಕನ್ನಡ) ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಅತ್ಯುತ್ತಮ ನಟ (ಕನ್ನಡ): ಪುನೀತ್ ರಾಜ್​ಕುಮಾರ್ (ಯುವರತ್ನ)

ಅತ್ಯುತ್ತಮ ನಟಿ (ಕನ್ನಡ): ಆಶಿಕಾ ರಂಗನಾಥ್ (ಮದಗಜ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ (ಕನ್ನಡ): ಅಮೃತಾ ಅಯ್ಯಂಗಾರ್ (ಬಡವ ರಾಸ್ಕಲ್)

ಅತ್ಯುತ್ತಮ ಹಾಸ್ಯ ನಟ- ಚಿಕ್ಕಣ್ಣ (ಪೊಗರು)

ಅತ್ಯುತ್ತಮ ನಿರ್ದೇಶನ- ತರುಣ್ ಸುಧೀರ್ (ರಾಬರ್ಟ್​)

ಅತ್ಯುತ್ತಮ ಪೋಷಕ ನಟಿ: ಆರೋಹಿ ನಾರಾಯಣ್ (ದೃಶ್ಯ 2)

ಅತ್ಯುತ್ತಮ ಪೋಷಕ ನಟ: ಪ್ರಮೋದ್​ (ರತ್ನನ್​ ಪ್ರಪಂಚ)

ಅತ್ಯುತ್ತಮ ಹಿನ್ನೆಲೆ ಗಾಯಕಿ (ಕನ್ನಡ)- ಚೈತ್ರಾ ಆಚಾರ್ (‘ಗರುಡ ಗಮನ ವೃಷಭ ವಾಹನ’ ಚಿತ್ರದ ‘ಸೋಜುಗಾದ ಸೂಜುಮಲ್ಲಿಗೆ ಹಾಡು’)

ಅತ್ಯುತ್ತಮ ಸಂಗೀತ ನಿರ್ದೇಶಕ: ಅರ್ಜುನ್ ಜನ್ಯ- ‘ರಾಬರ್ಟ್​’

Published On - 10:03 pm, Sat, 10 September 22

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?