AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIIMA 2024: ಅತ್ಯುತ್ತಮ ಸಿನಿಮಾ ರೇಸ್​ನ​ಲ್ಲಿ ಕಾಟೇರ-ಕ್ರಾಂತಿ, ಅತ್ಯುತ್ತಮ ನಟ ಲಿಸ್ಟ್​ನಲ್ಲಿ ದರ್ಶನ್

2024ನೇ ಸಾಲಿನ ಸೈಮಾ ಅವಾರ್ಡ್ಸ್​ನ ನಾಮಿನೇಷನ್ ಪಟ್ಟಿ ಹೊರ ಬಿದ್ದಿದೆ. ‘ಕಾಟೇರ’ ಎಂಟು ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ’ ಸಿನಿಮಾ ಏಳು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಈ ಬಾರಿ ಸೈಮಾ ಅವಾರ್ಡ್ ಕಾರ್ಯಕ್ರಮ ಸೆಪ್ಟೆಂಬರ್ 14 ಹಾಗೂ 15ರಂದು ದುಬೈನಲ್ಲಿ ನಡೆಯಲಿದೆ.

SIIMA 2024: ಅತ್ಯುತ್ತಮ ಸಿನಿಮಾ ರೇಸ್​ನ​ಲ್ಲಿ ಕಾಟೇರ-ಕ್ರಾಂತಿ, ಅತ್ಯುತ್ತಮ ನಟ ಲಿಸ್ಟ್​ನಲ್ಲಿ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jul 17, 2024 | 10:01 AM

Share

2024ನೇ ಸಾಲಿನ ಸೈಮಾ (SIIMA 2024) ಅವಾರ್ಡ್ಸ್​ನ ನಾಮಿನೇಷನ್ ಪಟ್ಟಿ ಹೊರ ಬಿದ್ದಿದೆ. 2023ರಲ್ಲಿ ರಿಲೀಸ್ ಆದ ಸಿನಿಮಾಗಳು ಈ ಬಾರಿ ಸ್ಪರ್ಧೆಯಲ್ಲಿ ಇವೆ. ದಕ್ಷಿಣ ಭಾರತದ ಸಿನಿಮಾಗಳಿಗಾಗಿ ವಿಶೇಷವಾಗಿ ಆರಂಭಿಸಿದ ಅವಾರ್ಡ್ ಕಾರ್ಯಕ್ರಮ ಇದಾಗಿದೆ. ಈ ಬಾರಿ ಸೈಮಾ ನಾಮಿನೇಷನ್​ನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಹಲವು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಸದ್ಯ ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ಸಿನಿಮಾಗಳ ಪಟ್ಟಿಯನ್ನು ಮಾತ್ರ ಸೈಮಾದವರು ರಿಲೀಸ್ ಮಾಡಿದ್ದಾರೆ. ‘ಕಾಟೇರ’ ಎಂಟು ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ’ ಸಿನಿಮಾ ಏಳು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ.

ಅತ್ಯುತ್ತಮ ನಟ

ದರ್ಶನ್- ಕಾಟೇರ

ಧನಂಜಯ- ಗುರುದೇವ ಹೊಯ್ಸಳ

ರಾಜ್ ಬಿ ಶೆಟ್ಟಿ-ಟೋಬಿ

ರಮೇಶ್ ಅರವಿಂದ್- ಶಿವಾಜಿ ಸುರತ್ಕಲ್ 2

ರಕ್ಷಿತ್ ಶೆಟ್ಟಿ- ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ

ಶಿವರಾಜ್​ಕುಮಾರ್- ಘೋಸ್ಟ್

ಅತ್ಯುತ್ತಮ ಸಿನಿಮಾ

ಆಚಾರ್ ಆ್ಯಂಡ್ ಕೋ

ಕಾಟೇರ

ಕೌಸಲ್ಯ ಸುಪ್ರಜಾ ರಾಮ

ಕ್ರಾಂತಿ

ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ

ಇದನ್ನೂ ಓದಿ: ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ

ಅವಾರ್ಡ್ ಎಲ್ಲಿ?

ಈ ಬಾರಿ ಸೈಮಾ ಅವಾರ್ಡ್ ಕಾರ್ಯಕ್ರಮ ಸೆಪ್ಟೆಂಬರ್ 14 ಹಾಗೂ 15ರಂದು ದುಬೈನಲ್ಲಿ ನಡೆಯಲಿದೆ. ದುಬೈನ ವರ್ಲ್ಡ್ ಟ್ರೇಡ್ ಸೆಂಟರ್​ನಲ್ಲಿ ಕಾರ್ಯಕ್ರಮ ಜರುಗಲಿದೆ. ಕನ್ನಡದ ಬಹುತೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಅದೇ ರೀತಿ ತಮಿಳು, ಮಲಯಾಳಂ ಹಾಗೂ ತೆಲುಗು ಇಂಡಸ್ಟ್ರಿಯವರು ಕೂಡ ಬರಲಿದ್ದಾರೆ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?