AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೈಮಾ’ ರೇಸ್​ನಲ್ಲಿ ಕನ್ನಡದ ಆರು ಸ್ಟಾರ್ ಹೀರೋಗಳು; ಪ್ರಶಸ್ತಿ ಯಾರಿಗೆ ಎಂದು ಹೇಳೋದೇ ಕಷ್ಟ

ಕನ್ನಡ ಸಿನಿಮಾ ಪಾಲಿಗೆ 2022 ಎನಿಸಿಕೊಂಡಿದೆ. ಹಲವು ಸೂಪರ್ ಹಿಟ್​ ಚಿತ್ರಗಳು ಆ ವರ್ಷ ರಿಲೀಸ್ ಆಗಿವೆ. ಅತ್ಯುತ್ತಮ ನಟ ಅವಾರ್ಡ್​ಗೆ ಭರ್ಜರಿ ಪೈಪೋಟಿ ಇದೆ.

‘ಸೈಮಾ’ ರೇಸ್​ನಲ್ಲಿ ಕನ್ನಡದ ಆರು ಸ್ಟಾರ್ ಹೀರೋಗಳು; ಪ್ರಶಸ್ತಿ ಯಾರಿಗೆ ಎಂದು ಹೇಳೋದೇ ಕಷ್ಟ
ಸೈಮಾ ಅವಾರ್ಡ್​ ನಾಮಿನೇಷನ್
ರಾಜೇಶ್ ದುಗ್ಗುಮನೆ
|

Updated on:Aug 06, 2023 | 1:17 PM

Share

2023ನೇ ಸಾಲಿನ ‘ಸೈಮಾ’ (SIIMA) ಅವಾರ್ಡ್​ ರ್ಯಕ್ರಮಕ್ಕೆ ಈಗಿನಿಂದಲೇ ಸಿದ್ಧತೆ ಆರಂಭ ಆಗಿದೆ. ಸೈಮಾ ಕಡೆಯಿಂದ ನಾಮಿನೇಷನ್ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ. ಇತ್ತೀಚೆಗೆ ಅತ್ಯುತ್ತಮ ಸಿನಿಮಾಗಳ ಪಟ್ಟಿ ರಿಲೀಸ್ ಮಾಡಲಾಗಿತ್ತು. ಈಗ ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ನಿರ್ದೇಶಕ ನಾಮಿನೇಷನ್ ಲಿಸ್ಟ್​ ಬಿಡುಗಡೆ ಮಾಡಲಾಗಿದೆ. ಕನ್ನಡದ ಸ್ಟಾರ್ ನಟರು ಹಾಗೂ ನಿರ್ದೇಶಕರು ಇದರಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಸೆಪ್ಟೆಂಬರ್ 15 ಹಾಗೂ 16ರಂದು ಪ್ರಶಸ್ತಿ ಸಮಾರಂಭ ದುಬೈನಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಕನ್ನಡ ಸಿನಿಮಾ ಪಾಲಿಗೆ 2022 ಎನಿಸಿಕೊಂಡಿದೆ. ಹಲವು ಸೂಪರ್ ಹಿಟ್​ ಚಿತ್ರಗಳು ಆ ವರ್ಷ ರಿಲೀಸ್ ಆಗಿವೆ. ಅತ್ಯುತ್ತಮ ನಟ ಅವಾರ್ಡ್​ಗೆ ಭರ್ಜರಿ ಪೈಪೋಟಿ ಇದೆ. ‘ಜೇಮ್ಸ್’ ಚಿತ್ರದ ನಟನೆಗೆ ಪುನೀತ್ ರಾಜ್​​ಕುಮಾರ್ ಹೆಸರು ಆಯ್ಕೆ ಆಗಿದೆ. ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ಇದು ಎಂಬುದಕ್ಕೆ ಅಭಿಮಾನಿಗಳಿಗೆ ಈ ಚಿತ್ರದ ಬಗ್ಗೆ ವಿಶೇಷ ಪ್ರೀತಿ ಇದೆ. ‘777 ಚಾರ್ಲಿ’ ಚಿತ್ರದ ನಟನೆಗೆ ರಕ್ಷಿತ್ ಶೆಟ್ಟಿ ಹೆಸರು ಆಯ್ಕೆ ಆಗಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಚಿತ್ರದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಅವರು ಹೆಸರು ಕೂಡ ಲಿಸ್ಟ್​ನಲ್ಲಿದೆ. ‘ವೇದ’ ಸಿನಿಮಾದ ನಟನೆಗೆ ಶಿವಣ್ಣ, ‘ವಿಕ್ರಾಂತ್ ರೋಣ’ ಚಿತ್ರದ ಅಭಿನಯಕ್ಕೆ ಸುದೀಪ್ ಹಾಗೂ ‘ಕೆಜಿಎಫ್ 2’ ಚಿತ್ರದಲ್ಲಿ ರಾಕಿಂಗ್ ಪರ್ಫಾರ್ಮೆನ್ಸ್ ನೀಡಿದ ಯಶ್ ಹೆಸರು ಕೂಡ ಪಟ್ಟಿಯಲ್ಲಿದೆ.

ಇದನ್ನೂ ಓದಿ:ಕೌಸಲ್ಯ ಸುಪ್ರಜಾ ರಾಮ ನನ್ನ ಈವರೆಗಿನ ಅತ್ಯುತ್ತಮ ಸಿನಿಮಾ; ಯಾಕೆಂದು ವಿವರಿಸಿದ ಡಾರ್ಲಿಂಗ್ ಕೃಷ್ಣ

ಈ ಬಾರಿ ಅತ್ಯುತ್ತಮ ನಟ ಅವಾರ್ಡ್ ಯಾರಿಗೆ ಸಿಗುತ್ತದೆ ಎಂದು ಹೇಳುವುದು ಕಷ್ಟಸಾಧ್ಯವೇ. ಎಲ್ಲಾ ಸಿನಿಮಾಗಳು ಅದ್ಭುತವಾಗಿ ಮೂಡಿ ಬಂದಿದ್ದು, ಅವಾರ್ಡ್​ ಯಾರಿಗೆ ಒಲಿಯುತ್ತದೆ ಎಂದು ಹೇಳುವುದು ಕಷ್ಟ.

ಇನ್ನು, ಅತ್ಯುತ್ತಮ ನಿರ್ದೇಶಕ ಅವಾರ್ಡ್​ಗೂ ಕಾಂಪಿಟೇಷನ್ ಇದೆ. ಅನೂಪ್ ಭಂಡಾರಿ (ವಿಕ್ರಾಂತ್ ರೋಣ), ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೇಲ್ 2),  ಕಿರಣ್ ರಾಜ್ (777 ಚಾರ್ಲಿ), ಪ್ರಶಾಂತ್ ನೀಲ್ (ಕೆಜಿಎಫ್ 2), ರಿಷಬ್ ಶೆಟ್ಟಿ (ಕಾಂತಾರ) ಹೆಸರು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:15 pm, Sun, 6 August 23

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ