ಬೆಂಗಳೂರಲ್ಲಿ ಸೈಮಾ ಅವಾರ್ಡ್ಸ್​​ಗೆ ಕ್ಷಣಗಣನೆ​: ಯಶ್, ರಣವೀರ್, ಅಲ್ಲು ಅರ್ಜುನ್, ವಿಜಯ್, ಕಮಲ್ ಅತಿಥಿಗಳು

‘ಸೌತ್ ಇಂಡಿಯನ್ ಇಂಟರ್​ನ್ಯಾಷನಲ್​ ಮೂವಿ ಅವಾರ್ಡ್ಸ್​’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ.

ಬೆಂಗಳೂರಲ್ಲಿ ಸೈಮಾ ಅವಾರ್ಡ್ಸ್​​ಗೆ ಕ್ಷಣಗಣನೆ​: ಯಶ್, ರಣವೀರ್, ಅಲ್ಲು ಅರ್ಜುನ್, ವಿಜಯ್, ಕಮಲ್ ಅತಿಥಿಗಳು
ಸೈಮಾ ಅತಿಥಿಗಳು
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 10, 2022 | 5:23 PM

2022ನೇ ಸಾಲಿನ ಪ್ರತಿಷ್ಠಿತ ಸೈಮಾ ಅವಾರ್ಡ್ಸ್ (SIIMA Awards)​ ಕಾರ್ಯಕ್ರಮ ಈ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇಂದು (ಸೆಪ್ಟೆಂಬರ್ 10) ಹಾಗೂ ನಾಳೆ (ಸೆಪ್ಟೆಂಬರ್ 11) ಬೆಂಗಳೂರಿನ ಪ್ಯಾಲೇಸ್ ​ಗ್ರೌಂಡ್​ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭ ಆಗಿದ್ದು, ಯಶ್ ಸೇರಿ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಕಳೆದ ವರ್ಷ ನಿಧನ ಹೊಂದಿದ ಪುನೀತ್​ ರಾಜ್​ಕುಮಾರ್ (Puneeth Rajkumar) ಅವರಿಗೆ ಇಂದಿನ ಕಾರ್ಯಕ್ರಮದಲ್ಲಿ ವಿಶೇಷ ಗೌರವ ಸಲ್ಲಿಕೆ ಮಾಡಲಾಗುತ್ತಿದೆ.

‘ಸೌತ್ ಇಂಡಿಯನ್ ಇಂಟರ್​ನ್ಯಾಷನಲ್​ ಮೂವಿ ಅವಾರ್ಡ್ಸ್​’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳ ಸಿನಿಮಾಗಳು ಸೈಮಾ ಅಡಿಯಲ್ಲಿ ಬರುತ್ತವೆ. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ನಟ-ನಟಿ ಸೇರಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿ ಭಾಷೆಯಲ್ಲಿ ಸುಮಾರು 19 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಈಗಾಗಲೇ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ವಿನ್ನರ್ ಯಾರು ಎಂಬುದು ಇಂದು ಘೋಷಣೆ ಆಗಲಿದೆ.

ಇದನ್ನೂ ಓದಿ
Image
ದೀಪಿಕಾರನ್ನು ಕಾಪಿ ಮಾಡಿ ಸಿಕ್ಕಿ ಬಿದ್ರಾ ರಶ್ಮಿಕಾ ಮಂದಣ್ಣ? ಸೈಮಾದಲ್ಲಿ ಕಣ್ಣು ಕುಕ್ಕಿದ ಗೌನ್​
Image
‘ಕಳೆದ ರಾತ್ರಿ ಸ್ಪೆಷಲ್​ ಆಗಿತ್ತು..’; ಸೈಮಾ ಡಬಲ್​ ಸಂಭ್ರಮದ ಬಗ್ಗೆ ರಶ್ಮಿಕಾ ಮನದ ಮಾತು​
Image
SIIMA Awards 2021: ಸೈಮಾ ಅವಾರ್ಡ್ಸ್​​ ವೇದಿಕೆಯ ಕಲರ್​ಫುಲ್​ ಫೋಟೋಗಳು
Image
SIIMA Awards 2021 Winners list: ಸೈಮಾ ವೇದಿಕೆಯಲ್ಲಿ ಮಿಂಚಿದ ತಾರೆಯರು; ಇಲ್ಲಿದೆ ಪ್ರಶಸ್ತಿ ಪಡೆದವರ ಲಿಸ್ಟ್​

ಮೊದಲ ದಿನದ ಕಾರ್ಯಕ್ರಮದಲ್ಲಿ ಹಲವು ಸ್ಟಾರ್​ಗಳ ಸಮಾಗಮ ಆಗಲಿದೆ. ‘ಕೆಜಿಎಫ್ 2’ ಮೂಲಕ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ಯಶ್ ಅವರು ಮುಖ್ಯ ಅತಿಥಿ ಆಗಿ ಬರುತ್ತಿದ್ದಾರೆ. ‘ಪುಷ್ಪ’ ಹೀರೋ ಅಲ್ಲು ಅರ್ಜುನ್ ಕೂಡ ಅತಿಥಿಗಳ ಸಾಲಿನಲ್ಲಿದ್ದಾರೆ. ವಿಜಯ್​ ದೇವರಕೊಂಡ, ತಮಿಳು ನಟ ಕಮಲ್ ಹಾಸನ್, ಬಾಲಿವುಡ್ ನಟ ರಣವೀರ್ ಸಿಂಗ್ ಕೂಡ ಮೊದಲ ದಿನ ಅತಿಥಿಯಾಗಿ ಬರಲಿದ್ದಾರೆ ಎಂದು ಬಾಲಿವುಡ್ ಬಾಕ್ಸ್​ ಆಫೀಸ್​ ತಜ್ಞ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: SIIMA Awards: ಮೊದಲ ಬಾರಿ ಬೆಂಗಳೂರಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ; ಪುನೀತ್​ಗೆ ವಿಶೇಷ ಗೌರವಾರ್ಪಣೆ

ಪ್ರತಿ ಬಾರಿ ಸೈಮಾ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲಾಗುತ್ತದೆ. ಈ ಬಾರಿಯೂ ಸೈಮಾ ಅನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿರುವುದರಿಂದ ಕನ್ನಡಿಗರ ಪಾಲಿಗೆ ವಿಶೇಷವಾಗಿದೆ.

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​