AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೈಮಾ’ ರೇಸ್​ನಲ್ಲಿ ಕನ್ನಡದ ಆರು ಸ್ಟಾರ್ ಹೀರೋಗಳು; ಪ್ರಶಸ್ತಿ ಯಾರಿಗೆ ಎಂದು ಹೇಳೋದೇ ಕಷ್ಟ

ಕನ್ನಡ ಸಿನಿಮಾ ಪಾಲಿಗೆ 2022 ಎನಿಸಿಕೊಂಡಿದೆ. ಹಲವು ಸೂಪರ್ ಹಿಟ್​ ಚಿತ್ರಗಳು ಆ ವರ್ಷ ರಿಲೀಸ್ ಆಗಿವೆ. ಅತ್ಯುತ್ತಮ ನಟ ಅವಾರ್ಡ್​ಗೆ ಭರ್ಜರಿ ಪೈಪೋಟಿ ಇದೆ.

‘ಸೈಮಾ’ ರೇಸ್​ನಲ್ಲಿ ಕನ್ನಡದ ಆರು ಸ್ಟಾರ್ ಹೀರೋಗಳು; ಪ್ರಶಸ್ತಿ ಯಾರಿಗೆ ಎಂದು ಹೇಳೋದೇ ಕಷ್ಟ
ಸೈಮಾ ಅವಾರ್ಡ್​ ನಾಮಿನೇಷನ್
ರಾಜೇಶ್ ದುಗ್ಗುಮನೆ
|

Updated on:Aug 06, 2023 | 1:17 PM

Share

2023ನೇ ಸಾಲಿನ ‘ಸೈಮಾ’ (SIIMA) ಅವಾರ್ಡ್​ ರ್ಯಕ್ರಮಕ್ಕೆ ಈಗಿನಿಂದಲೇ ಸಿದ್ಧತೆ ಆರಂಭ ಆಗಿದೆ. ಸೈಮಾ ಕಡೆಯಿಂದ ನಾಮಿನೇಷನ್ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ. ಇತ್ತೀಚೆಗೆ ಅತ್ಯುತ್ತಮ ಸಿನಿಮಾಗಳ ಪಟ್ಟಿ ರಿಲೀಸ್ ಮಾಡಲಾಗಿತ್ತು. ಈಗ ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ನಿರ್ದೇಶಕ ನಾಮಿನೇಷನ್ ಲಿಸ್ಟ್​ ಬಿಡುಗಡೆ ಮಾಡಲಾಗಿದೆ. ಕನ್ನಡದ ಸ್ಟಾರ್ ನಟರು ಹಾಗೂ ನಿರ್ದೇಶಕರು ಇದರಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಸೆಪ್ಟೆಂಬರ್ 15 ಹಾಗೂ 16ರಂದು ಪ್ರಶಸ್ತಿ ಸಮಾರಂಭ ದುಬೈನಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಕನ್ನಡ ಸಿನಿಮಾ ಪಾಲಿಗೆ 2022 ಎನಿಸಿಕೊಂಡಿದೆ. ಹಲವು ಸೂಪರ್ ಹಿಟ್​ ಚಿತ್ರಗಳು ಆ ವರ್ಷ ರಿಲೀಸ್ ಆಗಿವೆ. ಅತ್ಯುತ್ತಮ ನಟ ಅವಾರ್ಡ್​ಗೆ ಭರ್ಜರಿ ಪೈಪೋಟಿ ಇದೆ. ‘ಜೇಮ್ಸ್’ ಚಿತ್ರದ ನಟನೆಗೆ ಪುನೀತ್ ರಾಜ್​​ಕುಮಾರ್ ಹೆಸರು ಆಯ್ಕೆ ಆಗಿದೆ. ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ಇದು ಎಂಬುದಕ್ಕೆ ಅಭಿಮಾನಿಗಳಿಗೆ ಈ ಚಿತ್ರದ ಬಗ್ಗೆ ವಿಶೇಷ ಪ್ರೀತಿ ಇದೆ. ‘777 ಚಾರ್ಲಿ’ ಚಿತ್ರದ ನಟನೆಗೆ ರಕ್ಷಿತ್ ಶೆಟ್ಟಿ ಹೆಸರು ಆಯ್ಕೆ ಆಗಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಚಿತ್ರದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಅವರು ಹೆಸರು ಕೂಡ ಲಿಸ್ಟ್​ನಲ್ಲಿದೆ. ‘ವೇದ’ ಸಿನಿಮಾದ ನಟನೆಗೆ ಶಿವಣ್ಣ, ‘ವಿಕ್ರಾಂತ್ ರೋಣ’ ಚಿತ್ರದ ಅಭಿನಯಕ್ಕೆ ಸುದೀಪ್ ಹಾಗೂ ‘ಕೆಜಿಎಫ್ 2’ ಚಿತ್ರದಲ್ಲಿ ರಾಕಿಂಗ್ ಪರ್ಫಾರ್ಮೆನ್ಸ್ ನೀಡಿದ ಯಶ್ ಹೆಸರು ಕೂಡ ಪಟ್ಟಿಯಲ್ಲಿದೆ.

ಇದನ್ನೂ ಓದಿ:ಕೌಸಲ್ಯ ಸುಪ್ರಜಾ ರಾಮ ನನ್ನ ಈವರೆಗಿನ ಅತ್ಯುತ್ತಮ ಸಿನಿಮಾ; ಯಾಕೆಂದು ವಿವರಿಸಿದ ಡಾರ್ಲಿಂಗ್ ಕೃಷ್ಣ

ಈ ಬಾರಿ ಅತ್ಯುತ್ತಮ ನಟ ಅವಾರ್ಡ್ ಯಾರಿಗೆ ಸಿಗುತ್ತದೆ ಎಂದು ಹೇಳುವುದು ಕಷ್ಟಸಾಧ್ಯವೇ. ಎಲ್ಲಾ ಸಿನಿಮಾಗಳು ಅದ್ಭುತವಾಗಿ ಮೂಡಿ ಬಂದಿದ್ದು, ಅವಾರ್ಡ್​ ಯಾರಿಗೆ ಒಲಿಯುತ್ತದೆ ಎಂದು ಹೇಳುವುದು ಕಷ್ಟ.

ಇನ್ನು, ಅತ್ಯುತ್ತಮ ನಿರ್ದೇಶಕ ಅವಾರ್ಡ್​ಗೂ ಕಾಂಪಿಟೇಷನ್ ಇದೆ. ಅನೂಪ್ ಭಂಡಾರಿ (ವಿಕ್ರಾಂತ್ ರೋಣ), ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೇಲ್ 2),  ಕಿರಣ್ ರಾಜ್ (777 ಚಾರ್ಲಿ), ಪ್ರಶಾಂತ್ ನೀಲ್ (ಕೆಜಿಎಫ್ 2), ರಿಷಬ್ ಶೆಟ್ಟಿ (ಕಾಂತಾರ) ಹೆಸರು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:15 pm, Sun, 6 August 23

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ